ವಸತಿ ಯೋಜನೆ ಹಗರಣ: ತಪ್ಪಿತಸ್ಥರ ಮೇಲೆ ಕ್ರಿಮಿನಲ್‌ ಮೊಕದ್ದಮೆ


Team Udayavani, Oct 17, 2020, 5:43 PM IST

vp-tdy-1

ಮುದ್ದೇಬಿಹಾಳ: ತಾಲೂಕಿನ ಕೋಳೂರು ಗ್ರಾಮ ಪಂಚಾಯತ್‌ ವತಿಯಿಂದ ಕೋಳೂರು ತಾಂಡಾದಲ್ಲಿ ನಡೆದಿದೆ ಎನ್ನಲಾದ ವಸತಿ ಯೋಜನೆಗಳ ಹಗರಣ, ಅವ್ಯವಹಾರ ತನಿಖೆಯ ವೇಳೆ ಸತ್ಯ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ತನಿಖೆ ಪೂರ್ಣಗೊಂಡ ನಂತರ ತಪ್ಪಿತಸ್ಥರ ಮೇಲೆ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದರ ಜೊತೆಗೆ ದಂಡವನ್ನೂ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಾಪಂ ಇಒ ಶಶಿಧರ ಶಿವಪುರೆ ತಿಳಿಸಿದ್ದಾರೆ.

ಶುಕ್ರವಾರ ತಾಂಡಾಕ್ಕೆ ಭೇಟಿ ನೀಡಿ, ದೂರುದಾರ ಜಗದೀಶ ಚವ್ಹಾಣ ಅವರೊಂದಿಗೆ ಮನೆ ಹಂಚಿಕೆ ದಾಖಲೆ, ನೈಜತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನದು ತನಿಖೆಯ ಮೊದಲ ದಿನವಾಗಿದೆ. 15-20 ಮನೆಗಳ ಫಲಾನುಭವಿಗಳ ನೈಜತೆ ಪರಿಶೀಲಿಸಲಾಗಿದೆ. ವಿವಿಧ ವಸತಿ ಯೋಜನೆಗಳಡಿ ಒಟ್ಟು 135 ಮನೆಗಳ ಅವ್ಯವಹಾರ ನಡೆದಿದೆ ಎಂದು ದೂರುದಾರರು ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಇಂದಿನ ಪರಿಶೀಲನೆಯಲ್ಲಿ 4-5 ಮನೆಗಳು ಮಾತ್ರ ನೈಜತೆಯಿಂದ ಕೂಡಿದ್ದು ಉಳಿದೆಲ್ಲವೂ ಭೋಗಸ್‌ ಎನ್ನುವುದು ಪತ್ತೆ ಆಗಿದೆ ಎಂದರು.

ವಸತಿ ಯೋಜನೆ ಅಡಿ ಹಂಚಿಕೆಯಾದ ಬಹಳಷ್ಟು ಮನೆಗಳ ಜಿಪಿಎಸ್‌ ಮಾಡಿಲ್ಲ. ಕೆಲವರು ಮನೆ ಕಟ್ಟಿಕೊಂಡು ವಾಸವಾಗಿದ್ದರೂ ಅವರಿಗೆ ಅದು ವಸತಿ ಯೋಜನೆಯಡಿ ಮಂಜೂರಾದ ಮನೆ ಎನ್ನುವುದು ಗೊತ್ತಿಲ್ಲ. ಇನ್ನೂ ಕೆಲವರು ಸ್ವಂತ ಹಣ ಖರ್ಚು ಮಾಡಿಮನೆ ಕಟ್ಟಿಕೊಂಡಿದ್ದರೂ ಸರ್ಕಾರದ ಸಹಾಯಧನ ಅವರ ಹೆಸರಿಗೆ ಬರದೆ ಬೇರೆಯವರ ಹೆಸರಲ್ಲಿ ಖರ್ಚು ಹಾಕಲಾಗಿದೆ. ಮನೆಗಳು ಇಲ್ಲದೇ ಬಿಲ್‌ ಎತ್ತಿರುವ ಪ್ರಕರಣಗಳೂ ಕಂಡು ಬಂದಿವೆ. ಹೀಗಾಗಿ ಇದೊಂದು ಭಾರೀ ಹಗರಣ ಎನ್ನಿಸಿಕೊಂಡಿದೆ.

ತನಿಖೆ ಸಮಗ್ರ ವರದಿಯನ್ನು ಜಿಪಂ ಸಿಇಒಗೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಕೆಲವು ಸರ್ಕಾರಿ ನೌಕರರಿಗೆ, ಸರ್ಕಾರದ ನಿಯಮಕ್ಕಿಂತಲೂ ಹೆಚ್ಚು ಆಸ್ತಿ ಹೊಂದಿದವರಿಗೆ ಮನೆಗಳು ಹಂಚಿಕೆಯಾಗಿವೆ ಎನ್ನುವುದುಮೇಲ್ನೋಟಕ್ಕೆ ಕಂಡು ಬಂದಿದೆ. ಅರ್ಹತೆ ಇಲ್ಲದಿದ್ದರೂ ಇವರಿಗೆ ಮನೆ ಹಂಚಿಕೆ ಮಾಡಿದ್ದು ಕಾನೂನು ಬಾಹಿರ. ಮನೆ ಹಂಚಿಕೆ ಸಂದರ್ಭ ಕರ್ತವ್ಯದಲ್ಲಿದ್ದ ಪಿಡಿಒ, ಅಧಿಕಾರದಲ್ಲಿದ್ದ ಅಧ್ಯಕ್ಷರು, ಬಿಲ್‌ ಪಡೆದುಕೊಂಡಿರುವ ಖೊಟ್ಟಿ ಫಲಾನುಭವಿಗಳು ಹೀಗೆ ಹಲವರು ಹಗರಣದಲ್ಲಿ ಶಾಮೀಲಾಗಿರುವ ಶಂಕೆ ಇದ್ದು ಸಂಪೂರ್ಣ ತನಿಖೆಯ ನಂತರ ನಿಖರ ಮಾಹಿತಿ ಬೆಳಕಿಗೆ ಬರಲಿದೆ ಎಂದರು.

ಹೇಳಿಕೆ ದಾಖಲಿಸಿಕೊಂಡ ತಂಡ: ಇದಕ್ಕೂ ಮುನ್ನ ತಾಪಂ ಇಒ ಶಶಿಧರ ಶಿವಪುರೆ ನೇತೃತ್ವದ ತನಿಖಾ ತಂಡದಲ್ಲಿದ್ದ ಅಕ್ಷರ ದಾಸೋಹ ಎಡಿ ಸಂಗಮೇಶಹೊಲ್ದೂರ, ಪಿಡಿಒಗಳಾದ ಪಿ.ಎಸ್‌. ಕಸನಕ್ಕಿ, ವೀರೇಶ ಹೂಗಾರ, ನಿರ್ಮಲಾ ತೋಟದಅವರು ಫಲಾನುಭವಿಗಳ ಪಟ್ಟಿ ಹಿಡಿದುಕೊಂಡು ಮನೆಮನೆಗೆ ತೆರಳಿ ನೈಜತೆ ಪರಿಶೀಲಿಸಿ,ಹೇಳಿಕೆ ದಾಖಲಿಸಿಕೊಂಡರು. ಮನೆ ಹಂಚಿಕೆಗೆ ಸಂಬಂಧಿಸಿದ ಕಾಗದ ಪತ್ರಗಳ ಪ್ರತಿಗಳನ್ನು ಪಡೆದುಕೊಂಡರು. ವಸತಿಗಾಗಿ ಅರ್ಜಿ ಸಲ್ಲಿಸಿದ್ದರೂ ಸೌಲಭ್ಯವಂಚಿತರಾದವರ ಹೇಳಿಕೆ ದಾಖಲಿಸಿಕೊಂಡರು.

ತಾಪಂ ಸದಸ್ಯ ಪ್ರೇಮಸಿಂಗ್‌ ಚವ್ಹಾಣ, ದೂರುದಾರ ಜಗದೀಶ ಚವ್ಹಾಣ, ತಾಂಡಾದ ಪ್ರಮುಖರಾದ ತುಳಜಾರಾಮ ಚವ್ಹಾಣ, ವಿಕಾಸ ಚವ್ಹಾಣ, ಯಮನೂರಿ ಚವ್ಹಾಣ, ಭೀಮಸಿಂಗ್‌ ಚವ್ಹಾಣ, ಅನಿಲ ಜಾಧವ, ಸೋಮಸಿಂಗ ಚವ್ಹಾಣ, ನೇತಾಜಿ ಚವ್ಹಾಣ, ಪ್ರಕಾಶ ಚವ್ಹಾಣ, ದೀಪಕ ಚವ್ಹಾಣ, ಸುಭಾಷ್‌ ದಿಂಡವಾರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.