ವಿಜಯಪುರ: ಸಾಗುವಳಿ ಹಕ್ಕುಪತ್ರ ವಿತರಿಸಿ

ಎರಡು ಭೂಮಿಗಳಲ್ಲಿ 55 ಜನ ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದೇವೆ.

Team Udayavani, Feb 4, 2021, 6:36 PM IST

ವಿಜಯಪುರ: ಸಾಗುವಳಿ ಹಕ್ಕುಪತ್ರ ವಿತರಿಸಿ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಬೇನಾಳ ಗ್ರಾಮಸ್ಥರಿಗೆ ಭೂಮಿ ಸಾಗುವಳಿ ಆಸ್ತಿ ಹಕ್ಕುಪತ್ರ ವಿತರಿಸಲು ಆಗ್ರಹಿಸಿ ಭಾರತೀಯ ದಲಿತ ಪ್ಯಾಂಥರ್‌ ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಂಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಭೀಮಶಿ ಕಲಾದಗಿ ಮಾತನಾಡಿ, ಬಸವನಬಾಗೇವಾಡಿ ತಾಲೂಕಿನ ಬೇನಾಳ ಗ್ರಾಮದ ಸ.ನಂ. 221 ಕ್ಷೇತ್ರ 109 ಎಕರೆ 34 ಗುಂ. ಹಾಗೂ ಸ.ನಂ. 310 ಕ್ಷೇತ್ರ 125 ಎಕರೆ ವಂದಾಲ ಗ್ರಾಮ ಈ ಪ್ರಕಾರ ಆಸ್ತಿಗಳಿವೆ. ಜಮೀನಿನಲ್ಲಿ ಸುಮಾರು ವರ್ಷಗಳಿಂದ ಕಬಾ ವಹಿವಾಟಿನಿಂದ ಗ್ರಾಮದ ದಲಿತರು ಸಾಗುವಳಿ ಮಾಡುತ್ತ ಬಂದಿದ್ದೇವೆ. ಕಾರಣ ಕಂದಾಯ ಅ ಧಿಕಾರಿಗಳಿಗೆ ಸದರಿ ವಿಷಯ ಪ್ರಯುಕ್ತ ಮನವಿ ಸಲ್ಲಿಸಲಾಗಿದೆ.

ಭೂಮಿ ಉಳುವವನಿಗೆ ಹಕ್ಕು ಪತ್ರ ಕೊಡುವ ಕುರಿತು ಹಲವು ಬಾರಿ ನಾವು ಮನವಿ ಮಾಡಿದ್ದೇವೆ. ಆದರೆ ತಮಗೆ ಆಸ್ತಿ ಮಂಜೂರು ಮಾಡುವ ಅಧಿಕಾರ ಇಲ್ಲ. ಭೂಮಿ ಮಂಜೂರು ಮಾಡಲು ಅವಕಾಶ ಇರುವುದಿಲ್ಲ ಎಂದಿರುವ ಬಸವನಬಾಗೇವಾಡಿ ತಹಶೀಲ್ದಾರ್‌ ರು 18-1-2021ರಂದು ಹಿಂಬರಹ ನೀಡಿದ್ದಾರೆ ಎಂದು ದೂರಿದರು. ಭಾರತೀಯ ದಲಿತ ಪ್ಯಾಂಥರ್‌ ಜಿಲ್ಲಾಧ್ಯಕ್ಷ ಬಸವರಾಜ ಗುಡಿಮನಿ ಮಾತನಾಡಿ, ಕರ್ನಾಟಕ ಸರಕಾರ ಭೂಮಿ ಅರಣ್ಯ ಭೂಮಿ ಸಾಗುವಳಿ ಮಾಡುವುದಕ್ಕೆ ಫಾರ್ಮ್ 57 ಎರಡು ಭೂಮಿಗಳಲ್ಲಿ 55 ಜನ ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದೇವೆ.

ಸಾಗುವಳಿದಾರರಲ್ಲಿ ಎಲ್ಲರೂ ದಲಿತರೇ ಇದ್ದೇವೆ. ಕರ್ನಾಟಕ ಸರಕಾರ ಕಂದಾಯ ಕಾನೂನು ಪ್ರಕಾರ ಅರಣ್ಯ ಭೂಮಿ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ಕೊಡಬೇಕು ಎಂದು ಆಗ್ರಹಿಸಿದರು. ಸುಪ್ರೀಂ ಕೋರ್ಟ್‌ ಅರಣ್ಯ ಭೂಮಿ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ಕೊಡುವಂತೆ ಅದೇಶಿಸಿದೆ. ಇದೀಗ ಅಕ್ರಮ ಸಕ್ರಮ ಸಮಿತಿ ರಚನೆಯಾಗಿದ್ದು, ನಮ್ಮ ದಾಖಲೆ ಪತ್ರ ಪರಿಶೀಲಿಸಬೇಕು. ಕೂಡಲೇ ಎಲ್ಲ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಿ ನಮಗೆ ಅನುಕೂಲ ಕಲ್ಪಿಸಿಕೊಡಲು ಒತ್ತಾಯಿಸಿದರು.

ಲಕ್ಷ್ಮಣ ಹಂದ್ರಾಳ, ಶಟ್ಟೆಪ್ಪ ಜೀರಲದಿನ್ನಿ, ಚಂದ್ರಪ್ಪ ಮಾದರ, ನಾಮದೇವ ಬಡಿಗೇರ, ಯಮನಪ್ಪ ಬೋರಲದಿನ್ನಿ, ಮಹಾದೇವಪ್ಪ ತಳವಾರ, ಬಾಳಪ್ಪ ಗುಡಿಮನಿ, ಭೀಮಪ್ಪ ಬಡಿಗೇರ, ಭೀಮವ್ವ ಬಡಿಗೇರ, ಮುಚಖಂಡೆ ತಳವಾರ, ನಿಜವ್ವ ಬಡಿಗೇರ, ಹನುಮವ್ವ ಗುಡಿಮನಿ, ನೀಲವ್ವ ತಳವಾರ, ಶಂಕ್ರವ್ವ ತಳವಾರ, ಬಸಪ್ಪ ವಂದಾಲ, ಸುರೇಖಾ ರಜಪೂತ ಇದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.