ಅನರ್ಹ ಶಾಸಕರ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ಜಡ್ಜ್ ಅಲ್ಲ – ಯತ್ನಾಳ
Team Udayavani, Sep 23, 2019, 6:36 PM IST
ವಿಜಯಪುರ : ಅನರ್ಹ ಶಾಸಕರ ವಿಷಯ ಸುಪ್ರೀಂ ಕೋರ್ಟ್ ನಲ್ಲಿ ಇದ್ದು, ತೀರ್ಪು ಯಾರ ಪರ ಬರಲಿದೆ ಎಂದು ಹೇಳಲು ನಾನು ಜಡ್ಜ್ ಅಲ್ಲ. ನ್ಯಾಯಾಲಯದಲ್ಲಿ ಇರುವ ಪ್ರಕರಣದ ಕುರಿತು ನಾನು ತೀರ್ಪು ಹೇಳಿದ್ದರೆ ಕೋರ್ಟ್ ನನ್ನನ್ನು ಜೈಲಿಗೆ ಹಾಕುತ್ತದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾರ್ಮಿಕ ಪ್ರತಿಕ್ರಿಯೆ ನೀಡಿದರು.
ಸೋಮವಾರ ನಗರದಲ್ಲಿ ಪತ್ರಕರ್ತರು ಅನರ್ಹ ಶಾಸಕರ ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ ಅವರು, ಒಳ್ಳೆಯ ಫಲಿತಾಂಶ ಬರುತ್ತದೆ. ಅನರ್ಹ ಶಾಸಕರಿಗೆ ಪುನರ್ಜನ್ಮ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.
ಉಪ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತದೆ ಎಂದು ಹೇಳಲು ನಾನು ಭವಿಷ್ಯ ಹೇಳುವ ಜ್ಯೋತಿಷಿಯೂ ಅಲ್ಲ. ಈ ಕುರಿತು ಜನರು ತೀರ್ಪು ಕೊಡುತ್ತಾರೆ ಅಲ್ಲಿಯವರೆಗೆ ಕಾದು ನೋಡೋಣ ಎಂದರು.
ತಮ್ಮ ನೇತೃತ್ವ ಕಾಂಗ್ರೆಸ್ ಮೈತ್ರಿ ಸರಕಾರ ಕೆಟ್ಟ ಸರ್ಕಾರವಾಗಿತ್ತು ಎಂದು ಒಪ್ಪಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆತ್ಮಾವಲೋಕನ ಆಗಿದ್ದು, ಈಗ ಜ್ಞಾನೋದಯ ವಾಗಿದೆ ಎಂದು ಟಾಂಗ್ ಕೊಟ್ಟು ಹೇಳಿದರು.
ಈಗ ಅವರೇ ತಮಗೆ, ತಮ್ಮ ಪಕ್ಷಕ್ಕೆ ಕಾಂಗ್ರೆಸ್ ದೊಡ್ಡ ವೈರಿ, ಬಿಜೆಪಿ ವೈರಿ ಅಲ್ಲವೆಂದು ಹೇಳಿಕೊಳ್ಳುವ ಸ್ಥಿತಿ ಬಂದಿದೆ ಎಂದು ವ್ಯಂಗ್ಯ ವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ