ಸೇತುವೆಗೆ ನೇರ ರಸ್ತೆ ಕಲ್ಪಿಸಲು ಒತ್ತಾಯ
Team Udayavani, Feb 26, 2022, 5:44 PM IST
ತಾಳಿಕೋಟೆ: ಪಟ್ಟಣದಿಂದ ಹಡಗಿನಾಳ ಗ್ರಾಮದ ಮಾರ್ಗವಾಗಿ ತೆರಳುವ ರಸ್ತೆಗೆ ಅಡ್ಡಲಾಗಿ ಹರಿಯುತ್ತಿರುವ ಡೋಣಿ ನದಿಗೆ ಮೇಲ್ಮಟ್ಟದ ಸೇತುವೆ ನಿರ್ಮಾಣಗೊಂಡಿದ್ದು ಸಂತಸಕರ. ಆದರೂ ಕೂಡಾ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಂಕು ಡೊಂಕು ನಿರ್ಮಿಸಲಾಗುತ್ತಿದ್ದು ಸದರಿ ಸೇತುವೆಗೆ ನೇರ ರಸ್ತೆಯನ್ನು ಕಲ್ಪಿಸಿಕೊಡಬೇಕೆಂದು ಹಡಗಿನಾಳ, ಹರನಾಳ, ಕಲ್ಲದೇವನಹಳ್ಳಿ ಮತ್ತು ಮೂಕಿಹಾಳ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಸೇತುವೆ ಕಾಮಗಾರಿಯ ಟೆಂಡರ್ ಡಿಪಿಆರ್ನಲ್ಲಿ ಸೇತುವೆಗೆ ನೇರ ರಸ್ತೆಯನ್ನು ಗುರುತಿಸಿದರೂ ಕೂಡಾ ಗುತ್ತಿಗೆದಾರರು ಅಂಕು ಡೊಂಕು ರಸ್ತೆಯನ್ನು ನಿರ್ಮಿಸುತ್ತಿದ್ದಾರೆ. ಈ ರೀತಿ ಅಂಕು ಡೊಂಕು ರಸ್ತೆ ನಿರ್ಮಿಸುವುದರಿಂದ ಅಪಘಾತ ಸಂಖ್ಯೆಗಳು ಹೆಚ್ಚಾಗುತ್ತದೆ. ಅಲ್ಲದೇ ಯಾವಾಗಲು ಯಾವುದೇ ಸೇತುವೆ ನಿರ್ಮಾಣ ಮಾಡಿದರೂ ಕೂಡಾ ಕನಿಷ್ಠ 100 ಮೀ. ನೇರ ರಸ್ತೆ ನಿರ್ಮಾಣ ಮಾಡಬೇಕೆಂಬ ನಿಯಮವಿದೆ. ಹೀಗಿದ್ದರೂ ಅದನ್ನು ಧಿಕ್ಕರಿಸಿ ಅಂಕು ಡೊಂಕು ರಸ್ತೆ ನಿರ್ಮಿಸಲಾಗುತ್ತಿದೆ. ಈ ರಸ್ತೆಗೆ ವಾಹನ ದಟ್ಟನೆ ಹೆಚ್ಚಾಗಿರುವುದರಿಂದ ಬಸ್ ನಿಲ್ದಾಣದವರೆಗೆ ನೇರ ರಸ್ತೆ ನಿರ್ಮಿಸುವದು ಅಗತ್ಯವಾಗಿದೆ. ಈ ರಸ್ತೆಗೆ ಹೊಂದಿಕೊಂಡು ಒಂದು ಭಾಗದಲ್ಲಿ ರುದ್ರಭೂಮಿ ಇದೆ. ಇನ್ನೊಂದು ಬದಿ ಎಡ ಭಾಗದಲ್ಲಿ ರಿ.ಸ.ನಂ. 98.00,100.104 ಜಮೀನು ಇದ್ದು ಕಾರಣ ಎರಡೂ ಬದಿಗೂ ಸಂಪರ್ಕ ರಸ್ತೆ (ಸರ್ವಿಸ್ ರೋಡ್) ನಿರ್ಮಿಸುವುದು ಅಗತ್ಯವಿದೆ. ಕಾರಣ ಅಂಕು ಡೊಂಕು ರಸ್ತೆ ನಿರ್ಮಿಸುತ್ತಿರುವವರ ಮೇಲೆ ಕ್ರಮ ಜರುಗಿಸಿ ಸೇತುವೆಗೆ ಬಸ್ ನಿಲ್ದಾಣದವರೆಗೆ ನೇರ ರಸ್ತೆ ನಿರ್ಮಾಣಕ್ಕೆ ಹಾಗೂ ಎರಡೂ ಬದಿಗೆ ಸಂಕರ್ಪ ರಸ್ತೆಯನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮುಖಂಡರಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ರತನಸಿಂಗ್ ಕೊಕಟನೂರ, ಸುರೇಶ ಹಜೇರಿ, ಅರುಣ ದಡೇದ, ರವಿ ಕಟ್ಟಿಮನಿ, ಸುರೇಶ ಅಮರಸಿಂಗ್ ಹಜೇರಿ, ಗ್ರಾಮಸ್ಥರಾದ ಚನ್ನಪ್ಪಗೌಡ ದೇಸಾಯಿ, ಕುಮಾರಗೌಡ ದೇಸಾಯಿ, ಬಾಪುಗೌಡ ದೇಸಾಯಿ, ಮಲ್ಲಪ್ಪ ಮಾದರ, ಲಕ್ಷ್ಮಣ ವಾಲೀಕಾರ, ಶಿವಣ್ಣ ಕುಂಬಾರ, ಚಂದ್ರಶೇಖರ ಮಾದರ, ಚನ್ನಪ್ಪ ಕಟ್ಟಿಮನಿ, ಚಿದಾನಂದ ಹರಿಜನ, ಮಹಾದೇವಪ್ಪ ನಡಕೋರ, ಮಲ್ಲಿಕಾರ್ಜುನ, ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್