ಮುದ್ದೇಬಿಹಾಳದಲ್ಲಿ ಸರಣಿ ಕಳ್ಳತನ: 7 ಮನೆಗಳ ಬೀಗ ಮುರಿದು ನಗ ನಾಣ್ಯ ದೋಚಿದ ಕಳ್ಳರು
Team Udayavani, Oct 11, 2021, 12:56 PM IST
ಮುದ್ದೇಬಿಹಾಳ: ಪಟ್ಟಣದ ಸುಶೀಕ್ಷಿತರ ಬಡಾವಣೆ ಎಂದೇ ಗುರ್ತಿಸಿಕೊಳ್ಳುವ ಮಾರುತಿನಗರ ಬಡಾವಣೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ 7 ಮನೆಗಳ ಸರಣಿ ಕಳ್ಳತನ ನಡೆದ ಘಟನೆ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಒಂದೇ ಮಾದರಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು, ಮುಖ್ಯ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿರುವ ಕಳ್ಳರು ಯಾರೂ ಇಲ್ಲದ ಮನೆಗಳಲ್ಲಿ ನಗ ನಾಣ್ಯ ಬೆಲೆಬಾಳುವ ವಸ್ತು ದೋಚಿರುವ ಶಂಕೆ ಇದೆ.
ಮುದ್ದೇಬಿಹಾಳ ಪೊಲೀಸರು ಆಯಾ ಮನೆಗಳಿಗೆ ತೆರಳಿ ಕಳ್ಳತನ ಪರಿಶೀಲಿಸಿ ವರದಿ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ. ತನಿಖೆ ಪೂರ್ಣಗೊಂಡ ನಂತರವೇ ಕಳ್ಳತನವಾದ ನಗ ನಾಣ್ಯದ ಮೌಲ್ಯ ತಿಳಿದು ಬರಲಿದೆ.
ಇತ್ತೀಚೆಗೆ ಪಟ್ಟಣದಲ್ಲಿ ಉತ್ತರ ಪ್ರದೇಶ ಮೂಲದವರು ಬಡಾವಣೆಗಳಲ್ಲೆಲ್ಲ ಊಲನ್ ಕಾರ್ಪೆಟ್, ಬ್ಲ್ಯಾಂಕೇಟ್ ಮಾರಲು ತಿರುಗಾಡಿದ್ದು ಅವರ ಮೇಲೆಯೇ ಸಂಶಯ ಕೇಂದ್ರೀಕೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
MUST WATCH
ಹೊಸ ಸೇರ್ಪಡೆ
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್
QR code system: ರೈಲ್ವೆ ಟಿಕೆಟ್ ಖರೀದಿಗೆ ಕ್ಯೂಆರ್ಕೋಡ್ ವ್ಯವಸ್ಥೆ; ಉತ್ತಮ ಸ್ಪಂದನೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ