ಕನ್ನಡಮ್ಮನ ತೇರು ಎಳೆಯಲು ನರಸಲಗಿ ಸಿದ್ಧ


Team Udayavani, Feb 17, 2018, 5:19 PM IST

vij-2.jpg

ಹೂವಿನಹಿಪ್ಪರಗಿ: ಪ್ರಥಮ ಬಾರಿಗೆ ಸಮೀಪದ ನರಸಲಗಿಯಲ್ಲಿ ಫೆ. 17ರಂದು ನಡೆಯಲಿರುವ ತಾಲೂಕು ಏಳನೇಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿವೆ. ಬೃಹತ್‌ ವೇದಿಕೆ, ಪುಸ್ತಕ ಮಳಿಗೆಗಳ ನಿರ್ಮಾಣ, ಊಟ ಸೇರಿದಂತೆ ಅನೇಕ ಕಾರ್ಯಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌, ಗ್ರಾಪಂ, ವಿವಿಧ ಸಂಘ ಸಂಸ್ಥೆಗಳು, ಶಿಕ್ಷಕರು, ವ್ಯಾಪಾರಿಗಳು ಸಾಹಿತ್ಯಾಸಕ್ತರು ಸೇರಿದಂತೆ ವಿವಿಧ ಇಲಾಖೆಗಳು ಕಾರೊನ್ಮುಖವಾಗಿವೆ. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿನ ಸ್ತಬ್ಧ ಚಿತ್ರಗಳಿಗಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ.

ವಿಶಾಲವಾದ ವೈರಾಗ್ಯನಿಧಿ ಅಕ್ಕಮಹಾದೇವಿ ಮಹಾಮಂಟಪ, ಶ್ರೀ ವಿಶ್ವಗುರು ಬಸವಣ್ಣನವರ ಪ್ರಧಾನ ವೇದಿಕೆ, ಮಾರುತೇಶ್ವರ ಮಹಾದ್ವಾರ, ಶ್ರೀ ಪವಾಡಬಸವೇಶ್ವರ ದಾಸೋಹ ಮನೆ ಸಿದ್ಧವಾಗಿವೆ. ಗ್ರಾಮದ ಹೊರವಲಯದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಮ್ಮೇಳನ ನಡೆಯಲಿದ್ದು, 2 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. 150/80 ಅಡಿ ಬೃಹತ್‌ ಪ್ರಮಾಣದ ವೇದಿಕೆ ನಿರ್ಮಾಣ ಮುಗಿದಿದ್ದು, ಜಿಲ್ಲೆಯ ವಿವಿಧ ಕಡೆಗಳಿಂದ ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಬೆಳಗ್ಗೆ ಉಪ್ಪಿಟ್ಟು, ಮಧ್ಯಾಹ್ನ ಖಡಕ್‌ ಜೋಳದ ರೊಟ್ಟಿ, ಬದನೆಕಾಯಿ ಪಲೆÂ, ಮೊಸರು, ಸಿರಾ, ಅನ್ನ ಸಾರಿನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಆರ್‌ .ಜಿ. ಅಳ್ಳಗಿ ಹಾಗೂ ಗೌರವ ಕಾರ್ಯದರ್ಶಿ ಪ್ರೊ| ಯುವರಾಜ ಮಾದನಶೆಟ್ಟಿ ತಿಳಿಸಿದ್ದಾರೆ. ತಮ್ಮೂರಿನ ಜಾತ್ರೆ ನಡೆಯುವ ಹಾಗೇ ಕಳೆದ ವಾರದಿಂದ ಗ್ರಾಮವನ್ನು ಸಿಂಗರಿಸುವಲ್ಲಿ ಸಾರ್ವಜನಿಕರು ನಿರತರಾಗಿದ್ದಾರೆ.

ಗ್ರಾಮಸ್ಥರು ಗ್ರಾಮವನ್ನು ಸ್ವತ್ಛಗೊಳಿಸಿದ್ದಾರೆ. ಮುಖ್ಯ ರಸ್ತೆಗಳ ಕಂಬಗಳಿಗೆ ಕನ್ನಡದ ಧ್ವಜ ಹಾಗೂ ಬಾವುಟಗಳು ರಾರಾಜಿಸುತ್ತಿದ್ದು, ಗ್ರಾಮದ ಪ್ರಮುಖ ಓಣಿಗಳಲ್ಲಿ ಗೋಡೆ ಬರಹಗಳು ಸಾಹಿತ್ಯಾಸಕ್ತರನ್ನು ಕೈಬೀಸಿ ಕರೆಯುತ್ತಿವೆ. ಸಮ್ಮೇಳನದ ಕುರಿತಾಗಿ ಜಾಗೃತಿ ಮೂಡಿಸಲು ಗ್ರಾಮದ 100ಕ್ಕೂ ಅಧಿಕ ಕಾರ್ಯಕರ್ತರು ಫೆ. 16ರ ಬೆಳಗ್ಗೆಯಿಂದಲೇ ಕೊಡಗಾನೂರು, ಇವಣಗಿ, ಹಾಲಿಹಾಳ, ಅಂಬಳನೂರು ಬಸವನಬಾಗೇವಾಡಿ ಸೇರಿದಂತೆ ಸುತ್ತಮುತ್ತಲಿನ ಊರುಗಳಿಗೆ ಬೈಕ್‌ ಮೂಲಕ ತೆರಳಿ ಕನ್ನಡಮ್ಮನ ಜಾತ್ರೆಗೆ ಜನರಿಗೆ ಆಹ್ವಾನಿಸುತ್ತಿದ್ದಾರೆ. ಗ್ರಾಮದಲ್ಲಿ ನಡೆಯುವ ಸಮ್ಮೇಳನ ನಮ್ಮೂರು ಜಾತ್ರೆ ಎಂದು ತಿಳಿದ ಗ್ರಾಮಸ್ಥರು ಪ್ರತಿ ಮನೆಯಿಂದ 20 ರೊಟ್ಟಿಗಳಂತೆ 5 ಸಾವಿರ ರೊಟ್ಟಿಗಳನ್ನು ಸಂಗ್ರಹಿಸಿ ಸಾಹಿತ್ಯಾಸಕ್ತರಿಗೆ ಬಡಿಸಲು ಸಿದ್ಧರಾಗಿದ್ದಾರೆ.

ಸಕಲ ಸಿದ್ಧತೆ
ಬಸವನಬಾಗೇವಾಡಿ: ತಾಲೂಕಿನ ನರಸಲಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಫೆ. 17ರಂದು ಹಮ್ಮಿಕೊಂಡಿರುವ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಆರ್‌.ಜಿ. ಅಳ್ಳಗಿ, ಗೌರವ ಕಾರ್ಯದರ್ಶಿ ಯುವರಾಜ ಮಾದನಶೆಟ್ಟಿ ತಿಳಿಸಿದರು. 

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಸಿದ್ಧತೆಗಾಗಿ ಕಸಾಪ ಪದಾಧಿಕಾರಿಗಳು, ಗ್ರಾಮದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಹಿರಿಯರು ಕಳೆದ ಒಂದು ತಿಂಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿವಿಧ ಸಮಿತಿ ರಚಿಸುವ ಮೂಲಕ ಸಂಘಟಿತ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿದರು. ಶರಣ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಅಧ್ಯಕ್ಷ ವಿ.ಬಿ. ಮರ್ತೂರ, ವಿವೇಕಾನಂದ ಕಲ್ಯಾಣಶೆಟ್ಟಿ, ವೈ.ಕೆ. ಪತ್ತಾರ, ಎಸ್‌.ಎ. ದೇಗಿನಾಳ, ಎಸ್‌.ಬಿ. ಮುತ್ತಗಿ, ಇಸ್‌.ಐ. ಮನಗೂಳಿ, ಬಾಬು ವಾಡೇದ ಇದ್ದರು.

ಫೆ. 17ರಂದು ಬೆಳಗ್ಗೆ 7:30ಕ್ಕೆ ಗ್ರಾಪಂ ಅಧ್ಯಕ್ಷೆ ಭಾರತಿ ಪಾಟೀಲ ರಾಷ್ಟ್ರಧ್ವಜ, ಕಸಾಪ ಅಧ್ಯಕ್ಷ ಆರ್‌.ಜಿ. ಅಳ್ಳಗಿ ಪರಿಷತ್‌ ಧ್ವಜ, ಪಿಎಸ್‌ಐ ಶರಣಗೌಡ ಗೌಡರ ನಾಡಧ್ವಜಾರೋಹಣ ನೆರವೇರಿಸುವರು. ಖ್ಯಾತ ಸಂಶೋಧಕ ಡಾ| ವಾಸುದೇವ ಬಡಿಗೇರ ಸರ್ವಾಧ್ಯಕ್ಷತೆ ವಹಿಸುವರು. ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಮೆರವಣಿಗೆ ಉದ್ಘಾಟಿಸುವರು.

ಸಕಲ ವಾಧ್ಯ ವೈಭವಗಳೊಂದಿಗೆ ವಿವಿಧ ಕಲಾ ತಂಡಗಳೊಂದಿಗೆ ಸರ್ವಾಧ್ಯಕ್ಷರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಗುವುದು. ಬೆಳಗ್ಗೆ 10:30ಕ್ಕೆ ಸಮ್ಮೇಳನವನ್ನು ಜಾನಪದ ವಿದ್ವಾಂಸ ಶಂಭು ಬಳಿಗಾರ ಉದ್ಘಾಟಿಸುವರು. ಮಧ್ಯಾಹ್ನ ಗೋಷ್ಠಿ, ಉಪನ್ಯಾಸ ನಡೆಯಲಿದೆ. ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ನಂತರ ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ಗುರುರಾಜ ಬ. ಕನ್ನೂರ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.