ಗೋದಾವರಿ ಪುನರುಜ್ಜೀವನಕ್ಕೆ ಸಹಾಯ ಹಸ್ತ ಚಾಚಿ: ರಮಾಕಾಂತ


Team Udayavani, Aug 18, 2017, 12:07 PM IST

1_Godavari_River.jpg

ವಿಜಯಪುರ: ಪರಿಸರಕ್ಕೆ ಹಾನಿಕಾರಕ ರಾಸಾಯನಿಕಯುಕ್ತ ಪ್ಲಾಸ್ಟಿಕ್‌ ಸೇರ್ಪಡೆ ಪರಿಣಾಮ ಗೋದಾವರಿ ಉಸಿರುಗಟ್ಟಿಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಬದುಕಿಸಿಕೊಳ್ಳದಿದ್ದರೆ ಮಧ್ಯ ಭಾರತಕ್ಕೆ ಸುಧಾರಿಸಲಾಗದ ಜಲಕ್ಷಾಮ ಆವರಿಸಲಿದೆ ಎಂದು ಗೋದಾವರಿಯ ಸಮಿತಿ ಕಾರ್ಯದರ್ಶಿ ರಮಾಕಾಂತ ಕುಲಕರ್ಣಿ ಎಚ್ಚರಿಸಿದರು. ನಗರದ ಬಿಎಲ್‌ಡಿಇ ಸಂಸ್ಥೆ ಆವರಣದಲ್ಲಿ ನಡೆದ ಬರಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಜಲ ಸಮಾವೇಶದ ಎರಡನೇ ದಿನ ಗುರುವಾರ “ಗೋದಾವರಿ ನದಿ ಪುನರುಜ್ಜೀವನ ಯಾತ್ರಾ ಸಂವಾದ ಗೋಷ್ಠಿ’ಯಲ್ಲಿ ಅವರು ಮಾತನಾಡಿದರು.  ನದಿ ತೀರದ ನಗರ-ಹಳ್ಳಿಗಳ ಜನರು ಇಡೀ ವೈಯಕ್ತಿಕ ಬದುಕೇ  ದಾವರಿಯಲ್ಲೇ ನಡೆಯುತ್ತಿದೆ. ನಗರೀಕರಣದ ಅವೈಜ್ಞಾನಿಕ-ಕೊಳಚೆ, ಬಯಲು ಶೌಚಾಲಯಗಳಂಥ ಕಾರಣಕ್ಕೆ ಪವಿತ್ರ ಗೋದಾವರಿ ಲೀನವಾಗಿದ್ದಾಳೆ. ಈ ಜೀವನದಿ ಜೀವ ಕಳೆದುಕೊಂಡರೆ ಜೀವ ಸಂಕುಲವೇ ಸರ್ವನಾಶವಾಗಲಿದೆ. ಕೂಡಲೇ ಈ ದುರವಸ್ಥೆಗೆ ಕಡಿವಾಣ ಹಾಕಿ ಗೋದಾವರಿಯನ್ನು ರಕ್ಷಿಸಲು ಸ್ಥಳೀಯ ಆಡಳಿತ ವ್ಯವಸ್ಥೆ ಎಚ್ಚರಿಸಲು ಜನಾಗ್ರಹಕ್ಕಾಗಿ ಭಾರತೀಯರೆಲ್ಲರೂ ಸಹಾಯ ಹಸ್ತ ಚಾಚಿ ಎಂದರು.  ಕಲುಷಿತ ನೀರಿನಿಂದ ಮಾರಕ ರೋಗಗಳು ಆವರಿಸುತ್ತಿವೆ. ಈ ನದಿ ತೀರದಲ್ಲಿ ಮಣ್ಣು ಫಲವತ್ತತೆ ಕಳೆದುಕೊಂಡು ಬಂಜರಾಗುತ್ತಿದೆ. ಹೀಗಾಗಿ ಕೂಡಲೇ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವುದು ಅಗತ್ಯ. ಇದಕ್ಕಾಗಿ ಭಾರತೀಯ ಪ್ರತಿ ಒಕ್ಕೊರಲ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು. ಅನಿಕೇತ ಲೋಹಿಯಾ ಮಾತುನಾಡಿ, ಗೋದಾವರಿ ನದಿ ನೀರಿನ ಸ್ವತ್ಛತೆ ಕುರಿತು ಹಲವಾರು ಯೋಜನೆಗಳನ್ನು ಹಾಕಿಕೊಂಡು ಪೂರ್ವ ತಯಾರಿ ಮಾಡಿಕೊಳ್ಳಬೇಕು. ನೀರಿನ ಮಿತಬಳಕೆ ಕುರಿತು ಜನರಲ್ಲಿ ಸ್ಪಷ್ಟ ಮನವರಿಕೆ ಮಾಡಿಕೊಡಬೇಕು. ಮನುಷ್ಯ ಮಾತ್ರವಲ್ಲ, ಪಶು-ಪಕ್ಷಿ ಸೇರಿದಂತೆ ಪ್ರಕೃತಿಯ ಜೀವ ಸಂಕುಲಕ್ಕೇ ಅಪಾಯ ಎದುರಾಗಿದೆ. ಗೋದಾವರಿ ಸಂರಕ್ಷಣೆಗಾಗಿ ಸಂಘಟಿತ ಹೋರಾಟದ ಅಗತ್ಯವಿದೆ ಎಂದರು. ಸಂವಾದದಲ್ಲಿ ಪಾಲ್ಗೊಂಡಿದ್ದ ಅಂಬೇಜೋಗುರನ ಸುಭಾಶ ಶಿರಸಾಟ್‌, ಬುಂದೇಲಖಂಡದ ಸಂಜೀವ ಮಾತನಾಡಿ, ಸಂಪ್ರದಾಯದ ಹೆಸರಿನಲ್ಲಿ ನದಿ ತೀರದಲ್ಲಿ ಶವ ಸಂಸ್ಕಾರ ಮಾಡುವ, ಶವ ಸುಟ್ಟ ತ್ಯಾಜ್ಯವನ್ನೆಲ್ಲ ನದಿಗೆ ಎಸೆಯುವ ವ್ಯವಸ್ಥೆಗೆ ಕಡಿವಾಣ ಹಾಕಬೇಕಿದೆ. ಮೂಢನಂಬಿಕೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.