ಸಂಕಷ್ಟದಲ್ಲಿದ್ದವರಿಗೆ ನೆರವು ನೀಡುವುದು ಧರ್ಮ
Team Udayavani, May 4, 2020, 3:13 PM IST
ಇಂಡಿ: ಶಾಸಕ ಯಶವಂತ್ರಾಯಗೌಡ ಪಾಟೀಲ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಲಾಕ್ಡೌನ್ದಿಂದ ಕೂಲಿ ಕೆಲಸ ಇಲ್ಲದೇ ಸಂಕಷ್ಟಕ್ಕೊಳಗಾದ ಬಡ ಕುಟುಂಬಗಳಿಗೆ ರವಿವಾರ ದಿನಸಿ ಕಿಟ್ ವಿತರಿಸಿದರು. ತನ್ಮೂಲಕ ಕ್ಷೇತ್ರದಲ್ಲಿ ಆಹಾರ ಸಾಮಗ್ರಿ ಕಿಟ್ ವಿತರಣೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರ ದೇಶದ ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ. ಇಂತಹ ಸಂಧರ್ಭದಲ್ಲಿ ನಿಮ್ಮ ಸಹಾಯಕ್ಕೆ ಬರುವುದು ಜನಪ್ರತಿನಿಧಿಯಾದ ನನ್ನ ಧರ್ಮವಾಗಿದೆ. ಕ್ಷೇತ್ರದ 80 ಗ್ರಾಮಗಳ 11 ಸಾವಿರ ಬಡವರು, ನಿರ್ಗತಿಕರಿಗೆ ಆಹಾರ ದಿನಸಿ ಕಿಟ್ ವಿತರಿಸಲು ಯೋಜಿಸಲಾಗಿದ್ದು, ಇದಕ್ಕಾಗಿ 33 ಲಕ್ಷ ರೂ. ವ್ಯಯಿಸಲಾಗಿದೆ. ಗ್ರಾಮದ ಮುಖಂಡರು ಬಡವರ ಮನೆಬಾಗಿಲಿಗೆ ಕಿಟ್ ತಲುಪಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬೇರೆ ಕಡೆ ದುಡಿಯಲು ಹೋಗಿ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ ಸುಮಾರು 400 ಕುಟುಂಬಗಳ ಸಮಸ್ಯೆಗಳನ್ನು ಶಾಸಕ ಯಶವಂತ್ರಾಯಗೌಡ ಪಾಟೀಲ ಆಲಿಸಿ ಅವರಿಗೆ ದಿನಸಿ ಕಿಟ್ ವಿತರಿಸಿದರು. ತಾಪಂ ಅಧ್ಯಕ್ಷ ಅಣ್ಣಾರಾಯ ಬಿದರಕೋಟಿ, ಗ್ರಾಪಂ ಅಧ್ಯಕ್ಷ ವಿಠ್ಠಲ ಗೌಡ ಪಾಟೀಲ, ಜಿಪಂ ಸದಸ್ಯ ಹಣಮಂತ ಖಂಡೇಕಾರ, ಶ್ರೀಕಾಂತ ಕುಡಿಗನೂರ, ಸಿದ್ಧಾರೂಢ ಮರಗೂರ, ಪ್ರಭು ಹೊಸಮನಿ, ಭೀರಪ್ಪ ಪೂಜಾರಿ, ಕಲ್ಲನಗೌಡ ಬಿರಾದಾರ, ಇಲಿಯಾಸ ಬೋರಾಮಣಿ, ಜಾವೀದ ಮೋಮಿನ, ಮಲ್ಲು ಮಡ್ಡಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ