ಕೋವಿಡ್ ವಾರಿಯರ್ಸ್‌ ನಿಜವಾದ ದೇವರು


Team Udayavani, Jul 8, 2020, 4:33 PM IST

8-July-19

ಇಂಡಿ: ಅನೇಕ ಕಾರಣಾಂತರಗಳಿಂದ ನೂತನ ಬಸ್‌ ಡಿಪೋ ಉದ್ಘಾಟನೆಯಾಗಿರಲಿಲ್ಲ. ದಿ| ಡಿ.ದೇವರಾಜ ಅರಸರ ಭವನ ಹಾಗೂ ಬಸ್‌ ಡಿಪೋ ಲೋಕಾರ್ಪಣೆ, ಕೋವಿಡ್‌-19 ನಿಮಿತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಪುರಸ್ಕಾರ ನೀಡುತ್ತಿರುವುದು ಅತೀವ ಸಂತೋಷವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಪಟ್ಟಣದ ಹಂಜಗಿ ರಸ್ತೆಯ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನೂತನ ಬಸ್‌ ಡಿಪೋ ಮತ್ತು ದೇವರಾಜ ಅರಸು ಭವನ ಲೋಕಾರ್ಪಣೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಕೋವಿಡ್‌-19 ಮಹಾಮಾರಿ ಇಡೀ ವಿಶ್ವದ ಮಾನವ ಕುಲಕೋಟಿಗೆ ಆಪತ್ತು ತಂದಿದೆ. ಕೋವಿಡ್‌ ಮಹಾರೋಗದ ವಿರುದ್ಧ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪೊಲೀಸ್‌ ಇಲಾಖೆ, ಪೌರ ಕಾರ್ಮಿಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಜೀವದ ಹಂಗು ತೊರೆದು ಶ್ರಮಿಸಿದ್ದಾರೆ. ಕಷ್ಟದಲ್ಲಿದ್ದಾಗ ಸಾರ್ವಜನಿಕರ ಸೇವೆ ಮಾಡಿದವರೇ ನಿಜವಾದ ದೇವರು ಎಂದರು.

ವಿಜಯಪುರ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ತಾಲೂಕು ಇಂಡಿ ಪಟ್ಟಣವಾಗಿದೆ. ಮುಂದೊಂದು ದಿನ ನಗರಸಭೆಯಾಗುವ ವಾತಾವರಣ ಬರಲಿದೆ. ಒಬ್ಬ ಜನಪ್ರತಿನಿಧಿಗೆ ಮುಂದಾಲೋಚನೆ ಇರಬೇಕು. ಇಂಡಿ ತಾಲೂಕಿನ ಜನತೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ, 1 ಕೋಟಿ ರೂ. ಯೋಜನೆ ಮತ್ತು ಶೈಕ್ಷಣಿಕ ಪ್ರಗತಿಗೆ ಐಟಿಐ, ಡಿಗ್ರಿ ಕಾಲೇಜು, ಡಿಪ್ಲೊಮಾ, ಎಲ್ಲಾ ಕಟ್ಟಡಗಳ ಉದ್ಘಾಟನೆಯಾಗಬೇಕಾಗಿತ್ತು. ಆದರೆ ಕೋವಿಡ್‌-19 ಕಾರಣದಿಂದ ಮುಂದೂಡಲಾಗಿದೆ ಎಂದರು.

ತಾಪಂ ಅಧ್ಯಕ್ಷ ಅಣ್ಣಾರಾಯ ಬಿದರಕೋಟಿ, ಜಿಪಂ ಸದಸ್ಯ ಹಣಮಂತ ಖಂಡೇಕಾರ, ರಾಮು ರಾಠೊಡ, ಕೆ.ಎಂ.ಎಫ್‌ ಸಾಂಬಾಜಿರಾವ ಮಿಸಾಳೆ, ಡಿ.ಟಿ.ಒ ಬಿರಾದಾರ, ಕೆಎಸ್‌ಆರ್‌ಟಿಸಿ ಅಧಿಕಾರಿ ಗಂಗಾಧರ, ಎಸ್‌.ಆರ್‌. ಆಲಗೂರ, ವಿಜಯಕುಮಾರ ಕವಲಗಿ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.