ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!


Team Udayavani, Jan 28, 2021, 9:10 AM IST

ಎಂ.ಸಿ. ಮನಗೂಳಿ

ವಿಜಯಪುರ: ವಿಜಯಪುರ ಜಿಲ್ಲೆಯ ರಾಜಕೀಯದ ಮಟ್ಟಿಗೆ ಮುತ್ಯಾ ಎಂದೇ ಚಿರಪರಿಚಿರಾಗಿದ್ದ ಸಿಂದಗಿ ಶಾಸಕ, ಮಾಜಿ ಸಚಿವ ಎಂ.ಸಿ.ಮನಗೂಳಿ ರಾಜಕೀಯ ಬದ್ದತೆಗೆ ಹೆಸರಾಗಿದ್ದರು.

ಜನತಾ ಪರಿವಾರದ ಮೂಲಕ ರಾಜಕೀಯ ಪ್ರವೇಶಕ್ಕೂ ಮುನ್ನ ಎಂ.ಸಿ. ಮನಗೂಳಿ ಗ್ರಾಮ ಸೇವಕರಾಗಿದ್ದರು. ಜನತಾದಳ ಇಬ್ಭಾಗವಾದಾಗ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರೊಂದಿಗೆ ಗುರುತಿಸಿಕೊಂಡು, ಜೆಡಿಎಸ್ ಸೇರಿದ್ದರು. ಪಕ್ಷ ದುಸ್ಥಿತಿಯಲ್ಲಿ ಇದ್ದಾಗ ಅನ್ಯ ಪಕ್ಷ ಸೇರುವಂತೆ ಆಹ್ವಾನ ಬಂದರೂ ದೊಡ್ಡಗೌಡರ ಮೇಲಿನ ನಿಷ್ಠೆ ಬಿಡದೆ ಜೆಡಿಎಸ್ ಪಕ್ಷದಲ್ಲೇ ಉಳಿದಿದ್ದರು.

1994 ರಲ್ಲಿ ಮೊದಲ ಬಾರಿ ಶಾಸಕರಾದಾಗ ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಸಚಿವರಾಗಿದ್ದ ಮನಗೂಳಿ ಮುತ್ಯಾ, 2018 ರಲ್ಲಿ ಎರಡನೇ ಬಾರಿ ಗೆದ್ದಾಗಲೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿ, ತೋಟಗಾರಿಕೆ ಖಾತೆ ನಿಭಾಯಿಸಿದ್ದರು.

ಇದನ್ನೂ ಓದಿ:ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ

2018 ರ ವಿಧಾನಸಭೆ‌ ಚುನಾವಣೆಯಲ್ಲಿ ಇದು ನನ್ನ ಕೊನೆ ಚುನಾವಣೆ, ಅಧಿಕಾರದಲ್ಲಿ ಇದ್ದಾಗಲೇ ನನಗೆ ಸಾವು ಬರಲಿ ಎಂದು ಹೇಳುತ್ತಿದ್ದರು. ವಿಧಿಯಾಟ ಕೊನೆಗೂ ಅವರು ಬಯಸಿದಂತೆ ಶಾಸಕರಾಗಿದ್ದಾಗಲೇ ವಿಧಿವಶರಾಗಿದ್ದಾರೆ.

ಬಿಜೆಪಿ ಮಾಜಿ ಶಾಸಕ ರಮೇಶ ಭೂಸನೂರ ವಿರುದ್ದ 2018 ರ ವಿಧಾನಸಭೆ ಚುನಾವಣೆಯಲ್ಲಿ 9305 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ತೋಟಗಾರಿಕೆ ಸಚಿವರಾಗಿದ್ದಾಗ ವಿಜಯಪುರ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿದ್ದು, ತಮ್ಮ ಕ್ಷೇತ್ರ ವ್ಯಾಪ್ತಿಯ ಆಲಮೇಲ ಪಟ್ಟಣದಲ್ಲಿ ಇನ್ನಷ್ಟೇ ಕಾಲೇಜು ಅಸ್ತಿತ್ವಕ್ಕೆ ಬರಬೇಕಿದೆ.

ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದಾಗ ಮುಖ್ಯಮಂತ್ರಿ ದೇವೇಗೌಡ ಅವರ ಮೇಲೆ ಒತ್ತಡ ಹಾಕಿ ಗುತ್ತಿ‌ ಬಸವಣ್ಣ ಏತನೀರಾವರಿ ಯೋಜನೆ ಜಾರಿಗೊಳಿಸಿ, ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಹರಿಕಾರ ಎಂದು ಹಿರಿಮೆ ಪಡೆದಿದ್ದರು.

ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬಂದರೆ ನಮ್ಮೂರಲ್ಲಿ ನಿಮ್ಮ ಪ್ರತಿಮೆ ನಿಲ್ಲಿಸುತ್ತೇನೆ ಎಂದು ದೇವೇಗೌಡ ಅವರಿಗೆ ಮಾತು ಕೊಟ್ಟಿದ್ದರು. ಯೋಜನೆ ಅನುಷ್ಠಾನದ ಬಳಿಕ ತಾವು ಅಧಿಕಾರದಲ್ಲಿ ಇಲ್ಲದಿದ್ದರೂ ಐದು ವರ್ಷಗಳ ಹಿಂದೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ತಾವು ಹಾಗೂ ದೇವೇಗೌಡ ಅವರು ಜೊತೆಯಾಗಿ ನಿಂತಿರುವ ಕಂಚಿನ‌ ಪ್ರತಿಮೆ ಮಾಡಿಸಿ, ಮಾಜಿ ಪ್ರಧಾನಿ ದೇವೇಗೌಡ ಅವರಿಂದಲೇ ಪ್ರತಿಮೆ ಅನಾವರಣಗೊಳಿಸಿ ವಚನ ಪಾಲಿಸಿದ್ದರು.

ಗೋಲಗೇರಿ ಗ್ರಾಮದಲ್ಲಿ ತಮ್ಮ ಹೆಗಲ ಮೇಲೆ ದೇವೇಗೌಡರು ಕೈಹಾಕಿದ ಪ್ರತಿಮೆ ಸ್ಥಾಪಿಸಿದ್ದು ನನ್ನ ಜೀವಿತ ಸಾರ್ಥಕ ಕ್ಷಣ ಎಂದೂ ಬಣ್ಣಿಸಿದ್ದರು. ಈಚೆಗೆ ಸದರಿ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆಯಿಂದ ನೊಂದಿದ್ದರು.

ದೇವೇಗೌಡ ಅವರ ಮೇಲಿನ ಇವರ ಸ್ವಾಮಿ ನಿಷ್ಠೆಯ ಫಲವಾಗಿಯೇ ವಯೋ ಸಹಜವಾಗಿ ಪಕ್ಷ ಸಂಘಟನೆ ಅಸಾಧ್ಯ, ನನ್ನ ಪಕ್ಷದ ಜಿಲ್ಲಾಧ್ಯಕ್ಷ ಜವಾಬ್ದಾರಿಯಿಂದ ಮುಕ್ತಿಗೊಳಿಸಿ ಎಂದು ಪರಿಪರಿಯಾಗಿ ಕೇಳಿಕೊಂಡಿದ್ದರು. ಆದರೂ ದೇವೇಗೌಡರು ಮನಗೂಳಿ ಇವರಲ್ಲಿನ ಪಕ್ಷ ನಿಷ್ಠೆ ಮೆಚ್ಚಿ, ರಾಜಕೀಯ ಬದ್ಧತೆಯಿಂದಾಗಿ ಅವರನ್ನು ಹಲವು ದಶಕದಿಂದ ಜಿಲ್ಲಾಧ್ಯಕ್ಷರಾಗಿಯೇ ಮುಂದುವರೆಸಿದ್ದರು. ಕೆಲವೇ ತಿಂಗಳ ಹಿಂದೆ ಮನಗೂಳಿ ಅವರು ವಯೋಸಹಜವಾಗಿ ಇನ್ನು ನನ್ನಿಂದ ಪಕ್ಷದ ಜವಾಬ್ದಾರಿ ನಿರ್ವಹಣೆ ಅಸಾಧ್ಯ ಎಂದು ಪಟ್ಟು ಹಿಡಿದಾಗ ಅವರನ್ನು ಸಂಘಟನೆಯಿಂದ ಮುಕ್ತಗೊಳಿಸಲಾಗಿತ್ತು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.