ಸಿಎಂ ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ


Team Udayavani, Aug 19, 2017, 3:25 PM IST

vijayapur 3.jpg

ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಡಿಬಿಡಿಯಲ್ಲಿ ಬಾಗಿನ ಅರ್ಪಿಸಿದ್ದು ಸ್ಥಳೀಯ ರೈತಾಪಿ ವರ್ಗದ ಕೋಪಕ್ಕೆ ಕಾರಣವಾಯಿತು. ಶುಕ್ರವಾರ ಮಧ್ಯಾಹ್ನ 12:10ಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ತುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿ 12:40ಕ್ಕೆ ಮರಳಿ ಹೆಲಿಕಾಪ್ಟರ್‌ ಮೂಲಕ ವಿಜಯಪುರಕ್ಕೆ ತೆರಳಿದರು. ಅದ್ಧೂರಿ ಸ್ವಾಗತ: ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಯ ಜಿಲ್ಲಾಡಳಿತ, ಕೃಷ್ಣಾ ಮೇಲ್ದಂಡೆ ಯೋಜನೆ, ಕೃಷ್ಣಾಭಾಗ್ಯ ಜಲ ನಿಗಮ ಹಾಗೂ ಅವಳಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರುಗಳು, ಶಾಸಕರು ಸೇರಿದಂತೆ ವಿವಿಧ ಗಣ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿದ ನಂತರ ಹೆಲಿಪ್ಯಾಡ್‌ನ‌ಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ ಹಾಗೂ ವಿವಿಧ ಗಣ್ಯರು ಸನ್ಮಾನಿಸಿದರು. ರಾರಾಜಿಸಿದ ಕಟೌಟ್‌: ಹೆಲಿಪ್ಯಾಡ್‌ನಿಂದ ಜಲಾಶಯಕ್ಕೆ ಮುಖ್ಯಮಂತ್ರಿಗಳು ಆಗಮಿಸುವ ರಸ್ತೆಯಲ್ಲಿ ಮುಖ್ಯಮಂತ್ರಿಗಳ ಹಾಗೂ ಅವಳಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರುಗಳ ಮತ್ತು ಬಸವನ ಬಾಗೇವಾಡಿ ಹಾಗೂ ಬಾಗಲಕೋಟೆ ಮತಕ್ಷೇತ್ರಗಳ ಶಾಸಕರಾದ ಶಿವಾನಂದ ಪಾಟೀಲ, ಎಚ್‌.ವೈ. ಮೇಟಿ ಅವರ ಕಟೌಟ್‌ ರಾರಾಜಿಸಿದವು. ವಾದ್ಯಮೇಳ: ಬಾಗಿನ ಅರ್ಪಿಸಲು ಆಗಮಿಸಿದ ಗಣ್ಯರ ಸ್ವಾಗತಕ್ಕೆ ಹೆಗಡಿಹಾಳದ ಲಗಮಾದೇವಿ ಡೊಳ್ಳಿನ ವಾಲಗ ಮೇಳದವರಿಂದ ಡೊಳ್ಳು ಕುಣಿತ ಹಾಗೂ ಉಕ್ಕಲಿಯ ಯಮನಪ್ಪ ಭಜಂತ್ರಿ ನಾಗರಾಜ ಕನ್ನೂರ ಅವರಿಂದ ಶಹನಾಯಿ ವಾದನ ಹಾಗೂ ಮುತ್ತಗಿಯ ವೀರಭದ್ರೇಶ್ವರ ಕರಡಿ ಮಜಲು ಸಂಘದವರಿಂದ ಕರಡಿ ಮಜಲು ನಡೆಯಿತು.

ಮುಖ್ಯಮಂತ್ರಿಗಳಿಗೆ ಹರಿದು ಬಂತು ಮನವಿಗಳ ಮಹಾಪೂರ
ಆಲಮಟ್ಟಿ: ಕೃಷ್ಣೆ ಜಲನಿಧಿ ಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ನಂಜುಂಡಸ್ವಾಮಿ ಬಣ) ಮನವಿ ಸಲ್ಲಿಸಿ ಜಿಲ್ಲೆ ಸತತ ಮೂರು ವರ್ಷದಿಂದ ಬರಗಾಲಕ್ಕೆ ತುತ್ತಾಗಿದೆ. ಈ ವರ್ಷ ಕೂಡ ಜಿಲ್ಲೆಗೆ ಬರಗಾಲ ಘೋಷಣೆ ಮಾಡಬೇಕು. ಕೂಡಗಿ ಎನ್‌ ಟಿಪಿಸಿ ಸ್ಥಾವರದ ಕೇವಲ 10 ಕಿಮೀ ಸುತ್ತಲಿನ ಗ್ರಾಮ ಅಭಿವೃದ್ಧುಯಾಗುತ್ತಿದ್ದು ಇದನ್ನು 25 ಕಿಮೀವರೆಗೆ ವಿಸ್ತರಿಸಬೇಕು. ಆಲಮಟ್ಟಿ ಜಲಾಶಯ ನಿರ್ಮಾಣಕ್ಕಾಗಿ
ಸರ್ವಸ್ವ ಕಳೆದುಕೊಂಡಿರುವ ಅವಳಿ ಜಿಲ್ಲೆಯ ರೈತರ ಹಿತ ಕಾಪಾಡಲು ಎಲ್ಲ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಗೆ ದಿನದ 24 ಗಂಟೆ ವಿದ್ಯುತ್‌ ಪೂರೈಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮೀಸಲಾತಿ ಒದಗಿಸಿ: ಗ್ರಾಪಂ ಸದಸ್ಯ ಕಲ್ಲಪ್ಪ ಕುಂಬಾರ ಸಲ್ಲಿಸಿದ ಮನವಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಹಂತ-1 ಹಾಗೂ 2ರಲ್ಲಿ ಸುಮಾರು 176 ಗ್ರಾಮಗಳು ಬಾಧಿ ತಗೊಂಡು 136 ಗ್ರಾಮಗಳು ಪುನರ್ವಸತಿ ಕೇಂದ್ರಗಳಾಗಿ ಯೋಜನೆಯಿಂದ ಬಾಧಿತಗೊಂಡು ಸಂತ್ರಸ್ತರು ವಾಸವಾಗಿದ್ದಾರೆ. ಅವರ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಯೋಜನಾ ನಿರಾಶ್ರಿತರ ಮೀಸಲಾತಿ ಮುಂದುವರಿಸಬೇಕು ಮತ್ತು ಯೋಜನೆ ಇನ್ನೂ ಮುಂದುವರಿದಿದ್ದು ಮೂರನೇ ಹಂತದ ಸಂತ್ರಸ್ತರಿಗೆ ನೀಡುವ ಸೌಲಭ್ಯಗಳನ್ನು ಈ ಹಿಂದೆ ಭೂಮಿ ಕಳೆದುಕೊಂಡವರಿಗೆ ಒದಗಿಸಬೇಕು ಎಂದು ವಿನಂತಿಸಿದ್ದಾರೆ.  ಸಂಯುಕ್ತ ತಾಲೂಕು ರಚಿಸಿ: ತಾಪಂ ಸದಸ್ಯ ಮಲ್ಲು ರಾಠೊಡ ಮನವಿ ಸಲ್ಲಿಸಿ, ಆಲಮಟ್ಟಿ ದೇಶದ ಬೃಹತ್‌ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ. ಬೃಹತ್‌ ಜಲಾಶಯ, ವಿವಿಧ ಉದ್ಯಾನ, ಸಂಗೀತ ನೃತ್ಯ ಕಾರಂಜಿ ಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳವಾದ್ದರಿಂದ ನೆಚ್ಚಿನ ಪ್ರವಾಸಿ ತಾಣಗಳಲ್ಲೊಂದಾಗಿ ಅರಳದಿನ್ನಿ, ಚಿಮ್ಮಲಗಿ, ಮರಿಮಟ್ಟಿ, ದೇವಲಾಪುರಗಳನ್ನು ಒಡಲಲ್ಲಿರಿಸಿಕೊಂಡು ಸುಮಾರು 27 ಸಾವಿರ ಜನಸಂಖ್ಯೆ ನಾಗಾಲೋಟದಲ್ಲಿ ಬೆಳೆಯುತ್ತಿದೆ. ಆಲಮಟ್ಟಿ-ನಿಡಗುಂದಿ ಗ್ರಾಮಗಳು ಈಗಾಗಲೇ ಒಂದಕ್ಕೊಂದು ಕೂಡಿಕೊಂಡಿವೆ. ಆಲಮಟ್ಟಿಯನ್ನು ನಿಡಗುಂದಿಯೊಂದಿಗೆ ಸಂಯೋಜಿಸಿ ಆಲಮಟ್ಟಿ-ನಿಡಗುಂದಿ ತಾಲೂಕಾಗಿ ರಚಿಸಬೇಕು. ಸಂತ್ರಸ್ತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು, ಕೆಬಿಜೆಎನ್‌ಎಲ್‌ ಆಸ್ಪತ್ರೆ ಸಾರ್ವತ್ರೀಕರಣ ಮಾಡಬೇಕು. ಪಶು ಆಸ್ಪತ್ರೆ ಆರಂಭಿಸಬೇಕು. ವಿಜ್ಞಾನ ಮಹಾವಿದ್ಯಾಲಯ
ಹಾಗೂ ಪಾಲಿಟೆಕ್ನಿಕ್‌ ಕಾಲೇಜು ಆರಂಭಿಸಬೇಕು. ರೈಲ್ವೆ ಕೆಳಸೇತುವೆ ನಿರ್ಮಿಸಬೇಕು. ರಾಷ್ಟ್ರೀಯ ಹೆದ್ದಾರಿ ಯಲಗೂರ ಕ್ರಾಸ್‌ನಿಂದ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಮಹಾದ್ವಾರದವರೆಗೆ ದ್ವಿಪಥ ನಿರ್ಮಿಸಿ ಮದ್ಯದಲ್ಲಿ ವಿದ್ಯುದ್ದೀಪ ಅಳವಡಿಸಬೇಕು. ಜಲಾಶಯ ಹಾಗೂ ಈ ಭಾಗದ ಜನತೆ ಹಿತಕ್ಕಾಗಿ ಅಗ್ನಿಶಾಮಕ ಠಾಣೆ ನಿರ್ಮಿಸಬೇಕು. ಗ್ರಾಪಂನ್ನು ಪಪಂ ಆಗಿ ಪರಿವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.