ಪಾದಯಾತ್ರಿಗಳು ಕೋವಿಡ್ ನಿಯಮ ಪಾಲಿಸಲಿ
Team Udayavani, Mar 23, 2021, 6:55 PM IST
ವಿಜಯಪುರ: ಯುಗಾದಿ ಹಬ್ಬಕ್ಕಾಗಿ ಪಾದಯಾತ್ರೆ ಮೂಲಕ ಶ್ರೀಶೈಲಕ್ಕೆ ಬರುವ ಕರ್ನಾಟಕದ ಪಾದಯಾತ್ರಿಗಳು ಗಂಟಲು ದ್ರವ ಮಾದರಿ ಪರೀಕ್ಷಿಸಿಕೊಂಡು, ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ತರುವುದು ಕಡ್ಡಾಯ ಎಂದು ಆಂಧ್ರಪ್ರದೇಶ ಸರ್ಕಾರದ ಶ್ರೀಶೈಲಂ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ.ಎಸ್. ರಾಮರಾವ್ ಹೇಳಿದರು.
ಸೋಮವಾರ ವಿಜಯಪುರ ನಗರದ ಎಪಿಎಂಸಿ ಮಚಂìಟ್ ಅಸೋಸಿಯೇಶನ್ನ ನೀಲಕಂಠೇಶ್ವರ ಮಂಗಲ ಭವನದಲ್ಲಿ ನಡೆದ ಶ್ರೀಶೈಲ ಪಾದಯಾತ್ರಿ ಭಕ್ತರು, ದಾಸೋಹಿಗಳ ಸಭೆ, ಭ್ರಮರಾಂಬಿಕಾ-ಮಲ್ಲಿಕಾರ್ಜುನ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಈ ಸೂಚನೆ ನೀಡಿದರು.
ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಲಕ್ಷಾಂತತರ ಭಕ್ತರು ಶ್ರೀಶೈಲ ಕ್ಷೇತ್ರಕ್ಕೆ ಭೇಟಿ ನೀಡುತ್ತೀರಿ, ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕವೂ ಶ್ರೀಕ್ಷೇತ್ರ ದರ್ಶನಕ್ಕೆ ಬರುತ್ತೀರಿ. ಪ್ರತಿ ವರ್ಷದಂತೆ ಈ ವರ್ಷ ಮುಕ್ತ ಪ್ರವೇಶ ನೀಡುವುದಿಲ್ಲ. ಕ್ಷೇತ್ರಕ್ಕೆ ಬರುವಾಗ ಕೋವಿಡ್-19 ರೋಗ ಇಲ್ಲ ಎಂಬುದಕ್ಕೆ ಆರೋಗ್ಯ ಪರೀಕ್ಷೆಯ ಪ್ರಮಾಣ ಪತ್ರ ತರುವುದು ಕಡ್ಡಾಯ ಎಂದರು.
ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೊರೊನಾ ನಿಗ್ರಹಕ್ಕಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯ ನಿಭಾಯಿಸಬೇಕು. ಈ ವಿಷಯದಲ್ಲಿ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯ ಸರಕಾರಗಳು ರೂಪಿಸಿರುವ ಮುಂಜಾಗೃತಾ ನಿಯಮಗಳ ಆದೇಶವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಭಕ್ತರಿಗೆ ಸೂಚಿಸಿದರು.
ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ ಜಗದ್ಗುರು ಪೀಠದ ಚನ್ನಸಿದ್ದರಾಮೇಶ್ವರ ಪಂಡಿತರಾಧ್ಯ ಶ್ರೀಗಳು ಮಾತನಾಡಿ, ಯುಗಾದಿ ಹಬ್ಬದಲ್ಲಿ ಭಕ್ತ ಸಮೂಹ ಶ್ರೀಶೈಲದಲ್ಲಿ ಹೆಚ್ಚಾಗುವುದರಿಂದ ದೇಶದ ಅನೇಕ ಭಾಗಗಳಿಂದ ಭಕ್ತಾದಿಗಳು ಬರುತ್ತಾರೆ. ಕೋವಿಡ್-19 ಹೆಚ್ಚಾಗುತ್ತಿರುವ ಕಾರಣ ನಿಮ್ಮ ಆರೋಗ್ಯ ಹಿತದೃಷ್ಟಿಯಿಂದ ಸರಕಾರದ ನಿಯಮಾವಳಿಗಳನ್ನು ಪಾಲಿಸಬೇಕು. ಕ್ಷೇತ್ರಕ್ಕೆ ಆಗಮಿಸುವ ಪಾದಯಾತ್ರಿಕರಿಗೆ ಭೀಮನಕೊಳ್ಳದಲ್ಲಿ ದೇವರ ದರ್ಶನಕ್ಕೆ ಒಂದು ಗುರುತಿನ ಮುದ್ರೆಯನ್ನು ಕೊಡಲಾಗುವುದು ಕ್ಷೇತ್ರದಲ್ಲಿ ಪ್ರತಿಯೊಬ್ಬರು ಸ್ವತ್ಛತೆ ಶಿಸ್ತು ವಹಿಸಬೇಕೆಂದು ತಿಳಿಸಿದರು. ಅರ್ಚಕರಾದ ಜಿ.ವೀರಭದ್ರಯ್ಯ, ರಮೇಶ ಬಿದನೂರ, ರವೀಂದ್ರ ಬಿಜ್ಜರಗಿ ಸೇರಿದಂತೆ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು