![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಬೇಕಿನಾಳ ಗ್ರಾಪಂನಲ್ಲಿ ಅವ್ಯವಹಾರ
Team Udayavani, Jan 3, 2020, 2:37 PM IST
![vp-tdy-1](https://www.udayavani.com/wp-content/uploads/2020/01/vp-tdy-1-620x279.jpg)
ಸಿಂದಗಿ: ತಾಲೂಕಿನ ಬೇಕಿನಾಳ ಗ್ರಾಮ ಪಂಚಾಯತಿ ವಿವಿಧ ಯೋಜನೆಗಳ ಅನುದಾನ ದುರ್ಬಳಕೆ ಮಾಡುವ ಮೂಲಕ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ. ಈ ಅವ್ಯವಹಾರವನ್ನು ತನಿಖೆ ನಡೆಸಬೇಕು ಎಂದು ಬೇಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಗುರುವಾರ ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಬೇಕಿನಾಳ ಗ್ರಾಮ ಪಂಚಾಯತಿ ಅಧ್ಯಕ್ಷ, ಪಿಡಿಒ ಮತ್ತು ಕಂಪ್ಯೂಟರ್ ಆಪರೇಟರ್ ಸೇರಿದಂತೆ ಸಾಕಷ್ಟು ಹಗರಣ ಮಾಡಿದ್ದಾರೆ. 14ನೇ ಹಣಕಾಸಿನ ಯೋಜನೆಯಲ್ಲಿ 30-35 ಲಕ್ಷ ರೂ., 192 ಸೌಚಾಲಯದ ಅನುದಾನ ದುರ್ಬಳಕೆ, 80 ಲಕ್ಷ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ ಹೀಗೆ ಗ್ರಾಮಪಂಚಾಯತಿಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿದ್ದಾರೆ. ಈ ಕುರಿತು ಮೇಲಾಧಿಕಾರಿಗಳಿಗೆ ಸಾಕಷ್ಟು ಸಲ ಮೌಖೀಕವಾಗಿಹಾಗೂ ಲಿಖೀತವಾಗಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಕಿನಾಳ ಗ್ರಾಪಂ ಹಗರಣವನ್ನು ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಬೇಕು. ತನಿಖೆ ಕೈಕೊಳ್ಳದಿದ್ದರೇ ಉಗ್ರ ಹೋರಾಟ ಕೈಕೊಳ್ಳಬೇಕಾಗುತ್ತದೆ. ಜಿಪಂ ಸಿಇಒ ಬಂದು ಮನವಿ ಸ್ವೀಕರಿಸುವವರೆಗೂ ಧರಣಿ ಮುಂದುವರೆಸುತ್ತೇವೆ ಎಂದು ಅ ಧಿಕಾರಿಗೆಳಿಗೆ ಎಚ್ಚರಿಕೆ ನೀಡಿದರು.
ತಾಪಂ ಸದಸ್ಯ ಎಂ.ಎನ್. ಕಿರಣರಾಜ, ಡಾ| ದಸ್ತಗೀರ ಇಂಗಳಗಿ, ಡಿಎಸ್ಎಸ್ ಸಂಚಾಲಕ ವಾಯ್.ಸಿ. ಮಯೂರ, ಹೂಯೋಗಿ ತಳ್ಳೋಳ್ಳಿ, ರಾಮನಗೌಡ ಬಿರಾದಾರ, ಬಸನಗೌಡ ಗುಂಡಕನಾಲ, , ಸಂತೋಷ ಟಿಖಾರೆ, ರಸುಲ್ ಮಳ್ಳಿ, ಶರಣಪ್ಪ ಕಟ್ಟಿಮನಿ,ಗುರುಪಾದಗೌಡ ಪಾಟೀಲ, ಸಂಗಮ್ಮ ಕಟ್ಟಿಮನಿ, ಕಾಸಯ್ಯ ಹಿರೇಮಠ, ಸಮಗಮ್ಮ ಗೊಟಗುಣಕಿ ಸೇರಿದಂತೆ ನೂರಾರು ಜನ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.