ನೀರಾವರಿ ಕಾಮಗಾರಿ ಕಳಪೆಯಾದರೆ ಕ್ರಮ


Team Udayavani, Jun 29, 2018, 12:19 PM IST

vij-3.jpg

ಮುದ್ದೇಬಿಹಾಳ: ತಾಲೂಕಿನ ನೀರಾವರಿ ಕಾಮಗಾರಿಗಳನ್ನು ಕಳಪೆಯಾಗಿ ಕೈಗೊಂಡರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ನೀರಾವರಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆ ಅಡಿ ಮುಖ್ಯ ಕಾಲುವೆ, ಡಿಸ್ಟ್ರಿಬ್ಯೂಟರ್‌, ಲ್ಯಾಟರಲ್‌, ಹೊಲಗಾಲುವೆ, ಕೆರೆ ತುಂಬುವ
ಯೋಜನೆ ಮುಂತಾದ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರ ಬಗ್ಗೆ ನನಗೆ ಗೊತ್ತಿದೆ. ವಿನಾಕಾರಣ ಅವರಿಗೆ ತೊಂದರೆ ಕೊಡೋದು, ಕಳಪೆ ಕಾಮಗಾರಿ ವಿಚಾರಣೆ ನಡೆಸುವುದು ನನಗೆ ಇಷ್ಟವಿಲ್ಲ. ಈಗ ಕೆಲಸ ಮಾಡುವವರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕೆಬಿಜೆಎನ್ನೆಲ್‌ ಗುತ್ತಿಗೆದಾರರ ಕಂಪನಿಯಾಗಿದೆ ಎಂದು ಅಸಹನೆ ತೋಡಿಕೊಂಡ ಶಾಸಕರು, ಎಎಲ್‌ಬಿಸಿಯಿಂದ ಶೇ. 70ರಷ್ಟು ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಯರಝರಿವರೆಗೆ ನೀರಾವರಿಯಾಗಿದೆ. ಕೋಳೂರ ಬಳಿ ಅಲ್ಲಲ್ಲಿ ನೀರು ಹೋಗುತ್ತದೆ. ಎಎಲ್‌ಬಿಸಿ ಕಮಾಂಡಿಂಗ್‌ ಪ್ರದೇಶಕ್ಕೆ ನೀರು ತಲುಪುವ ವ್ಯವಸ್ಥೆ ಕೈಗೊಳ್ಳಬೇಕು.

ಇದಕ್ಕಾಗಿ ಎಎಲ್‌ಬಿಸಿ ಮುಖ್ಯ ಕಾಲುವೆ ಬಲಪಡಿಸಬೇಕು. ಎಫ್‌ ಐಸಿ, ಡಿಸ್ಟ್ರೀಬ್ಯೂಟರ್‌, ಲ್ಯಾಟರಲ್‌ ಹೊಸದಾಗಿ ನಿರ್ಮಿಸಬೇಕು. ಇದಕ್ಕಾಗಿ ಹೆಚ್ಚುವರಿ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದರು.

ತಾಲೂಕು ವ್ಯಾಪ್ತಿಯ ಆಲಮಟ್ಟಿ ಎಡದಂಡೆ ಕಾಲುವೆ, ಚಿಮ್ಮಲಗಿ ಪೂರ್ವ ಕಾಲುವೆ ಅಡಿ ನೀರಾವರಿ ಕಾಮಗಾರಿ ಗುಣಮಟ್ಟ ಕಳಪೆ ಆಗುವುದನ್ನು ಸಹಿಸುವುದಿಲ್ಲ ಬೃಹತ್‌ ನೀರಾವರಿ ಯೋಜನೆಗಳಿಗೆ ಭೂಮಿ ಕಳೆದುಕೊಂಡ ಪ್ರತಿಯೊಬ್ಬ ಸಂತ್ರಸ್ತ ರೈತನ ಜಮೀನಿಗೆ ನೀರು ಕೊಡಬೇಕು. ಇದು ಸರ್ಕಾರದ ಕರ್ತವ್ಯವೂ ಆಗಿದೆ. ನೀರಾವರಿ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಕೆಲವು ಕಾಮಗಾರಿ, ಕೆರೆ ತುಂಬುವ ಯೋಜನೆ ವಿಷಯದಲ್ಲಿ ಅಧಿಕಾರಿಗಳು ಶಾಸಕರಿಗೆ ಕಾನೂನಿನ ನಿಯಮ ತಿಳಿಸಿಕೊಡಲು ಬಂದಾಗ ಸಿಡಿಮಿಡಿಗೊಂಡ ಶಾಸಕರು ನನಗೆ ಕಾನೂನು ಪಾಠ ಹೇಳಬೇಡಿ. ಒಟ್ಟಾರೆ ನೀರಾವರಿ ಕೆಲಸ ಆಗಬೇಕು ಎಂದರು. 

ನೀರಾವರಿ ಉದ್ದೇಶಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತ ರೈತರು ಕನಿಷ್ಠ ಮೂಲಸೌಕರ್ಯಗಳಿಲ್ಲದೇ
ಹತಾಶರಾಗಿದ್ದಾರೆ. ಪುನರ್ವಸತಿ ಹಳ್ಳಿಗಳು ದನದ ಕೊಟ್ಟಿಗೆಯಂತಿವೆ. ಕಾಲುವೆ ಕೊನೆ ಹಂತದ
ಜಮೀನಿನವರೆಗೂ ನೀರು ಹೋಗುತ್ತಿಲ್ಲ. ಅಧಿಕಾರಿಗಳು ಇರೋದು ರೈತರ ಸಲುವಾಗಿಯೇ ಹೊರತು ಗುತ್ತಿಗೆದಾರರ ಸಲುವಾಗಿ ಅಲ್ಲ ಅನ್ನೋದನ್ನ ಅರಿಯಿರಿ ಎಂದು ಎಂದರು.

ತಾಲೂಕಿನಲ್ಲಿ ಇರುವ ಕೆರೆಗಳ ಮಾಹಿತಿ ಪಡೆದ ಶಾಸಕರು, ಮುದ್ದೇಬಿಹಾಳ ಪಟ್ಟಣಕ್ಕೆ ಹತ್ತಿರ ಇರುವ ಗೆದ್ದಲಮರಿ ಕೆರೆಯನ್ನು ಪಿಕ್ನಿಕ್‌ ಸ್ಪಾಟ್‌ ಮಾಡುವ ಯೋಚನೆ ಇದೆ. ಈಗಾಗಲೇ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ವಿಜಯಪುರದ ಬೇಗಂ ತಾಲಾಬ್‌ ಮಾದರಿಯಲ್ಲಿ ಅಭಿವೃದ್ದಿಪಡಿಸಬೇಕಿದೆ. ಇದಕ್ಕಾಗಿ ಕೆರೆ ಹೂಳೆತ್ತುವುದು ಸೇರಿ ಅಗತ್ಯ ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸಬೇಕು ಎಂದರು. 

ಗೆದ್ದಲಮರಿ, ಅಡವಿ ಹುಲಗಬಾಳ, ಮಾದಿನಾಳ, ಹೊಕ್ರಾಣಿ, ಮಡಿಕೇಶ್ವರ ಕೆರೆಗಳು ದೊಡ್ಡ ಕೆರೆಗಳು. ಇವುಗಳನ್ನು
ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ ಇಲಾಖೆಯಿಂದ ನೀರಾವರಿ ಇಲಾಖೆಗೆ ಹಸ್ತಾಂತರಿಸಿ ಅಭಿವೃದ್ಧಿಗೊಳಿಸುವ
ಕುರಿತು ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೆರಬೆಂಚಿ, ಹಡಲಗೇರಿ, ಅರಸನಾಳ, ಹಿರೇಮುರಾಳ ಕೆರೆಗೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಟೆಂಡರ್‌ಗೂ ಮುನ್ನ ಅಧಿಕಾರಿಗಳು ಸರ್ವೇ ಮಾಡಿಲ್ಲ. ತರಾತುರಿಯಲ್ಲಿ ಟೆಂಡರ್‌ ಕರೆಯಲಾಗಿದೆ. ಈ ಕೆರೆಗಳ ಡಿಪಿಆರ್‌ ಮಾಹಿತಿ ಸಲ್ಲಿಸಬೇಕು. ಕೆರೆ ತುಂಬಿಸಿದ ಮೇಲೆ ಸೋರಿಕೆ ಆಗದಂತೆ ನೋಡಿಕೊಳ್ಳಬೇಕು. ತಮದಡ್ಡಿ, ಬಳಗಾನೂರ ಸೇರಿ ಆ ಭಾಗದಲ್ಲಿ ಬರುವ ಕೆರೆಗಳ ಪ್ರಗತಿ ಮಾಹಿತಿ ಕೊಡಬೇಕು ಎಂದು ಸೂಚಿಸಿದರು. 

ಆಲಮಟ್ಟಿ ಕೆಬಿಜೆಎನ್ನೆಲ್‌ ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಅಬಿಯಂತರ ಎಂ.ಸಿ. ಛಬ್ಬಿ, ಎಎಲ್‌ ಬಿಸಿ ಸಬ್‌ ಡಿವಿಜನ್‌-1ರ ಎಇಇ ಎಂ.ಸಿ. ಡುಳ್ಳಿ, ಎನ್‌.ಬಿ.ನಾಡಗೌಡ, ಬಿ.ಎಸ್‌.ಪ್ಯಾಟಿಗೌಡರ ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.