Vijayapura ಜಿಲ್ಲೆಯಲ್ಲಿ ಭರ್ಜರಿ ಮಳೆ:ಹಲವೆಡೆ ಅಪಾರ ಬೆಳೆಹಾನಿ
Team Udayavani, Nov 9, 2023, 11:46 PM IST
ವಿಜಯಪುರ : ಭೀಕರ ಬರದಿಂದ ತತ್ತರಿಸಿರುವ ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆ ಸುರಿದಿದೆ. ಇದರಿಂದಾಗಿ ಅಲ್ಲಲ್ಲಿ ಬೆಳೆದ ಬೆಳೆಯೂ ಹಾನಿಗೀಡಾಗಿದ್ದು, ಜಿಲ್ಲೆಯ ರೈತರನ್ನು ಮತ್ತಷ್ಟು ಕಂಗೆಡಿಸಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆಗಳಲ್ಲಿ ತುಂತುರು ಮಳೆ ಸುರಿದಿತ್ತು. ಆದರೆ ಗುರುವಾರ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ವಿಜಯಪುರ, ತಿಕೋಟ ಭಾಗದಲ್ಲಿ ಸುಮಾರು ಒಂದೆರಡು ಗಂಟೆಗೂ ಹೆಚ್ಚು ನಿರಂತರ ಸುರಿದ ಮಳೆ ಬಿಸಿಲಿಇಂದ ಕಂಗೆಟ್ಟಿದ್ದ ಇಳೆಯನ್ನು ತಂದು ಮಾಡಿದೆ.
ಉಳಿದಂತೆ ಬಸವನಬಾಗೇವಾಡಿ, ಇಂಡಿ, ಆಲಮೇಲ್, ಚಡಚಣ, ದೇವರಹಿಪ್ಪರಗಿ, ಬಬಲೇಶ್ವರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗದಲ್ಲಿ ಲಘು ಪ್ರಮಾಣದ ಮಳೆಯಾಗಿದೆ. ತಿಕೋಟಾ ಭಾಗದಲ್ಲಿ ಅಲ್ಪ ಸ್ವಲ್ಪ ಸುರಿದ ಮಳೆಗೆ ಬಿತ್ತನೆ ಮಾಡಿ, ಬೆಳೆದು ನಿಂತಿದ್ದ ಬಿಳಿಜೋಳ, ಮೆಕ್ಕೆಜೋಳ, ತೊಗರಿ ಸೇರಿದಂತೆ ಇತರೆ ಬೆಳೆಗಳು ಬಿರುಗಾಳಿ ಸಹಿತ ಸುರಿದ ಮಳೆಯ ರಭಸಕ್ಕೆ ನೆಲಕಚ್ಚಿವೆ.
ತಿಕೋಟಾ ಭಾಗದ ಹಲವು ರೈತರ ದ್ರಾಕ್ಷಿ ತೋಟಗಳಲ್ಲಿ ಬಹುತೇಕ ಕಟೆಗಳಲ್ಲಿ ಚಾಟ್ನಿ ಮಾಡಿದ್ದು, ಹೂವು ಬಿಡುತ್ತಿದ್ದ ಈ ಹಂತದಲ್ಲಿ ಸುರಿದ ಮಳೆಗೆ ದ್ರಾಕ್ಷಿ ಬೆಳೆಯೂ ಹಾನಿಯಾಗಿದೆ.
ಮುದ್ದೇಬಿಹಾಳ ತಾಲೂಕಿನ ಕೆಲವೆಡೆಬೊಣಗಲು ಹಾಕಿದ್ದ ಈರುಳ್ಳಿ ಬೆಳೆಗೆ ಮಳೆಯಿಂದ ಹಾನಿಯಾಗಿದೆ. ಕೆಲವು ಕಡೆಗಳಲ್ಲಿ ದ್ರಾಕ್ಷಿಯ ಕಂಬಗಳು ಬಾಗಿದ್ದು, ನೆಲಕ್ಕೆ ಉರುಳುವ ದುಸ್ಥಿತಿಯಲ್ಲಿವೆ.
ಹಿಂಗಾರು ಹಂಗಾಮಿನ ಕೊನೆಯಲ್ಲಿ ಸುರಿದ ಒಂದೇ ಮಳೆಗೆ ಜಿಲ್ಲೆಯಲ್ಲಿ ಬೆಳೆದು ನಿಂತಿದ್ದ ಅಲ್ಪಸ್ವಲ್ಪ ಬೆಳೆಯೂ ಹಾನಿಗೀಡಾಗಿದ್ದು, ರೈತರನ್ನು ಮತ್ತಷ್ಟು ಕಂಗೆಡುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ