ಬಳಗಾನೂರ ಕೆರೆಯಿಂದ ನೀರು ಹರಿಸಲು ಸೂಚನೆ


Team Udayavani, Jan 3, 2021, 5:41 PM IST

ಬಳಗಾನೂರ ಕೆರೆಯಿಂದ ನೀರು ಹರಿಸಲು ಸೂಚನೆ

ಸಿಂದಗಿ: ಸಿಂದಗಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸಮಸ್ಯೆಪರಿಹರಿಸಲು ಶೀಘ್ರದಲ್ಲಿ ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಹರಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಎಂ.ಸಿ. ಮನಗೂಳಿ ಅವರು ಅಧಿ ಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಬಳಗಾನೂರ ಕೆರೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅವರು ಮಾತನಾಡಿದರು. ಕಳೆದ ಬಾರಿ ಬೇಸಿಗೆಯಲ್ಲಿ ಸಿಂದಗಿಯ ಜನತೆ ನೀರಿನತೊಂದರೆ ಆಗಬಾರದೆಂದು ಮುಂಜಾಗ್ರತಾ ಕ್ರಮವಾಗಿಸರ್ಕಾರಕ್ಕೆ ಒತ್ತಡ ಹೇರಿ ಹಂತ ಹಂತವಾಗಿ ತಾಲೂಕಿನಯರಗಲ್‌ ಬಿ.ಕೆ. ಗ್ರಾಮದ ಬಳಿ ಇರುವ ಕಾಲುವೆ ಮೂಲಕ ನೀರನ್ನು ಕೆರೆಗೆ ತುಂಬಿಸಿ ನೀರಿನ ಆಹಾಕಾರ ತಗ್ಗಿಸಲಾಯಿತು. ಸಿಂದಗಿ ಪಟ್ಟಣದ ಜನತೆಯ ಶಾಶ್ವತ ಕುಡಿಯುವ ನೀರಿನಬವಣೆ ನೀಗಿಸಲು ತಾಲೂಕಿನ ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಸಂಗ್ರಹಿಸುವ ಕಾರ್ಯ ಶೀಘ್ರದಲ್ಲಿ ಲೋಕಾರ್ಪಣೆ ಮಾಡಬೇಕು ಎಂದು ಜಲ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದಂತೆ ಮಾತುಗಳನ್ನು ಈಡೇರಿಸುತ್ತಿದ್ದೇನೆ. ಸಮ್ಮಿಶ್ರ ಸರಕಾರವಿದ್ದಸಂದರ್ಭದಲ್ಲಿ 27.10 ಕೋಟಿ ರೂ. ಅನುದಾನದಲ್ಲಿತಾಲೂಕಿನ ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರುಹರಿಸಲು ಯೋಜನೆಯನ್ನು ಹಾಕಲಾಯಿತು. ಅದರಂತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಸರಬರಾಜು ಮಾಡಲು ಪೈಪ್‌ಲೈನ್‌ ಜೋಡಣೆಯಾಗಿದೆ. ಜಾಕ್‌ವೆಲ್‌ ಕಾಮಗಾರಿ ನಡೆಯುತ್ತಿದ್ದುಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಸಿ ಸಿಂದಗಿ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ದಿನದ 24 ಗಂಟೆ ನೀರು ಸರಬರಾಜು ಮಾಡುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದಲ್ಲಿ ಬರುವ ಎಲ್ಲ ಸಣ್ಣ ಮತ್ತು ದೊಡ್ಡ ಕೆರೆಗಳಿಗೆಮತ್ತು ಹಳ್ಳಗಳಿಗೆ ನೀರು ತುಂಬಿಸುವ ಕಾರ್ಯ ನಡೆದಿದೆ.ಅವರ ಅವ ಧಿಯಲ್ಲಿ ತಾಲೂಕಿನ ಯಂಕಂಚಿ ಹಳ್ಳಕ್ಕೆ 50 ಲಕ್ಷರೂ. ಚಾಂದಕವಠೆ ಹಳ್ಳಕ್ಕೆ 20 ಲಕ್ಷ ರೂ. ಹಾಗೂ ಗೋಲಗೇರಿಹಳ್ಳಕ್ಕೆ 50 ಲಕ್ಷ ರೂ. ಅನುದಾನದಲ್ಲಿ ಹೂಳೆತ್ತುವ ಕಾರ್ಯ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಸಾಕಷ್ಟು ಮಳೆಯಾಗಿದ್ದರಿಂದ ಹಳ್ಳಗಳು ತುಂಬಿವೆ ಎಂದು ಹೇಳಿದರು.

ತಾಲೂಕಿನ ಯರಗಲ್‌ ಬಿ.ಕೆ. ಗ್ರಾಮದ ಹತ್ತಿರದ ಕಾಲುವೆಯಿಂದ ಸಿಂದಗಿ ಪಟ್ಟಣದಲ್ಲಿನ ಕೆರೆಗೆ ನೀರುತುಂಬಿಸಲಾಗಿದೆ. ಇದರಿಂದ ಕಳೆದ ಬೇಸಿಗೆಯಲ್ಲಿಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿಲ್ಲ.ಆಲಮೇಲ, ಹಿಕ್ಕಣಗುತ್ತಿ, ಓತಿಹಾಳ, ಪುರದಾಳ, ಯಂಕಂಚಿ,ಗೂಗಿಹಾಳ, ಗೋಲಗೇರಿ, ಬಬಲೇಶ್ವರ, ಮೋರಟಗಿ,ಸಾಸಾಬಾಳ, ಬಳಗಾನೂರ ಕೆರೆಗಳಿಗೆ ಕಾಲುವೆಗಳಿಂದ ನೀರು ತುಂಬಿಸಲಾಗಿದೆ. ಇದರಿಂದ ಆಯಾ ಭಾಗಗಳಲ್ಲಿ ಅಂತರ್ಜಲ ಹೆಚ್ಚಾಗಿದೆ ಎಂದು ಹೇಳಿದರು.

ಜಲ ಮಂಡಳಿ ಕಾರ್ಯ ನಿರ್ವಾಹಕ ಅಭಿಯಂತರ ಶ್ರೀನಿವಾಸ ಕುಲಕರ್ಣಿ ಮಾತನಾಡಿ, ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಸರಬರಾಜು ಮಾಡಲುಕಾಮಗಾರಿ ವೇಗವಾಗಿ ನಡೆಯುತ್ತಿದೆ. ನೀರು ಸರಬರಾಜುಕಾಮಗಾರಿಗೆ 12 ಮೀ.ಗೆ ಒಂದರಂತೆ ಸುಮಾರು 1400ಪೈಪ್‌ಲೈನ್‌ಗಳ ಜೋಡಣೆ ಕಾರ್ಯ ಪೂರ್ಣಗೊಂಡಿದೆ. ಈಯೋಜನೆಯ ಕಾಮಗಾರಿ ಮುಂಬರುವ ಮೂರು ತಿಂಗಳಲ್ಲಿ ಪೂರ್ಣಗೊಳ್ಳುವುದು. ಏಪ್ರಿಲ್‌ ವೇಳೆಗೆ ನೀರುವ ಹರಿಸುವಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.ಅಭಿಯಂತರ ಅಶೋಕ ತಳಕೇರಿ, ಮೇಲ್ವಿಚಾರಕ ಮಲ್ಲುದೇವರ, ವ್ಯವಸ್ಥಾಪಕ ಅರುಣ ಪಾಟೀಲ, ಪ್ರಸನ್‌ ಜೇರಟಗಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.