ಪಾಲನೆಯಾಗುತ್ತಿಲ್ಲ ಸಾಮಾಜಿಕ ಅಂತರ
Team Udayavani, Apr 19, 2020, 4:47 PM IST
ಇಂಡಿ: ಸಾಮಾಜಿಕ ಅಂತರ ಕಾಪಾಡದೆ ತರಕಾರಿ ಖರೀದಿಸಿದ ಜನ
ಇಂಡಿ: ಕೋವಿಡ್-19 ಮಹಾಮಾರಿ ಅಟ್ಟಹಾಸ ವಿಜಯಪುರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಸಹಿತ ಜನ ಸಾಮಾಜಿಕ ಅಂತರ ಕಾಪಾಡದೆ ಇರುವುದರಿಂದ ಇಂಡಿಯಲ್ಲೂ ಕೋವಿಡ್ -19 ಹರಡುವಿಕೆಗೆ ಅವಕಾಶ ಮಾಡಿ ಕೊಟ್ಟಂತಾಗುತ್ತಲಿದೆ.
ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಸಾರ್ವಜನಿಕರು ಸಂತೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುತ್ತಿಲ್ಲ. ರೇಷನ್ ಅಂಗಡಿ ಮುಂದೆ ಗುಂಪು ಗುಂಪಾಗಿ ನಿಲ್ಲುವುದು, ಬೈಕ್ನಲ್ಲಿ ಮೂರು ಜನ ಅಡ್ಡಾಡುವುದು ಸಾಮಾನ್ಯವಾಗಿದೆ. ಪಟ್ಟಣದ ನಾಲ್ಕೈದು ಕಡೆಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಮಂಗಳವಾರ ಹಾಗೂ ಶನಿವಾರ ಬೆಳಗ್ಗೆ 6ರಿಂದ 9ರವರೆಗೆ ಸಾಮಾಜಿಕ ಅಂತರ
ಕಾಪಾಡಿಕೊಂಡು ದಿನಸಿ, ಕಾಯಿಪಲ್ಲೆ, ಹಣ್ಣು-ಹಂಪಲು ಖರೀದಿ ಮಾಡಲಿ ಎಂಬ ಉದ್ದೇಶದಿಂದ ಸಂತೆ ಪ್ರಾರಂಭಿಸಲಾಗಿದೆ. ಆದರೆ ಜನತೆ ಇದನ್ನೆಲ್ಲವನ್ನು ಗಮನಿಸದೆ ಗುಂಪು ಗುಂಪಾಗಿ ನೂಕು ನುಗ್ಗಲು ಮಾಡುತ್ತ ಖರೀದಿಯಲ್ಲಿ ತೊಡಗಿರುವದು ವಿಷಾದನೀಯ. ವ್ಯಾಪಾರಸ್ಥರು ಹಾಗೂ ಗ್ರಾಹಕರು ಮಾಸ್ಕ್ ಹಾಕದೆ ಜಾಣ ಕುರುಡುತನ ಪ್ರದರ್ಶಸಿಸುತ್ತಿರುವದು ಕಂಡು ಬರುತ್ತಿದೆ.
ಕೋವಿಡ್ ಕುರಿತು ಸಾರ್ವಜನಿಕರಿಗೆ ಸಾಕಷ್ಟು ತಿಳಿವಳಿಕೆ ನೀಡಲಾಗಿದೆ. ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದು ಸಾರ್ವಜನಿಕರು ಮನೆಯಲ್ಲಿರಬೇಕು.
ಡಾ| ಅರ್ಚನಾ ಕುಲಕರ್ಣಿ
ತಾಲೂಕು ಆರೋಗ್ಯಾಧಿಕಾರಿ
ಪೊಲೀಸ್ ಇಲಾಖೆಯೂ ಸಾರ್ವಜನಿಕರಿಗೆ ತಿಳಿವಳಿಕೆ ಹೇಳಿದೆ. ನಮ್ಮ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದು ಜನ ಸ್ಪಂದಿಸದೇ ಇರುವುದು ಬೇಸರ ತರಿಸಿದೆ. ಅನವಶ್ಯಕವಾಗಿ ತಿರುಗಾಡುವವರ ಬೈಕ್ ವಶಪಡಿಸಿಕೊಳ್ಳಲಾಗುತ್ತಿದೆ.
ಎಂ.ಬಿ. ಸಂಕದ್, ಡಿವೈಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ