ಇಂಡಿ ಪಕ್ಷೇತರ ಸಾಹುಕಾರನ ಬಂಧನ;ಲಾಠಿ ಚಾರ್ಜ್,ಆತ್ಮಹತ್ಯೆ ಯತ್ನ!
Team Udayavani, Apr 11, 2018, 1:53 PM IST
ವಿಜಯಪುರ:ಇಂಡಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿರುವ, ಅಕ್ರಮ ಮರಳು ದಂಧೆಯಲ್ಲಿ ಬಂಧನಕ್ಕೊಳಗಾಗಿರುವ ಮಹಾದೇವ ಸಾಹುಕಾರ ಭೈರಗೊಂಡನನ್ನು ಪೊಲೀಸರು ಬುಧವಾರ ಕೋರ್ಟ್ಗೆ ಹಾಜರು ಪಡಿಸಿದರು. ಈ ವೇಳೆ ಹಲವು ಬೆಂಬಲಿಗರು ಕೋರ್ಟ್ ಆವರಣದಲ್ಲಿ ಜಮಾವಣೆಗೊಂಡಿದ್ದರು, ಪೊಲೀಸರು ಅವರನ್ನು ಚದುರಿಸಲು ಲಘು ಲಾಠಿ ಪ್ರಹಾರವನ್ನೂ ನಡೆಸಿದರು.
ಭೈರಗೊಂಡ ಕೋರ್ಟ್ ಒಳಗೆ ತೆರಳುತ್ತಿದ್ದಂತೆ ಬೆಂಬಲಿಗನೊಬ್ಬ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಸ್ಥಳದಲ್ಲಿದ್ದವರು ತಡೆದಿದ್ದಾರೆ. ನೂರಾರು ಬೆಂಬಲಿಗರು ಪೊಲೀಸ್ ಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಇಂಡಿಯಲ್ಲಿ 100ಕ್ಕೂ ಹೆಚ್ಚು ಅಕ್ರಮ ಮರಳನ್ನು ವಶಪಡೆದುಕೊಳ್ಳಲಾಗಿತ್ತು. ಆ ಸಂಬಂಧ ಭೈರಗೊಂಡ ವಿರುದ್ಧ ರೌಡಿ ಶೀಟರ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಭೈರಗೊಂಡನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…