ಇಂಡಿ ಆಸ್ಪತ್ರೆಗೆ ಬೇಕಿದೆ ಚಿಕಿತ್ಸೆ


Team Udayavani, Aug 25, 2018, 11:15 AM IST

vij-1.jpg

ಇಂಡಿ: ನೂತನ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲೆಗೆ ಆರೋಗ್ಯ ಖಾತೆ ನೀಡಿದರೂ ಆರೋಗ್ಯ ಇಲಾಖೆಯಲ್ಲಿನ ವೈದ್ಯರು, ಸಿಬ್ಬಂದಿ ಕೊರತೆ ಮತ್ತು ವೈದ್ಯರ ನಿರ್ಲಕ್ಷ್ಯ ಮಾತ್ರ ಇದುವರೆಗೂ ಬಗೆಹರಿದಿಲ್ಲ. ಇದಕ್ಕೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯೇ ಉತ್ತಮ ನಿದರ್ಶನ. ವೈದ್ಯರು, ಸಿಬ್ಬಂದಿ ಕೊರತೆಯಿಂದ ರಾತ್ರಿ ಸಮಯದಲ್ಲಿ ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ.

ತೀವ್ರ ನಿಗಾ ಘಟಕ ಇಲ್ಲ. ಇದರಿಂದ ಗರ್ಭಿಣಿಯರು ಹೆರಿಗೆಗಾಗಿ ವಿಜಯಪುರ, ಸೊಲ್ಲಾಪುರಕ್ಕೆ ಹೋಗುವ ಅನಿವಾರ್ಯತೆ ಇದೆ. ಆಕಸ್ಮಾರ ಸರ್ಕಾರಿ ಆಸ್ಪತ್ರೆಯಲ್ಲೇ ಹೆರಿಗೆಯಾದರೆ ಬಾಣಂತಿಯರಿಗೆ ಬಿಸಿ ನೀರಿನ ಸೌಲಭ್ಯವಿಲ್ಲ. ಇತ್ತೀಚೆಗೆ ಶಾಸಕ ಯಶವಂತರಾಯಗೌಡ ಪಾಟೀಲರ ಶ್ರಮದಿಂದ ರೋಗಿಗಳು, ಸಾರ್ವಜನಿಕರ ಅನುಕೂಲಕ್ಕಾಗಿ ಆಸ್ಪತ್ರೆ ಆವರಣದಲ್ಲಿ ನಾಗರಿಕ ಸೌಲಭ್ಯಗಳ ಸಂಕೀರ್ಣ ನಿಮಾಣವಾಗಿದೆ. ಆದರೆ, ದುರದೃಷ್ಟವಶಾತ್‌ ಅದು ಇದುವರೆಗೆ ಕಾರ್ಯ ಆರಂಭಿಸಿಲ್ಲ.

100 ಹಾಸಿಗೆ ಆಸ್ಪತ್ರೆ ಇದಾಗಿದ್ದು, ಸುತ್ತಲಿನ ಸುಮಾರು 20 ವರ್ಷಗಳೇ ಕಳೆದರೂ ಆಸ್ಪತ್ರೆಯ ಒಳ ಹಾಗೂ ಹೊರ ಗೋಡೆಗಳಿಗೆ ಸುಣ್ಣ ಬಣ್ಣ ಬಳಿದಿಲ್ಲ. ಹಳೆಯ ವಿದ್ಯುತ್‌ ವ್ಯವಸ್ಥೆ ಇದ್ದು, ಸರಿಯಾದ ಸಂಪರ್ಕವಿಲ್ಲ.

ಸಿಬ್ಬಂದಿಗಿಲ್ಲ ವಸತಿಗೃಹ: ಈ ಹಿಂದೆ ಹಳೆಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 14 ಹಳೆಯ ವಸತಿ ಗೃಹಗಳಿದ್ದು ಅವುಗಳಿಗೆ ದುರಸ್ತಿಯೇ ಇಲ್ಲ. ಮೇಲಿನ ಹಂಚುಗಳು ಬೀಳುತ್ತಿವೆ. ಅಂತಹ ಮನೆಗಳಲ್ಲಿಯೇ ಸಿಬ್ಬಂದಿ ವಾಸವಿದ್ದಾರೆ. ಹೆರಿಗೆಗೆ ಸಂಬಂಧಿಸಿದಂತೆ ಮೂವರು ನರ್ಸ್‌ಗಳು ಹೆರಿಗೆ ಮಾಡಿಕೊಳ್ಳುತ್ತಾರೆ.ಆಸ್ಪತ್ರೆಗೆ ಅವಶ್ಯವಿರುವಷ್ಟು ನರ್ಸ್‌ಗಳಿದ್ದರೂ ರಾತ್ರಿ ಸಮಯದಲ್ಲಿ ಬಂದ ರೋಗಿಗಳು, ಗರ್ಭಿಯಣಿಯರಿಂದ ದುಡ್ಡು ಪಡೆಯುತ್ತಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಆವರಣವನ್ನು ಸಾರ್ವಜನಿಕರು ಶೌಚಾಲಯವನ್ನಾಗಿ ಉಪಯೋಗಿಸಿಕೊಳ್ಳುತ್ತಿದ್ದರು. ಈಗ ಅರಣ್ಯ ಇಲಾಖೆ ವತಿಯಿಂದ ಆಸ್ಪತ್ರೆ ಮುಂಭಾಗದಲ್ಲಿ ಸಸಿ ನೆಟ್ಟಿದ್ದಾರೆ. ಆಸ್ಪತ್ರೆ ಹೊರಗಡೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆಯಿಲ್ಲ, ಸರಿಯಾದ ಔಷಧ ವ್ಯವಸ್ಥೆಯಿಲ್ಲ ಎಂದು ಸಾರ್ವಜನಿಕರು ಅಳಲು ತೋಡಿಕೊಳ್ಳುತ್ತಾರೆ.

ಆಸ್ಪತ್ರೆಯ ಖಾಲಿ ಹುದ್ದೆಗಳು: ಜನರಲ್‌ ಮೆಡಿಸಿಯನ್‌, ಎಎನ್‌ಟಿ ತಜ್ಞರು, ಸೈಕಿ ಆರ್ಕಿಯಾರ್ಟಿಕ್‌, ಹಿರಿಯ ವೈದ್ಯಾಧಿಕಾರಿ, ಹಾಗೂ ಇಬ್ಬರು ಕಿರಿಯ ಔಷಧ ಸಂಯೋಜಕರು, ಹೆಚ್ಚುವರಿಯಾಗಿ ಇಬ್ಬರು ಲ್ಯಾಬ್‌ ಟೆಕ್ನಿಷಿಯನ್‌ ತುರ್ತು ಅಗತ್ಯವಿದೆ

ಆಸ್ಪತ್ರೆಗೆ ಕೆಲ ಸಿಬ್ಬಂದಿಗಳ ಕೊರತೆ ಇದೆ. ಬಾಣಂತಿಯರಿಗೆ ಬಿಸಿ ನೀರಿನ ಸಲುವಾಗಿ ಸೋಲಾರ್‌ ವ್ಯವಸ್ಥೆ ಇದೆ. ಆದರೆ
ಈಗ ಮಳೆಗಾಲವಾದ್ದರಿಂದ ಸೋಲಾರ್‌ನಲ್ಲಿ ನೀರು ಸರಿಯಾಗಿ ಬರುತ್ತಿಲ್ಲ. ಸಿಜೇರಿಯನ್‌ ವೈದ್ಯರು ಕೆಲವೇ ದಿನಗಳಲ್ಲಿ ಆಸ್ಪತ್ರೆಗೆ ಸೇವೆಗೆ ಹಾಜರಾಗಲಿದ್ದಾರೆ. ಶೀಘ್ರ ಎಲ್ಲವೂ ಸರಿಯಾಗಲಿದೆ.  ಡಾ| ಆರ್‌.ಟಿ. ಕೋಳೆಕರ ಮುಖ್ಯವೈದ್ಯಾಧಿಕಾರಿ ವೈದ್ಯರ ಕೊರತೆ ಅಥವಾ ಮತ್ಯಾವ ಕಾರಣದಿಂದಲೋ ರಾತ್ರಿ ಸಮಯದಲ್ಲಿ ಆಸ್ಪತ್ರೆಯಲ್ಲಿ ಯಾರೂ ಇರುವುದಿಲ್ಲ.  ರಾತ್ರಿ ರೋಗಿಗಳು ಆಸ್ಪತ್ರೆಗೆ ಬಂದರೆ ಉಚಿತ ಚಿಕಿತ್ಸೆ; ಖಚಿತ ಸಾವು ಎಂಬಂತಾಗಿದೆ. ಆರೋಗ್ಯ ಖಾತೆ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. 
 ಅನಿಲ ಜಮಾದಾರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.