ಕೇಂದ್ರದ ನೀತಿ ವಿರೋಧಿಸಿ ರೈತರಿಂದ ಹೆದ್ದಾರಿ ತಡೆ


Team Udayavani, Nov 27, 2021, 5:48 PM IST

27protest

ವಿಜಯಪುರ: ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣ ಸೇರಿದಂತೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಂಯುಕ್ತ ಕಿಸಾನ್‌ ಮೋರ್ಚಾ, ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-13ರಲ್ಲಿರುವ ಟೋಲ್‌ ಕೇಂದ್ರದ ಎದುರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದ ರೈತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.

ರೈತ ಮುಖಂಡ ಭೀಮಶಿ ಕಲಾದಗಿ ನೇತೃತ್ವ ವಹಿಸಿ ಮಾತನಾಡಿ, ಮೂರು ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಪ್ರಧಾನಿ ಮೋದಿ ಮೌಖೀಕವಾಗಿ ಹೇಳಿರುವುದು ಸ್ವಾಗತಾರ್ಹ. ಆದರೆ ಕಾಯ್ದೆ ವಾಪಸ್‌ ಪಡೆದಿರುವುದು ಖಾತ್ರಿಯಾಗಲು ಜೊತೆಗೆ ಸಂವಿಧಾನಬದ್ಧವಾಗಿ ಆಗಬೇಕಾದರೆ ಅದು ಸಂಸತ್ತಿನಲ್ಲಿ ಅಂಗೀಕಾರವಾಗಬೇಕು. ಅದೇ ರೀತಿ ಇನ್ನೂ ಕೆಲವು ಬೇಡಿಕೆಗಳ ಬಗ್ಗೆ ಸ್ಪಷ್ಟತೆ ಇಲ್ಲ. ಒಂದು ವರ್ಷದ ಹೋರಾಟದಲ್ಲಿ ಸುಮಾರು 700 ಜನ ರೈತರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಎಲ್ಲ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಹೋರಾಟದಲ್ಲಿ ಮಡಿದ ರೈತರಿಗೆ ಸರ್ಕಾರ ಹುತಾತ್ಮ ರೈತರೆಂದು ಘೋಷಿಸುವಂತೆ ಒತ್ತಾಯಿಸಿದರು.

ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಸರ್ಕಾರ ಸ್ಥಳಾವಕಾಶ ನೀಡಬೇಕು. ಸರ್ಕಾರ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು. ವಿದ್ಯುತ್‌ ಕಾಯ್ದೆ 2020 ವಾಪಸ್‌ ಪಡೆಯಬೇಕು. ಹೋರಾಟ ನಿರತ ರೈತರ ಮೇಲೆ ಹಾಕಿರುವ ಮೊಕದ್ದಮೆ ತೆಗೆಯಬೇಕು. ರೈತರ ಮೇಲೆ ದಾಳಿ ಮಾಡಿ ರೈತರ ಕೊಲೆಗೆ ಕಾರಣರಾದವರಿಗೆ ಶಿಕ್ಷಿಸಬೇಕು ಎಂಬ ಹಕ್ಕೊತ್ತಾಯ ಮೊಳಗಿತು.

ಪ್ರತಿಭಟನೆಗೆ ಪ್ರಾಂತ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಪ್ರಗತಿಪರ ಸಂಘಟನೆಗಳ ವೇದಿಕೆ, ಮಹಿಳಾ ಸಂಘಟನೆ, ಜೆಸಿಟಿಯು ಕಾರ್ಮಿಕ ಸಂಘಟನೆ ಸೇರಿದಂತೆ ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ಈ ವೇಳೆ ಬಾಳು ಜೇವೂರ, ಅಣ್ಣಾರಾಯ ಈಳಿಗೇರ, ಶಕ್ತಿಕುಮಾರ, ಅಣ್ಣಾರಾಯ ಈಳಗೇರ, ಸಿ.ಎ. ಗಂಟೆಪ್ಪಗೋಳ, ಅಕ್ರಂ ಮಾಶ್ಯಾಳಕರ, ಶ್ರೀನಾಥ ಪೂಜಾರ, ಇರ್ಫಾನ್‌ ಶೇಖ, ಸುರೇಖಾ ರಜಪೂತ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನ, ಲಕ್ಷ್ಮಣ ಹಂದ್ರಾಳ, ಭಿ. ಭಗವಾನ್‌ ರೆಡ್ಡಿ, ಬಾಳು ಜೇವೂರ, ಮಹಾದೇವ ಲಿಗಾಡೆ, ಲಕ್ಷ್ಮಣ ಹಂದ್ರಾಳ, ತಿಪ್ಪರಾಯ ಹತ್ತರಕಿ, ಶ್ರೀಶೈಲ ನಿಮಂಗ್ರೆ, ಅಣ್ಣಾರಾಯ ಈಳಗೇರ, ರಾಮಣ್ಣ ಸಿರಾಗೋಳ, ಖಾಜೇಸಾಬ ಕೊಲ್ಹಾರ, ಶಕ್ತಿಕುಮಾರ ಉಕಮನಾಳ, ದಾನಮ್ಮ ಮಠ, ಸುರೇಖಾ ರಜಪೂತ, ರಾಜಮಾ ನದಾಫ್‌, ಸುಮಿತ್ರಾ ಗೊಣಸಗಿ, ಸುನಂದಾ ನಾಯಕ, ಭಾರತಿ ವಾಲಿ, ಮಲಿಕಸಾಬ್‌ ಟಕ್ಕಳಕಿ, ಸುವರ್ಣ ತಳವಾರ, ಸುರೇಖಾ ಕಡಪಟ್ಟಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.