ಮತ್ತೆ 92 ಜನರಿಗೆ ಸೋಂಕು
Team Udayavani, Aug 4, 2020, 2:12 PM IST
ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 92 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3224ಕ್ಕೆ ಏರಿಕೆಯಾಗಿದೆ.
ಮತ್ತೂಂದೆಡೆ ಸೋಂಕಿತರಲ್ಲಿ ಇಬ್ಬರು ವೃದ್ಧರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಜಿಗಿದಿದೆ. ಸೋಮವಾರ ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 92 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3224ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ ಮತ್ತೆ 9 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಈ ವರೆಗೆ 2193 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 993 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಸೋಂಕಿತರಲ್ಲಿ ಮತ್ತೋರ್ವ ಮೃತಪಟ್ಟಿದ್ದು, ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇನ್ನು ಕೋವಿಡ್ ಸೋಂಕಿಗೆ ಬಲಿಯಾದ ಇಬ್ಬರು ವೃದ್ಧರನ್ನು 70 ವರ್ಷದ ಪಿ105949 ಹಾಗೂ ಪಿ1193371 ಸಂಖ್ಯೆಯ 70 ವರ್ಷದ ವೃದ್ಧೆ ಎಂದು ಗುರುತಿಸಲಾಗಿದೆ.
ಮೃತರಾದ ಇಬ್ಬರೂ ಸೋಂಕಿತರನ್ನು ಶಿಷ್ಟಾಚಾರದಂತೆ ಇಬ್ಬರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಗ್ರಾಮದ 74 ವರ್ಷದ ಪಿ105949 ಗುರುತಿನ ವೃದ್ಧ ಜು.27ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆ.2 ರಂದು ಮೃತಪಟ್ಟಿದ್ದಾರೆ. ತಾಳಿಕೋಟೆ ಪಟ್ಟಣದ ನಿವಾಸಿ 70 ವರ್ಷದ ಪಿ1193371 ಗುರುತಿನ ವೃದ್ಧೆ ಉಸಿರಾಟದ ತೊಂದರೆ, ರಕ್ತದೊತ್ತಡದಿಂದ ಜು.28ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಜು.31ರಂದು ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ