ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಆರಂಭ


Team Udayavani, Jul 3, 2022, 5:56 PM IST

21river

ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಆಗುತ್ತಿರುವುದರಿಂದ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಶುಕ್ರವಾರದಿಂದ ಒಳಹರಿವು ಆರಂಭಗೊಂಡಿದೆ.

ವಾಡಿಕೆಯಂತೆ ಮಳೆಗಾಲ ಆರಂಭವಾಗಿ ತಿಂಗಳು ಗತಿಸಿದರೂ ಆಲಮಟ್ಟಿಯ ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಆರಂಭವಾಗಿರಲಿಲ್ಲ. ವರುಣನ್ನು ನಂಬಿ ರೈತರು ಬಿತ್ತನೆ ಮಾಡಬೇಕೆಂದರೂ ಸಮರ್ಪಕವಾಗಿ ರೋಹಿಣಿ ಹಾಗೂ ಮೃಗಶಿರಾ ಮಳೆ ಆಗದಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಮಾಡಲಿಲ್ಲ.

ಸಾಮಾನ್ಯವಾಗಿ ಮುಂಗಾರು ಹಂಗಾಮಿನ ಆರಂಭಿಕ ಮಳೆಗಳು ಸಕಾಲಕ್ಕೆ ಸುರಿದು ನಂತರದ ಅಲ್ಪಸ್ವಲ್ಪ ಸುರಿದರೂ ಮುಂಗಾರು ಬೆಳೆಗಳನ್ನು ರೈತರು ಬಿತ್ತನೆ ಮಾಡುತ್ತಿದ್ದರು. ಇನ್ನು ಕೃಷ್ಣಾ ನದಿಯನ್ನು ನಂಬಿದ ರೈತರು ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ಸಕಾಲಕ್ಕೆ ಕಾಲುವೆಗಳ ಮೂಲಕ ಜಮೀನಿಗೆ ನೀರು ಹರಿಸುತ್ತಿದ್ದರಿಂದ ರೈತರಿಗೆ ಸ್ವಲ್ಪವಾದರೂ ಫಸಲು ಸಿಗುವಂತಾಗುತ್ತಿತ್ತು.

ಈ ಬಾರಿ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಜಿಲ್ಲೆಯಲ್ಲಿ ಹಾಗೂ ಕೃಷ್ಣೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸಕಾಲಕ್ಕೆ ಮಳೆ ಆಗದೇ ಇರುವುದರಿಂದ ರೈತರನ್ನು ಚಿಂತೆಗೀಡು ಮಾಡಿತ್ತು.

ಅಧಿಕಾರಿಗಳ ಜಾಣ್ಮೆ: 2016-17ನೇ ಸಾಲಿನಲ್ಲಿ ಜಲಾಶಯದ ಹಿನ್ನೀರನ್ನು ವ್ಯಾಪಕವಾಗಿ ಬಳಸಿಕೊಂಡಿದ್ದರಿಂದ ಜಲಚರಗಳು ಸಾವಿಗಿಡಾಗಿದ್ದವು. ಇದರಿಂದ ಪಾಠ ಕಲಿತಂತಿರುವ ಕೆಬಿಜೆನ್ನೆಲ್‌ ಅಧಿಕಾರಿಗಳು ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಇಲ್ಲದಿದ್ದರೂ ರೈತರ ಜಮೀನಿಗೆ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರುಣಿಸಿಯೂ ಕುಡಿಯುವ ನೀರು ಹಾಗೂ ಜಲಚರಗಳಿಗಾಗಿ ಜು. 1ರವರೆಗೂ ಒಟ್ಟು 48.209 ಟಿಎಂಸಿ ಅಡಿ ನೀರನ್ನು ಜಲಾಶಯದಲ್ಲಿ ಸಂಗ್ರಹ ಮಾಡಿಕೊಂಡಿರುವದು ನಾಗರಿಕರ ಪ್ರಶಂಸೆಗೆ ಪಾತ್ರವಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಅವಳಿ ಜಲಾಶಯಗಳಾಗಿರುವ ಆಲಮಟ್ಟಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಸಾಗರ ಮತ್ತು ನಾರಾಯಣಪುರದ ಬಸವಸಾಗರಗಳ ವ್ಯಾಪ್ತಿ ಸೇರಿದಂತೆ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ಕೃಷ್ಣಾ ಮೇಲ್ದಂಡೆ ಯೋಜನ ವ್ಯಾಪ್ತಿಯ ಎಲ್ಲ ಫಲಾನುಭವಿ ಜಿಲ್ಲೆಗಳ ಸುಮಾರು 6.22 ಲಕ್ಷ ಹೆಕ್ಟೇರ್‌ ಪ್ರದೇಶ ನೀರಾವರಿಗೊಳಪಡಲಿದೆ.

ಈಗ ಆರಂಭವಾಗಿರುವ ಒಳ ಹರಿವಿನಲ್ಲಿ ವ್ಯಾಪಕವಾಗಿ ಏರಿಕೆಯಾದರೆ 8-10ದಿನಗಳಲ್ಲಿಯೇ ಜಲಾಶಯಗಳು ಭರ್ತಿಯಾಗಲಿವೆ ಎನ್ನುವುದು ರೈತರ ಲೆಕ್ಕಾಚಾರ. 519.60 ಮೀ. ಗರಿಷ್ಠ ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಲ್ಲಿ ಶನಿವಾರ 513.15 ಮೀ. ಎತ್ತರವಾಗಿ 48.489 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಜಲಾಶಯಕ್ಕೆ 3,691ಕ್ಯೂಸೆಕ್‌ ನೀರು ಒಳ ಹರಿವು ಮತ್ತು ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಭಾಷ್ಪಿಭವನ ಸೇರಿ 451ಕ್ಯೂಸೆಕ್‌ ನೀರು ಹೊರ ಹೋಗುತ್ತಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.