ದಾರ್ಶನಿಕರ ಚಿಂತನೆಗಳೇ ಭಾರತೀಯ ಸಂಸ್ಕೃತಿ
Team Udayavani, Oct 10, 2018, 1:02 PM IST
ವಿಜಯಪುರ: ಬುದ್ಧ, ಬಸವ ಮತ್ತು ವಾಲ್ಮೀಕಿಯಂತ ದಾರ್ಶನಿಕರು ತಮ್ಮ ಚಿಂತನೆ ಮೂಲಕ ನಮ್ಮ ಸಂಸ್ಕೃತಿಯನ್ನು ಶ್ರೀಮಂತೊಗಳಿಸಿದ್ದಾರೆ ಎಂದು ಸಂಶೋಧಕ ಡಾ| ಎಂ.ಎಸ್. ಮದಭಾವಿ ಹೇಳಿದರು. ಭಾರತೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯ ರಾಷ್ಟ್ರೀಯ ನ್ಯಾಸ್ (ಇಂಟ್ಯಾಕ್) ಮತ್ತು ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದ ಸಂಯುಕ್ತ ಸಹಯೋಗದಲ್ಲಿ ನಡೆದ ವಿವಿಧ ವಿಷಯಗಳ ಕುರಿತಾದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬುದ್ಧ, ಬಸವಣ್ಣ ಸೇರಿದಂತೆ ಅನೇಕ ದಾರ್ಶನಿಕರು ತಮ್ಮ ಉದಾತ್ತ ತತ್ವ-ಚಿಂತನೆಗಳ ಮೂಲಕ ನಮ್ಮ ಭವ್ಯ ಸಂಸ್ಕೃತಿಯ ಶ್ರೀಮಂತಿಕೆ ಇನ್ನಷ್ಟೂ ಹೆಚ್ಚಿಸಿದ್ದಾರೆ. ಅವರ ಮಾರ್ಗದಲ್ಲಿಯೇ ನಾವು ಸಾಗಿ ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯನ್ನು ಮತ್ತಷ್ಟು ಬೆಳೆಸಬೇಕಿದೆ. ಭಾರತೀಯ ಭವ್ಯ ಸಂಸ್ಕೃತಿಯ ಮಹತ್ವವವನ್ನು ಅರಿತುಕೊಳ್ಳಬೇಕಿದೆ ಎಂದರು.
ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಪ್ರಸಾರ ಮಾಡುವಲ್ಲಿ ವಿವಿಧ ಸಂಸ್ಥೆಗಳ ಕಾರ್ಯ ಪ್ರಶಂಸನೀಯ. ಪ್ರಶಿಕ್ಷಣಾರ್ಥಿಗಳು ಹಾಗೂ ಭಾವಿ ಶಿಕ್ಷಕರು ತಾವು ಭಾರತೀಯ ಸಂಸ್ಕೃತಿಯನ್ನು ಕ್ರಿಯಾಶೀಲವಾಗಿ ಅಳವಡಿಸಿಕೊಂಡಾಗ ನಿಮ್ಮ ಕೈಯಲ್ಲಿ ತಯಾರಾಗುವ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಪರಂಪರೆ ಅಧ್ಯಯನ ಮಾಡುವಂತೆ ಮಾಡಿದರೆ ಮಾತ್ರ ಭಾರತೀಯ ಸಂಸ್ಕೃತಿ ಶ್ರೀಮಂತ ಆಗಲು ಸಾಧ್ಯ ಎಂದರು.
ಖ್ಯಾತ ಸಂಶೋಧಕ ಡಾ| ಕೃಷ್ಣ ಕೊಲ್ಹಾರ ಕುಲಕರ್ಣಿ ವಿಜಯಪುರದ ಇತಿಹಾಸ ಮತ್ತು ರಾಜ ಮಹಾರಾಜರುಗಳ ಆಳ್ವಿಕೆ ವಿಷಯದ ಕುರಿತು, ಡಾ| ಶ್ರೀಕಾಂತ ಪತ್ತಾರ ಅವರು ಶಾಲೆ ಮತ್ತು ಕಾಲೇಜುಗಳಲ್ಲಿ ಭಾರತೀಯ ಸಂಸ್ಕೃತಿ ಮಹತ್ವದ ಕುರಿತು. ಡಾ| ಡಿ.ಜಿ. ಕುಲಕರ್ಣಿ ಭಾರತೀಯ ಸಂಸ್ಕೃತಿ ಕುರಿತು ಹಾಗೂ ಡಾ| ಎಸ್.ಕೆ. ಕೊಪ್ಪಾ ಕರ್ನಾಟಕದ ಸಂಸ್ಕೃತಿ ವಿಷಯದ ಕುರಿತು ಉಪನ್ಯಾಸ ನೀಡಿದರು. ಡಾ| ವಿ.ಡಿ. ಐಹೊಳ್ಳಿ, ಎಂ.ಬಿ. ಕುರವತ್ತಿ, ಬಸಮ್ಮ ಮುತ್ತಪ್ಪನವರ, ಚಂದು ಮಾದರ, ಗುತ್ತನಗೌಡ ಬಿರಾದಾರ, ಎ.ಬಿ. ಬೂದಿಹಾಳ, ಎಸ್.ಎಸ್. ಹುರಕಡ್ಲಿ, ರಾಕೇಶ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!