ವಿಜಯಪುರ : ಕಾರಿಗೆ ಬೈಕ್ ಡಿಕ್ಕಿ- ಶಿಕ್ಷಕ ಸಾಹಿತಿ ಸಾವು
Team Udayavani, Jun 20, 2022, 7:50 AM IST
ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಕೋಮಲ್ ಡಾಬಾ ಹತ್ತಿರ ರವಿವಾರ ರಾತ್ರಿ ಬೈಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಸಿಲುಕಿದ್ದ ಇಲ್ಲಿನ ವಿವಿವ ಸಂಘದ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಮಹೇಶ ಕಿತ್ತೂರ (48) ಚಿಕಿತ್ಸೆ ಫಲಿಸದೆ ರವಿವಾರ ಮಧ್ಯರಾತ್ರಿ ಜೀವ ತ್ಯಜಿಸಿದರು.
ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರನ್ನು ಬಾಗಲಕೋಟೆಯ ಡಾ.ಕಟ್ಟಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು.ದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಮುದ್ದೇಬಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಾರ ಶೋಕ: ಅವರು ಶರಣರ ವಚನಗಳ ವಿಶ್ಲೇಷಕರಾಗಿದ್ದು ಇದುವರೆಗೆ ಅಂದಾಜು 2800 ವಚನಗಳ ವಿಶ್ಲೇಷಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ತಾಲೂಕಿನ ವಚನ ಸಾಹಿತ್ಯದಲ್ಲಿ ಹೆಚ್ಚು ಜನಪ್ರಿಯರಾಗಿದ್ದಾರೆ. ಅವರ ದುರಂತ ಸಾವಿಗೆ ಅಪಾರ ಶೋಕ ವ್ಯಕ್ತವಾಗುತ್ತಿದೆ. ನಿಧನ ಹಿನ್ನೆಲೆ ಅವರು ಸೇವೆ ಸಲ್ಲಿಸುತ್ತಿದ್ದ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ