ವಿಶ್ವದಲ್ಲಿಯೇ ನಮ್ಮದು ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರ
Team Udayavani, Jan 27, 2022, 5:56 PM IST
ಇಂಡಿ: ವಿಶ್ವದಲ್ಲಿಯೇ ಭಾರತ ದೇಶ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಡೆದು ಬಂದಿದೆ. ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದೆ. ಪಯಣದಲ್ಲಿ ಸಾಧನೆಯ ಮೈಲಿಗಲ್ಲುಗಳನ್ನು ನೆಟ್ಟಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಬುಧವಾರ ಪಟ್ಟಣದ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ನಡೆದ 73ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂಡಿ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ, ಭೀಮಾಶಂಕರ ಸಕ್ಕರೆ ಕಾರ್ಖಾನೆ ಸಾಲ ಮುಕ್ತ ಮಾಡುವ ಮತ್ತು ಕೃಷ್ಣಾ ನದಿ ನೀರನ್ನು ಮತಕ್ಷೇತ್ರಕ್ಕೆ ತಂದು ತಾಲೂಕನ್ನು ಸಮಗ್ರ ನೀರಾವರಿಯನ್ನಾಗಿಸುವ ಕನಸು ಕಂಡಿದ್ದು ಈ ದಿಶೆಯಲ್ಲಿ ನಿರಂತರ ಪ್ರಯತ್ನ ನಡೆದಿದೆ ಎಂದರು.
ಇಂಡಿ ತಾಲೂಕಿನಲ್ಲಿ ಅರಣ್ಯ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು, ಬೂದಿಹಾಳ ಗ್ರಾಮದ ಹತ್ತಿರ ಸಣ್ಣ ಕೈಗಾರಿಕೆದಾದರರಿಗೆ ಉತ್ತೇಜನ ನೀಡುವುದು, ನಿಂಬೆ ಅಭಿವೃದ್ಧಿ ಮಂಡಳಿಗೆ ಪ್ರೋತ್ಸಾಹ ನೀಡಿ ಬಲಪಡಿಸುವ ಅನೇಕ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಧ್ವಜಾರೋಹಣ ನೆರವೇರಿಸಿ ಕಂದಾಯ ಉಪ ವಿಬಾಗಾಧಿಕಾರಿ ರಾಹುಲ ಶಿಂಧೆ ಮಾತನಾಡಿ, ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನ ತಿಳಿಸಿದ ದಿನವಿದು. ಈ ದಿನದಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು ಪಣ ತೊಡೋಣ ಎಂದರು.
ಪೊಲೀಸ್ ಹಾಗೂ ಗೃಹ ರಕ್ಷಕ ದಳದಿಂದ ಪಿಎಸೈ ಮಾಳಪ್ಪ ಪೂಜಾರಿ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಪುರಸಭೆ ಅಧ್ಯಕ್ಷೆ ಬನ್ನೆಮ್ಮ ಹದರಿ, ಡಿಎಸ್ಪಿ ಶ್ರೀಧರ ದೊಡ್ಡಿ, ಇಒ ಸುನೀಲ ಮುದ್ದಿನ, ತಹಶೀಲ್ದಾರ್ ಸಿ.ಎಸ್. ಕುಲಕರ್ಣಿ, ಮುಖ್ಯಾಧಿಕಾರಿ ಲಕ್ಷ್ಮೀಶ, ಬಿಇಒ ವಸಂತ ರಾಠೊಡ, ಹೆಸ್ಕಾಂನ ಮೇಡೆಗಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪುರಸಭೆ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿ.ಎಂ. ಬಂಡಗಾರ ಸ್ವಾಗತಿಸಿದರು. ಬಸವರಾಜ ಗೊರನಾಳ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ