ಮುದ್ದೇಬಿಹಾಳ: ಬಾವಿಯಲ್ಲಿ ಯುವತಿಯ ಶವ ಪತ್ತೆ; ಕೊಲೆ ಆರೋಪ
Team Udayavani, Nov 30, 2022, 7:14 PM IST
ಮುದ್ದೇಬಿಹಾಳ: ತೋಟದ ಬಾವಿಯೊಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ನಾಲತವಾಡ ಹೋಬಳಿ ವ್ಯಾಪ್ತಿಯ ಕೊನೇ ಹಳ್ಳಿ ನಾಗಬೇನಾಳ ತಾಂಡಾ ಬಳಿ ಮಂಗಳವಾರ (ನ.29 ರಂದು) ನಡೆದಿದೆ.
ವಿಜಯಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಸುಷ್ಮಿತಾ ಜೇವಲಪ್ಪ ಪವಾರ (18) ಮೃತ ಯುವತಿ.
ಸುಷ್ಮಿತಾಳಿಗೆ ಗ್ರಾಮದ ಸುನೀಲ ಎಂಬ ಯುವಕ ಮೆಸೇಜ್, ಕಾಲ್ ಮಾಡಿ ಆಗಾಗ ಕಿರುಕುಳ ನೀಡುತ್ತಿದ್ದ. ಈತನೇ ತನ್ನ ಮಗಳ ಸಾವಿಗೆ ಕಾರಣ, ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತ ಯುವತಿಯ ತಂದೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಿಎಸ್ ಐ ಆರೀಫ ಮುಷಾಪುರಿ ಅವರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದು ಆರೋಪಿ ಪತ್ತೇಗಾಗಿ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ