ಸುಧಾರಣೆ ಕಾಣಲಿ ವಾಸ್ತುಶಿಲ್ಪ ವೈಭವ


Team Udayavani, Aug 8, 2017, 3:28 PM IST

08-BJP-3.jpg

ವಿಜಯಪುರ: ವಿಜಯಪುರದ ವಾಸ್ತುಶಿಲ್ಪದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಕೆಲಸ ನಡೆಯಬೇಕಿದೆ. ಜೊತೆಗೆ ಇದರಲ್ಲಿ ಇನ್ನೂ ಸುಧಾರಣೆ ಕಾಣಬೇಕಿದೆ ಎಂದು ಪ್ರಾಚ್ಯವಸ್ತು ಇಲಾಖೆ ವಿಶ್ರಾಂತ ನಿರ್ದೇಶಕ ಡಾ| ಎಸ್‌.ವಿ.ಪಿ. ಹಳಕಟ್ಟಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ವಾಸ್ತುಶಿಲ್ಪ ವಿಭಾಗದಲ್ಲಿ ಪ್ರಾರಂಭಿಸಲಾದ ಉನ್ನತಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಶ್ರೀಮಂತ ವಾಸ್ತುಶಿಲ್ಪಕ್ಕೆ ವಿಶ್ವದಲ್ಲೇ ಮಾನ್ಯತೆ ಪಡೆದಿದ್ದು, ಜಾಗತಿಕ ವಾಸ್ತು ತಜ್ಞರು ಪಾರಂಪರಿಕ ನಮ್ಮ ನೆಲದ ತಂತ್ರಜ್ಞಾನದ ಕುರಿತು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಣ್ಣಿಸಿದರು.

ವಿಜಯಪುರ ಜಿಲ್ಲೆಯ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ವಾಸ್ತುಶಿಲ್ಪದ ಹಾಗೂ ಭವ್ಯ ಐತಿಹಾಸಿಕ ಸ್ಮಾರಕಗಳೇ ಇಲ್ಲಿನ ವಾಸ್ತುಶಿಲ್ಪದ ಶ್ರೀಮಂತ ವೈಭವ ಸಾರುತ್ತವೆ. ನಗರೀಕರಣದಿಂದಾಗಿ ಐತಿಹಾಸಿಕ ಪರಂಪರೆ ಬಿಂಬಿಸುವ ಕಟ್ಟಡಗಳು ತಮ್ಮ ವೈಶಿಷ್ಟತೆ ಕಳೆದುಕೊಳ್ಳುತ್ತಿರುವುದು ಖೇದದ ಸಂಗತಿ. ಪಾರಂಪರಿಕ ಸ್ಮಾರಕಗಳು ಮರೆಯಾದರೆ ಐತಿಹಾಸಿಕ ಶ್ರೀಮಂತ ವಾಸ್ತು ಗತವೈಭವಕ್ಕೂ ಕುತ್ತು ಬರಲಿದೆ ಎಂದು ಕಿಡಿ ಕಾರಿದರು. ವಿಶ್ವ ಪರಂಪರೆ ಪಟ್ಟಿಯಲ್ಲಿ ವಿಜಯಪುರದ ಸೇರ್ಪಡೆಗೆ ಸಂಬಂಧಿಸಿದಂತೆ ಸಾಧಕ- ಬಾಧಕಗಳೇನು, ಪೂರ್ವ ತಯಾರಿಗಳೇನು ಎಂಬ ಮಹತ್ವ ಸಂಗತಿಗಳ ಕುರಿತು ಸಮಗ್ರ ಚಿಂತನ-ಮಂಥನ ನಡೆಯಬೇಕಿದೆ. ಇದಕ್ಕಾಗಿ ಸ್ಥಳೀಯ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.

ವಾಸ್ತುಶಿಲ್ಪ ವಿಭಾಗದ ವಿ.ಪಿ. ಟಂಕಸಾಲಿ ಪ್ರಾಸ್ತಾವಿಕ ಮಾತನಾಡಿದರು.ವಿಭಾಗದ ನೂತನವಾಗಿ ಪ್ರಾರಂಭಿಸಲಾಗಿರುವ ಕೇಂದ್ರದ ಕಾರ್ಯಉದ್ದೇಶ,
ವಾಸ್ತುಶಿಲ್ಪಕ್ಕೆ ಸಂಬಂಧಿಸಿದ ವಿಷಯದ ಕುರಿತು ವಿವರಿಸಿದರು. ಕಾರ್ಯಗಾರದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳು ವಿಷಯ ಮಂಡಿಸಿದರು. ವಿಚಾರಗೋಷ್ಠಿ, ಶಿಬಿರಗಳು, ಕಿರು ತರಬೇತಿ ಕಾರ್ಯಾಗಾರಗಳ ಆಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಇದೇ ಸಂದರ್ಭದಲ್ಲಿ ಚರ್ಚೆ ನಡೆದವು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.