ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಹೃದಯಾಘಾತದಿಂದ ನಿಧನ
Team Udayavani, Jan 21, 2023, 1:27 AM IST
ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (55) ಶುಕ್ರವಾರ ತಡರಾತ್ರಿ ತೀವ್ರ ಹೃದಯಾಘಾತದಿಂದ ನಿಧನಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆ ಮಧ್ಯಾಹ್ನ ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಸಿಂದಗಿ ಪಟ್ಟಣಕ್ಕೆ ಮರಳಿದ್ದ ಅವರು, ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದರು.
ಮೂರು ದಿ️ನಗಳ ಹಿಂದಷ್ಟೇ ಸಿಂದಗಿಯಲ್ಲಿ ಪಂಚರತ್ನ ಸಮಾವೇಶ ಆಯೋಜಿಸಿದ್ದ ಸೋಮಜಾಳ, ಕುಮಾರಸ್ವಾಮಿ ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವಾಗಲೇ ಕೊನೆಯುಸಿರೆಳೆದಿ️ದ್ದಾರೆ. ಮೂಲತಃ ಅಲಮೇಲ ತಾಲೂಕು ಸೋಮಜಾಳ ಗ್ರಾಮದವರಾಗಿದ್ದ ಅವರು, ಹದಿ️ನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ: ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ: ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ