ಮಳೆಯಲ್ಲೂ ನಿಲ್ಲದ ಮತ ಬೇಟ


Team Udayavani, Aug 28, 2018, 3:37 PM IST

ray-1.jpg

ಮುದ್ದೇಬಿಹಾಳ: ಕನಿಷ್ಠ 18 ಸ್ಥಾನ ಗೆಲ್ಲುವ ಗುರಿ ಇಟ್ಟು ಬಿಜೆಪಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಸೋಮವಾರವೂ ಬಿರುಸಿನ ಪ್ರಚಾರ ಮುಂದುವರಿಸಿದರು. ಈ ವೇಳೆ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಳೆಯಲ್ಲಿ ನೆನೆದೇ ಬೆಂಬಲಿಗರೊಂದಿಗೆ ಪ್ರಚಾರ ನಡೆಸಿ ಗಮನ ಸೆಳೆದರು.

ಮಹಾಂತೇಶ ನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 4ನೇ ವಾರ್ಡ್‌ ಅಭ್ಯರ್ಥಿ ಬಸವರಾಜ ಮುರಾಳ, ವಾಲ್ಮೀಕಿ ಸರ್ಕಲ್‌ನಿಂದ 5ನೇ ವಾರ್ಡ್‌ ಅಭ್ಯರ್ಥಿ ಹುಲಗಪ್ಪ ನಾಯಕಮಕ್ಕಳ, ರಾಘವೇಂದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 6ನೇ ವಾರ್ಡ್‌ ಅಭ್ಯರ್ಥಿ ಲಕ್ಷ್ಮೀಬಾಯಿ ವಾಲೀಕಾರ, ಯಮನೂರಪ್ಪ ಕಟ್ಟೆಯ ಬಳಿಯಿಂದ 16ನೇ ವಾರ್ಡ್‌ ಅಭ್ಯರ್ಥಿ ಬೀಬಿಜಾನ ಬೀಳಗಿ ಪರ ರೋಡ್‌ಶೋ ನಡೆಸಿ, ಮನೆಮನೆಗೆ ತೆರಳಿ ಕರಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸುವಂತೆ ಮನವಿ ಮಾಡಿದರು. ಸೋಮನಗೌಡ ಬಿರಾದಾರ ಕವಡಿಮಟ್ಟಿ, ಶರಣು ಬೂದಿಹಾಳಮಠ,
ಬಸವರಾಜ ಗುಳಬಾಳ, ಸಂಗಮೇಶ ವಾಲೀಕಾರ, ಮೋಹನ ಹಂಚಾಟೆ, ಸುಭಾಷ್‌ ಬಿದರಕುಂದಿ, ಹನುಮಂತ ನಲವಡೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಜೆಡಿಎಸ್‌ ಪ್ರಚಾರ: ಜೆಡಿಎಸ್‌ ಧುರೀಣೆ ಮಂಗಳಾದೇವಿ ಬಿರಾದಾರ ಸೋಮವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಮತಯಾಚಿಸಿದರು.

ಈ ಹಿಂದಿನ ಪುರಸಭೆ ಆಡಳಿತದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡಿದ್ದರು. ಅದೇ ಲೆಕ್ಕಾಚಾರದಲ್ಲಿ ಈ ಬಾರಿಯೂ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಆಯ್ಕೆಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ. ರಾಜ್ಯದಲ್ಲಿ ನಮ್ಮದೇ ಪಕ್ಷದ ಆಡಳಿತ ಇದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜನಪರ ಆಡಳಿತ ನೀಡುತ್ತಿದ್ದಾರೆ. ಅವರ ಕೈ ಬಲಪಡಿಸಲು, ಪುರಸಭೆಗೆ ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಬಿಜೆಪಿಗೆ ಅಸಾಧ್ಯ. ಜೆಡಿಎಸ್‌ಗೆ ಅಧಿಕಾರ ಕೊಟ್ಟಲ್ಲಿ ಮಾತ್ರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ನಡೆಯಲಿದೆ. ಇದಕ್ಕಾಗಿ ಜೆಡಿಎಸ್‌ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು ಎಂದು ಮಂಗಳಾದೇವಿ ಮನವಿ ಮಾಡಿಕೊಂಡರು.

ಧುರೀಣರಾದ ಶಾಂತಗೌಡ ಬಿರಾದಾರ, ಹಿರಿಯ ನ್ಯಾಯವಾದಿ ಜೆ.ಎ. ಚಿನಿವಾರ, ಅರವಿಂದ ಕಾಶಿನಕುಂಟಿ, ರಮೇಶ ಕಮತ, ರವಿ ಬಡಿಗೇರ, ಲಕ್ಷ್ಮಣ ದಾಸರ, ಬಿ.ಎಚ್‌.ಹಾಲಣ್ಣವರ್‌, ಜೆಡಿಎಸ್‌ ಅಭ್ಯರ್ಥಿ ಹರೀಶ ನಾಟೀಕಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
 
ಕಾಂಗ್ರೆಸ್‌ ಪ್ರಚಾರ: ಕಾಂಗ್ರೆಸ್‌ ಅಭ್ಯರ್ಥಿಗಳು ಕೂಡಾ ತಮ್ಮ ಮುಖಂಡರ ಸಮ್ಮುಖದಲ್ಲಿ ಆಯಾ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ದು ಅಲ್ಲಲ್ಲಿ ಕಂಡು ಬಂತು. ಕೆಲವು ಬಡಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು
ಯಾವುದೇ ನಾಯಕರ ಉಪಸ್ಥಿತಿ ಇಲ್ಲದೆ ಸ್ವತಃ ತಾವೇ, ತಮ್ಮ ಬೆಂಬಲಿಗರೊಂದಿಗೆ ಸ್ವಂತ ಶಕ್ತಿಯ ಬಲದ ಮೇಲೆ ತಿರುಗಾಡಿ ಕರಪತ್ರ ಹಂಚಿ ಮತಯಾಚಿಸುತ್ತಿರುವುದು ಕಂಡುಬಂತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.