ಪರಿಸರ ಜಾಗೃತಿ ಕಾರ್ಯಕ್ರಮ
Team Udayavani, Jun 27, 2020, 6:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಂಡಿ: ಪರಿಸರ ಸಂರಕ್ಷಣೆ ಎಲ್ಲರ ಹೊಣೆ. ಗಿಡ-ಮರ ಬೆಳೆಸುವುದರಿಂದ ಸಕಾಲಕ್ಕೆ ಮಳೆ, ಶುದ್ಧ ಗಾಳಿ ಸಿಗುವ ಜತೆಗೆ ಭೂಮಿಯ ಉಷ್ಣತೆ ಸಮತೋಲನವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಅಧಿಕಾರಿ ಜಗದೀಶ ಬಂಡಾರಿ ಹೇಳಿದರು.
ತಾಲೂಕಿನ ಬಳ್ಳೊಳ್ಳಿ ಗ್ರಾಮದಲ್ಲಿ ಸರ್ವೋದಯ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಆಡಳಿತ ಮಂಡಳಿತ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಚ್ಚಿನ ಉಷ್ಣತೆಯಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತವೆ. ಕಲುಷಿತ ವಾತಾವರಣ ಉದ್ಭವವಾಗುತ್ತಿದೆ. ಈ ಎಲ್ಲ ಸಮಸ್ಯೆ ನಿವಾರಣೆಗೆ ಸಸ್ಯ ಪಾಲನೆಯೇ ಮದ್ದು. ಆದ್ದರಿಂದ ಪರಿಸರ ರಕ್ಷಣೆ ಎಲ್ಲರ ಕರ್ತವ್ಯವಾಗಲಿ ಎಂದರು. ಈ ವೇಳೆ ಕೃಷಿ ಮೇಲ್ವಿಚಾರಕ ಗುಂಡೆರಾಯ ಭೂಸನೂರ, ಸಂಸ್ಥೆ ಅಧ್ಯಕ್ಷೆ ಕೌಸರಬೇಗಂ ಮುಲ್ಲಾ, ಈರಣ್ಣ ವಾಲಿ, ಶಿವರಾಯ ತುಪ್ಪದ, ಗ್ರಾಪಂ ಉಪಾಧ್ಯಕ್ಷ ಮಹಾದೇವ ಕದರಿ, ತಮ್ಮಣ್ಣ ವಾಲಿಕಾರ, ಮಾಳಪ್ಪ ಶಿರಶ್ಯಾಡ, ಉಸ್ಮಾನ್ ಪಠಾಣ, ರೇವಪ್ಪ ಶಿರಶ್ಯಾಡ, ರಜಾಕ್ ಮನಿಯಾರ, ಅರ್ಜುನ ನಾಯ್ಕೋಡಿ, ವಲಯ ಮೇಲ್ವಿಚಾರಕ ಜಗದೀಶ ಕಂವಾರ, ಸೇವಾ ಪ್ರತಿನಿಧಿ ರೇಣುಕಾ ಕೋಳಿ, ಕನ್ಯಾಕುಮಾರಿ ಶಿರಶ್ಯಾಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ