ಕೋವಿಡ್ ವಾರಿಯರ್ಗೆ ಸನ್ಮಾನ
Team Udayavani, Jun 27, 2020, 5:44 PM IST
ಇಂಡಿ: ಕೋವಿಡ್ ಮಹಾಮಾರಿ ವಿಶ್ವವನ್ನೇ ತಲ್ಲಣಗೊಳಿಸಿದೆ. ರೋಗ ತಡೆಗಟ್ಟಲು ಸರ್ಕಾರ ಮತ್ತು ಆರೋಗ್ಯ ಇಲಾಖೆ ಶ್ರಮಿಸುತ್ತಿದ್ದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಕರ್ನಾಟಕದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಜಾಗ್ರತೆಯಿಂದ ಇರಬೇಕು ಎಂದು ಜಬ್ಬರ್ಅಲಿ ಹಳ್ಳಿ ಹೇಳಿದರು.
ಝಳಕಿ ಗ್ರಾಪಂಯಲ್ಲಿ ಕೋವಿಡ್ ವಾರಿಯರ್ಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಆದ್ದರಿಂದ ಜನ ಗುಂಪು ಗುಂಪಾಗಿ ನಿಲ್ಲುವುದು, ಧಾರ್ಮಿಕ ಸಭೆ- ಸಮಾರಂಭ, ಸಂತೆಗಳಂತಹ ಕಾರ್ಯಗಳಿಂದ ದೂರವಿರಬೇಕು. ರೋಗದ ಬಗ್ಗೆ ಪ್ರತಿಯೊಬ್ಬರೂ ಸದಾ ಎಚ್ಚರಿಕೆಯಿಂದ ಇರಬೇಕು. ಮನೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಸಾಮಾಜಿಕ ಅಂತರ ಕಾಪಾಡುವ ಮೂಲಕ ಕೋವಿಡ್ ಹೊಡೆದೋಡಿಸಲು ಶ್ರಮಿಸಬೇಕು. ಜತೆಗೆ ಸುರಕ್ಷಾ ಕಿಟ್ ಬಳಸಬೇಕು ಎಂದರು.
ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆ ಮಾಡುತ್ತಿದ್ದಾರೆ. ಗಡಿ ಕಾಯುವ ಸೈನಿಕರು ದೇಶದ ಸರಹದ್ದಿನಲ್ಲಿ ದೇಶ ರಕ್ಷಿಸಿದರೆ, ದೇಶದ ಒಳಗಿರುವ ಕೋವಿಡ್ ಹೆಮ್ಮಾರಿಯಿಂದ ಜನರನ್ನು ರಕ್ಷಿಸುತ್ತಿರುವ ವಾರಿಯರ್ಗಳ ಸೇವೆ ಅನ್ಯೋನ್ಯವಾಗಿದೆ ಎಂದು ಅಭಿನಂದಿಸಿದರು.
ಗ್ರಾಪಂ ಅಧ್ಯಕ್ಷ ಶ್ರೀಶೈಲ ಬನಸೋಡೆ, ಬಿ.ಕೆ ನಂದಗೊಂಡ, ಸದಸ್ಯರಾದ ರಮೇಶ ಬಿರಾದಾರ, ಹಣಮಂತ ಕೋಳಿ, ಹುಸೇನಿ ಪಾಚಂಗೆ, ಲಕ್ಷ್ಮಣ ಸಿಂಧೆ, ಬಸವರಾಜ ಪೂಜಾರಿ, ಆರ್.ಕ್ಷತ್ರಿ, ಚಂದ್ರಕಾಂತ ಮೇತ್ರಿ, ಅಪ್ಪಾಸಾಹೇಬ ಹರಿಜನ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್