ಹೆತ್ತವರ ಸಾಲಕ್ಕೆ ಮಗನಿಗೆ ಕಿರುಕುಳ; ಆತ್ಮಹತ್ಯೆಗೆ ಯತ್ನಿಸಿದ ಯುವಕ
Team Udayavani, Feb 10, 2024, 10:25 PM IST
ವಿಜಯಪುರ : ಪೋಷಕರು ಖಾಸಗಿ ಸಾಲ ಮಾಡಿದ್ದನ್ನು ತೀರಿಸಲು ವಿಳಂಬವಾಗಿದ್ದಕ್ಕೆ ಸಾಲಗಾರರು ಮಗನಿಗೆ ಕಿರುಕುಳ ನೀಡಿದ್ದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ವಿಜಯಪುರ ನಗರದ ಶಾಪೇಟೆ ನಿವಾಸಿ ಶಾರೂಖ್ ಸೌದಾಗರ್ ಎಂಬ ಯುವಕನೇ ಪೋಷಕರ ಸಾಲಕ್ಕೆ ತನಗೆ ನೀಡುತ್ತಿದ್ದ ಕಿರುಕುಳ ತಾಳದೇ ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ವಿಷ ಸೇವಿಸಿ ಆತ್ಮಹತ್ತೆಗೆ ಯತ್ನಿಸಿದ ಶಾರೂಖ್ನನ್ನು ಕೂಡಲೇ ಪೋಷಕರು ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.
ರುಬೀನಾ ಎಂಬ ಸ್ಥಳಿಯ ಮಹಿಳೆಯ ಬಳಿ ಶಾರೂಖ್ನ ಪೋಷಕರು ಸಾಲ ಪಡೆದಿದ್ದಾರೆ. ಸಾಲ ಪಡೆದ ಬಳಿಕ ಶಾರೂಖ್ನ ತಂದೆ ಮೆಹಬೂಬ್ಸಾಬ್ ಸಾಲ ಮರುಪಾತಿಸುವಲ್ಲಿ ವಿಳಂಬವಾಗಿದೆ. ಇದರಿಂದ ಕುಪಿತಗೊಂಡ ರುಬೀನಾ, ನಿನ್ನ ಪೋಷಕರು ಮಾಡಿರುವ ಸಾಲವನ್ನು ನೀನು ತೀರಿಸಬೇಕು ಎಂದು ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ.
ವಿಷಯ ತಿಳಿಯುತ್ತಲೇ ಸರ್ಕಾರಿ ಆಸ್ಪತ್ರೆಗೆ ಧಾವಿಸಿರುವ ವಿಜಯಪುಎ ಎಪಿಎಂಸಿ ಠಾಣೆ ಪೊಲೀಸರು, ಚಿಕಿತ್ಸೆ ಪಡೆಯುತ್ತಿರುವ ಶಾರುಖ್ನಿಂದ ಪ್ರಾಥಮಿಕ ಮಾಹಿತಿ ಪಡೆದಿದ್ದು, ಲಿಖಿತ ದೂರು ಪಡೆಯಲು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ