ಅಧಿಕಾರಿಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಲಿ: ಪಾಟೀಲ
Team Udayavani, Apr 16, 2020, 5:57 PM IST
ಇಂಡಿ: ಅಧಿ ಕಾರಿಗಳ ಸಭೆಯಲ್ಲಿ ಶಾಸಕ ಯಶವಂತ್ರಾಯಗೌಡ ಪಾಟೀಲ ಮಾತನಾಡಿದರು.
ಇಂಡಿ: ವಿಜಯಪುರಕ್ಕೂ ವೈರಸ್ ಹರಡಿದ್ದು, ತಾಲೂಕಾಡಳಿತದ ಅಧಿಕಾರಿಗಳು ಅತೀ ಜಾಗ್ರತೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಕುರಿತು ನಡೆಸಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಮಹಾರಾಷ್ಟ್ರ ಮತ್ತು ಕರ್ನಾಟಕದ ಮಧ್ಯದಲ್ಲಿದ್ದೇವೆ. ಅತ್ತ ಮಹಾರಾಷ್ಟ್ರದ ಸೋಲ್ಲಾಪುರ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಕೋವಿಡ್ 19 ನಿಂದ ಸಾವನ್ನಪ್ಪಿದ್ದರೆ ಇತ್ತ ವಿಜಯಪುರದಲ್ಲೂ ಒಂದು ಸಾವು ಮತ್ತು 9 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯಲ್ಲಿ ವೇಗವಾಗಿ ಈ ಕೋವಿಡ್-19 ಹರಡುತ್ತಿದ್ದು, ನಮ್ಮ ತಾಲೂಕಿನ ಜನತೆ ಇದರ ಬಗ್ಗೆ ಎಚ್ಚರವಹಿಸಬೇಕಿದೆ.
ತಾಲೂಕು ಮಟ್ಟದ ಅಧಿಕಾರಿಗಳು ಈ ವೈರಸ್ ತಡೆಗೆ ಏನು ಮಾಡಬೇಕು? ಏನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಎಲ್ಲ ಇಲಾಖಾ ಅಧಿಕಾರಿಗಳು ಚರ್ಚಿಸಿ ಕಟ್ಟು ನಿಟ್ಟಾಗಿ ವೈರಸ್ ಹರಡುವಿಕೆ ತಡೆಗಟ್ಟಲು ಮುಂದಾಗಬೇಕು ಎಂದರು. ಹೊರದೇಶ ಮತ್ತು ಹೊರರಾಜ್ಯಗಳಿಂದ ಒಟ್ಟು 11 ಸಾವಿರ ಜನರು ಬಂದಿದ್ದು, ಅವರನ್ನೆಲ್ಲ ಹೋಂ ಕ್ವಾರಂಟೈನ್ ಮಾಡಿದ್ದು ಶ್ಲಾಘನೀಯ. ತಾಲೂಕಾಡಳಿತ ಹಾಗೂ ಜಿಲ್ಲಾಡಳಿತ ಇಷ್ಟು ದಿನಗಳಿಂದ ಶ್ರಮವಹಿಸಿದ್ದಕ್ಕೆ ಅಭಿನಂದಿಸಿದರು. ಕಂದಾಯ ಉಪವಿಭಾಗಾಧಿ ಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಡಿವೈಎಸ್ಪಿ ಎಂ.ಬಿ. ಸಂಕದ್, ತಹಶೀಲ್ದಾರ್ ಚಿದಾನಂದ ಕುಲಕರ್ಣಿ, ತಾಪಂ ಇಒ ವಿಜಯಕುಮಾರ ಆಜೂರ, ಆರೋಗ್ಯ ಅಧಿಕಾರಿ ಡಾ| ಅರ್ಚನಾ ಕುಲಕರ್ಣಿ, ಕೃಷಿ ಇಲಾಖಾ ಅ ಧಿಕಾರಿ ಮಹಾದೇವಪ್ಪ ಏವೂರ, ತೋಟಗಾರಿಕೆ ಅ ಧಿಕಾರಿ ಹಿರೇಮಠ, ಉಮೇಶ ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು