ಸೇತುವೆಗೆ ನೇರ ರಸ್ತೆ ಕಲ್ಪಿಸಲು ಒತ್ತಾಯ


Team Udayavani, Feb 26, 2022, 5:44 PM IST

24road

ತಾಳಿಕೋಟೆ: ಪಟ್ಟಣದಿಂದ ಹಡಗಿನಾಳ ಗ್ರಾಮದ ಮಾರ್ಗವಾಗಿ ತೆರಳುವ ರಸ್ತೆಗೆ ಅಡ್ಡಲಾಗಿ ಹರಿಯುತ್ತಿರುವ ಡೋಣಿ ನದಿಗೆ ಮೇಲ್ಮಟ್ಟದ ಸೇತುವೆ ನಿರ್ಮಾಣಗೊಂಡಿದ್ದು ಸಂತಸಕರ. ಆದರೂ ಕೂಡಾ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಂಕು ಡೊಂಕು ನಿರ್ಮಿಸಲಾಗುತ್ತಿದ್ದು ಸದರಿ ಸೇತುವೆಗೆ ನೇರ ರಸ್ತೆಯನ್ನು ಕಲ್ಪಿಸಿಕೊಡಬೇಕೆಂದು ಹಡಗಿನಾಳ, ಹರನಾಳ, ಕಲ್ಲದೇವನಹಳ್ಳಿ ಮತ್ತು ಮೂಕಿಹಾಳ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಸೇತುವೆ ಕಾಮಗಾರಿಯ ಟೆಂಡರ್‌ ಡಿಪಿಆರ್‌ನಲ್ಲಿ ಸೇತುವೆಗೆ ನೇರ ರಸ್ತೆಯನ್ನು ಗುರುತಿಸಿದರೂ ಕೂಡಾ ಗುತ್ತಿಗೆದಾರರು ಅಂಕು ಡೊಂಕು ರಸ್ತೆಯನ್ನು ನಿರ್ಮಿಸುತ್ತಿದ್ದಾರೆ. ಈ ರೀತಿ ಅಂಕು ಡೊಂಕು ರಸ್ತೆ ನಿರ್ಮಿಸುವುದರಿಂದ ಅಪಘಾತ ಸಂಖ್ಯೆಗಳು ಹೆಚ್ಚಾಗುತ್ತದೆ. ಅಲ್ಲದೇ ಯಾವಾಗಲು ಯಾವುದೇ ಸೇತುವೆ ನಿರ್ಮಾಣ ಮಾಡಿದರೂ ಕೂಡಾ ಕನಿಷ್ಠ 100 ಮೀ. ನೇರ ರಸ್ತೆ ನಿರ್ಮಾಣ ಮಾಡಬೇಕೆಂಬ ನಿಯಮವಿದೆ. ಹೀಗಿದ್ದರೂ ಅದನ್ನು ಧಿಕ್ಕರಿಸಿ ಅಂಕು ಡೊಂಕು ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆಗೆ ವಾಹನ ದಟ್ಟನೆ ಹೆಚ್ಚಾಗಿರುವುದರಿಂದ ಬಸ್‌ ನಿಲ್ದಾಣದವರೆಗೆ ನೇರ ರಸ್ತೆ ನಿರ್ಮಿಸುವದು ಅಗತ್ಯವಾಗಿದೆ. ಈ ರಸ್ತೆಗೆ ಹೊಂದಿಕೊಂಡು ಒಂದು ಭಾಗದಲ್ಲಿ ರುದ್ರಭೂಮಿ ಇದೆ. ಇನ್ನೊಂದು ಬದಿ ಎಡ ಭಾಗದಲ್ಲಿ ರಿ.ಸ.ನಂ. 98.00,100.104 ಜಮೀನು ಇದ್ದು ಕಾರಣ ಎರಡೂ ಬದಿಗೂ ಸಂಪರ್ಕ ರಸ್ತೆ (ಸರ್ವಿಸ್‌ ರೋಡ್‌) ನಿರ್ಮಿಸುವುದು ಅಗತ್ಯವಿದೆ. ಕಾರಣ ಅಂಕು ಡೊಂಕು ರಸ್ತೆ ನಿರ್ಮಿಸುತ್ತಿರುವವರ ಮೇಲೆ ಕ್ರಮ ಜರುಗಿಸಿ ಸೇತುವೆಗೆ ಬಸ್‌ ನಿಲ್ದಾಣದವರೆಗೆ ನೇರ ರಸ್ತೆ ನಿರ್ಮಾಣಕ್ಕೆ ಹಾಗೂ ಎರಡೂ ಬದಿಗೆ ಸಂಕರ್ಪ ರಸ್ತೆಯನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮುಖಂಡರಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ರತನಸಿಂಗ್‌ ಕೊಕಟನೂರ, ಸುರೇಶ ಹಜೇರಿ, ಅರುಣ ದಡೇದ, ರವಿ ಕಟ್ಟಿಮನಿ, ಸುರೇಶ ಅಮರಸಿಂಗ್‌ ಹಜೇರಿ, ಗ್ರಾಮಸ್ಥರಾದ ಚನ್ನಪ್ಪಗೌಡ ದೇಸಾಯಿ, ಕುಮಾರಗೌಡ ದೇಸಾಯಿ, ಬಾಪುಗೌಡ ದೇಸಾಯಿ, ಮಲ್ಲಪ್ಪ ಮಾದರ, ಲಕ್ಷ್ಮಣ ವಾಲೀಕಾರ, ಶಿವಣ್ಣ ಕುಂಬಾರ, ಚಂದ್ರಶೇಖರ ಮಾದರ, ಚನ್ನಪ್ಪ ಕಟ್ಟಿಮನಿ, ಚಿದಾನಂದ ಹರಿಜನ, ಮಹಾದೇವಪ್ಪ ನಡಕೋರ, ಮಲ್ಲಿಕಾರ್ಜುನ, ಮೊದಲಾದವರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.