1ರಿಂದ ಹೆಲ್ಮೆಟ್ ಕಡ್ಡಾಯ, ತಪ್ಪಿದರೆ ಕ್ರಮ: ಎಸ್ಪಿ ಆನಂದ
Team Udayavani, Dec 20, 2021, 5:57 PM IST
ವಿಜಯಪುರ: ಜಿಲ್ಲೆಯಲ್ಲಿ ಜನೇವರಿ 1ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ನಿಯಮ ಮೀರಿದವರ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವ ಕ್ರಮ ಅನಿವಾರ್ಯ ಎಂದು ವಿಜಯಪುರ ಎಸ್ಪಿ ಆನಂದಕುಮಾರ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತ ಜಾಗೃತಿ ಅಭಿಯಾನಕ್ಕಾಗಿ ಹೆಲ್ಮೆಟ್ದಾರಿ ಪೊಲೀಸರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೈಕ್ ಸವಾರರು ಜೀವ ಉಳಿಸಿಕೊಳ್ಳಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಹೆಲ್ಮೆಟ್ ರಹಿತವಾಗಿ ಬೈಕ್ ಸವಾರಿ ಮಾಡುವ ಸಾರ್ವಜನಿಕರಿಗೆ ಗುಲಾಬಿ ಹೂ ನೀಡಿ ಹೆಲ್ಮೆಟ್ ಧರಿಸುವ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ಕೆಲವರಿಗೆ ಉಚಿತವಾಗಿ ಹೆಲ್ಮೆಟ್ ನೀಡಿ, ಹೆಲ್ಮೆಟ್ ಧರಿಸಿಯೇ ಬೈಕ್ ಚಾಲನೆ ಮಾಡುವಂತೆ ಕೋರಿದರು.
ಜಿಲ್ಲೆಯಲ್ಲಿ ಡಿಸೆಂಬರ್ 31ರವರೆಗೆ ಹೆಲ್ಮೆಟ್ ಧರುಲಿಸುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಜನೇವರಿ 1ರೊಳಗೆ ದ್ವಿಚಕ್ರ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಸಬೇಕು. ಇಲ್ಲವಾದರೆ ಭಾರತೀಯ ಮೋಟರ್ ವೆಹಿಕಲ್ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಹೆಲ್ಮೆಟ್ ಇಲ್ಲದೇ ಸವಾರಿ ಮಾಡುವಾಗ ಅಪಘಾತವಾಗಿ ಜಿಲ್ಲೆಯಲ್ಲಿ 2019ರಲ್ಲಿ 130 ಸವಾರರು, 2020ರಲ್ಲಿ 185 ಸವಾರರು ಹಾಗೂ 2021ರಲ್ಲಿ 127 ಸವಾರರು ಮೃತಪಟ್ಟಿದ್ದಾರೆ. ಹೀಗಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸುವ ವಿಷಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency