ಅಕ್ರಮ ವೃತ್ತ ನಿರ್ಮಾಣ; ಪಾಲಿಕೆ- ಪೊಲೀಸರಿಗೆ ಜಿಲ್ಲಾಡಳಿತ ನೋಟಿಸ್
Team Udayavani, Feb 24, 2022, 4:58 PM IST
ವಿಜಯಪುರ: ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಅಕ್ರಮವಾಗಿ ವೃತ್ತ ನಿರ್ಮಾಣಕ್ಕೆ ಮುಂದಾಗಿರುವ ಪ್ರಕರಣದ ವಿರುದ್ಧ ಜಿಲ್ಲಾಡಳಿತ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಲು ಮುಂದಾಗಿದೆ.
ನಗರದ ಇಟಗಿ ಪೆಟ್ರೋಲ್ ಪಂಪ್ ಪ್ರದೇಶ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದ್ದರೂ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಷಿ ವೃತ್ತದ ಕಟ್ಟಡ ನಿರ್ಮಾಣ ನಡೆಯುತ್ತಿದೆ. ಸಂಚಾರಕ್ಕೆ ತೊಂದರೆ ಉಂಟಾಗುವ ಈ ಪ್ರಕರಣದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಂಚಾರಿ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಇದಲ್ಲದೇ ಗೋದಾವರಿ ಹೋಟೆಲ್ ಬಳಿಯೂ ಜಿಲ್ಲಾಡಳಿತದ ಅನುಮತಿ ಇಲ್ಲದೇ ಪ್ರತಿಮೆ ಸ್ಥಾಪಿಸಲು ಕಟ್ಟಡ ನಿರ್ಮಿಸಲಾಗುತ್ತಿದೆ. ಹೀಗಾಗಿ ಈ ಕುರಿತು ಸಂಬಂಧಿಸಿದ ಇಲಾಖೆಗೆ ನೋಟಿಸ್ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.