ನಾಲತವಾಡ: ಏಕಾಏಕಿ ಜಮೀನಿಗೆ ನುಗ್ಗಿದ ಬಸ್ ;15 ಮಂದಿಗೆ ಗಾಯ
Team Udayavani, Jul 26, 2022, 7:23 PM IST
ನಾಲತವಾಡ (ವಿಜಯಪುರ): ಚಲಿಸುತ್ತಿದ್ದ ಬಸ್ಸೊಂದು ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಬಸ್ನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಿರ್ವಾಹಕ ದಸ್ತಗಿರಿಸಾಬ್ ವಾಲೀಕಾರ್ಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.
ಸಂಜೆ ನಾಲತವಾಡ ರಸ್ತೆಯಲ್ಲಿ ಬಸ್ ಹೋಗುತ್ತಿದ್ದ ವೇಳೆ ಬಸ್ಸಿನ ಪಾಟ್ ( ಬ್ಲೇಡ್ ಸೆಟ್) ತುಂಡಾಗಿ ಏಕಾಏಕಿ ಬಸ್ ತಿರುಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಅದೃಷ್ಟವಶಾತ್ ಕಂಬದಲ್ಲಿ ವಿದ್ಯುತ್ ಇರಲಿಲ್ಲ. ಆ ಬಳಿಕ ಜಮೀನಿಗೆ ನುಗ್ಗಿದೆ.
ಬಸ್ ಚಾಲಕ ರಾಯಗೊಂಡ ಬಿರಾದಾರ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತ ತಪ್ಪಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ