ಮೊಸಳೆ ಸೆರೆ ಹಿಡಿದ ಇಟಗಿ ಗ್ರಾಮಸ್ಥರು
Team Udayavani, Mar 10, 2019, 9:58 AM IST
ನಿಡಗುಂದಿ: ಹಳ್ಳದಲ್ಲಿದ್ದ ಬೃಹತ್ ಮೊಸಳೆಯೊಂದನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಸಮೀಪದ ಇಟಗಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ ಹರಿಂದ್ರಾಳ ಕುಲಕರ್ಣಿ ಎಂಬುವರ ಜಮೀನಿನಲ್ಲಿರುವ ಮನೆ ಮುಂದೆ ರಾತ್ರಿ ಕೂಲಿ ಕಾರ್ಮಿಕರು ಮಲಗಿದ್ದರು. ರಾತ್ರಿ 10ರ ಸುಮಾರಿಗೆ ಏಕಾಏಕಿ ನಾಯಿಗಳು ಬೊಗಳುವುದನ್ನು ಕಂಡು ಎಚ್ಚೆತ್ತುಕೊಂಡ ಕಾರ್ಮಿಕರು
ನೋಡಿದಾಗ ಮನೆ ಹತ್ತಿರವೇ ಬೃಹತ್ ಮೊಸಳೆ ಬಂದಿರುವುದನ್ನು ಕಂಡು ಭಯಭೀತರಾಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.
ಗ್ರಾಮಸ್ಥರು ಸೇರುತ್ತಿದ್ದಂತೆ ಮೊಸಳೆ ಜಮೀನಿಗೆ ಹೊಂದಿಕೊಂಡಿರುವ ಹಳ್ಳದ ಗುಂಡಿಗೆ ಹೋಗಿತ್ತು. ನಂತರ ಗ್ರಾಮಸ್ಥ ರೆಲ್ಲ ಸೇರಿ ಹಗ್ಗ ಹಾಗೂ ಜೆಸಿಬಿ ಸಹಾಯದಿಂದ ಸುಮಾರು ಒಂದೆರಡು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸೆರೆ ಹಿಡಿದ ಮೊಸಳೆಯನ್ನು ಟ್ರಾಕ್ಟರ್ ನಲ್ಲಿ ಹಾಕಿ ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರಿಸಿದರು. ಗ್ರಾಮಕ್ಕೆ ಮೊಸಳೆ ಬಂದಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರೆಲ್ಲ ಕುತೂಹಲದಿಂದ ತಂಡೋತಂಡವಾಗಿ ಬಂದು ಮೊಸಳೆ ಹಿಡಿಯುವ ಕಾರ್ಯಾಚರಣೆ ವೀಕ್ಷಿಸಿದರು.
ತಪ್ಪಿದ ಅನಾಹುತ: ಕಬ್ಬು ಕಟಾವು ಬಂದಿದ್ದ ಕೂಲಿ ಕಾರ್ಮಿಕರು ಎಚ್ಚೆತ್ತುಕೊಂಡು ಈ ವಿಷಯ ತಿಳಿಸದಿದ್ದರೆ ಭಾರಿ ಅನಾಹುತವಾಗುವ ಸಾಧ್ಯತೆ ಇತ್ತು. ಮೊಸಳೆ ಸುಮಾರು 12 ಅಡಿಗೂ ಹೆಚ್ಚು ಉದ್ದವಿತ್ತು ಎಂದು ಗ್ರಾಮದ ಯುವಕ ಭೀಮಣ್ಣ ಹೆಬ್ಟಾಳ ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು