ನಿರಾಣಿ ಉದ್ಯಮ ಸಂಸೆಯಿಂದ ಉದ್ಯೋಗ ಸೃಷ್ಟಿ

ನಾಡಿನ ಏಳ್ಗೆಗೆ ದುಡಿಯುತ್ತಿದ್ದೇವೆ ಎಂಬ ಆತ್ಮತೃಪ್ತಿ ನಮ್ಮ ಸಂಸ್ಥೆಗಿದೆ ಎಂದು ಹೇಳಿದರು.

Team Udayavani, Feb 9, 2021, 5:53 PM IST

ನಿರಾಣಿ ಉದ್ಯಮ ಸಂಸೆಯಿಂದ ಉದ್ಯೋಗ ಸೃಷ್ಟಿ

ವಿಜಯಪುರ: ನಿರಾಣಿ ಉದ್ಯಮ ಸಮೂಹ ಸಂಸ್ಥೆ ಈ ಭಾಗದ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಅವಳಿ ಜಿಲ್ಲೆಗಳ ನಿರುದ್ಯೋಗಿ ಯುವ ಸಮುದಾಯದ ಪಾಲಿಗೆ ವರವಾಗಿದೆ. ಸಾಹಸಿ ಹಾಗೂ ಯಶಸ್ವಿ ಉದ್ಯಮಿಯಾಗಿರುವ ಮುರುಗೇಶ ನಿರಾಣಿ, ಸಕ್ಕರೆ ಕಾರ್ಖಾನೆಗಳನ್ನು ಕಟ್ಟುವ ಮೂಲಕ ರೈತರ ಬೆಳೆಗೆ ಸದೃಢ ಮಾರುಕಟ್ಟೆ ಕಲ್ಪಿಸಿದ್ದಾರೆ ಎಂದು ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದರು.

ಸೋಮವಾರ ಬಬಲೇಶ್ವರ ಪಟ್ಟಣದಲ್ಲಿ ವಿಜಯ ಸೌಹಾರ್ದ ಕ್ರೆಡಿಟ್‌ ಸಹಕಾರಿಯ 54ನೇ ಶಾಖೆಗೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಭಾಗದ ಆರ್ಥಿಕ ಚಟುವಟಿಕೆಗಳಿಗೆ ದೈನಂದಿನ ವ್ಯವಹಾರಗಳಿಗೆ ವಿಜಯ ಸಹಕಾರಿಯು ಸಹಕಾರಿಯಾಗಲಿದೆ ಎಂದರು. ಇಡಿ ಜಗತ್ತು ಕೊರೊನಾದಿಂದ ತತ್ತರಿಸಿ ಮನೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಮುರುಗೇಶ ನಿರಾಣಿ ಸ್ಥಗಿತಗೊಂಡ ಕೈಗಾರಿಕೆಗಳಿಗೆ ಮರು ಜೀವ ನೀಡಿ ಹೊಸ ಉದ್ಯೋಗಳನ್ನು ಸೃಷ್ಟಿಸಿದ್ದಾರೆ.

ಬಬಲೇಶ್ವರ ಭಾಗದಲ್ಲಿಯೂ ಒಂದು ಸಕ್ಕರೆ ಕಾರ್ಖಾನೆ ಸ್ಥಾಪಿಸಿದರೆ ಈ ಭಾಗದ ರೈತರಿಗೆ ಹಾಗೂ ನಿರುದ್ಯೋಗಿ ಯುವಕರಿಗೆ ಆಸರೆಯಾಗುತ್ತದೆ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮಾತನಾಡಿ, ಮುರುಗೇಶ ನಿರಾಣಿಯವರ ಸ್ವಭಾವ ಹಾಗೂ ಗುಣಕ್ಕೆ ಯಶಸ್ಸು ಸಿದ್ಧಿಸಿದೆ. ಶ್ರೀಮಂತಿಕೆ, ಪದವಿಯನ್ನು ಮೀರಿದ ಸರಳತೆ ಅವರಲ್ಲಿದೆ. ಹೀಗಾಗಿ ಅವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ. ಅವರ ಸಂಸ್ಥೆಯಿಂದ ರೈತರಿಗೆ ಈ ನಾಡಿಗೆ ಮತ್ತಷ್ಟು ಒಳ್ಳೆದಾಗಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಬಬಲೇಶ್ವರ ಜನತೆಯೊಂದಿಗೆ ನನ್ನದು ವಿಶೇಷ ಬಾಂಧವ್ಯವಿದೆ. ಈ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ. ನಿರಾಣಿ ಸಮೂಹದಿಂದ ಮೂಲಕ ಸಕ್ಕರೆ, ವಿದ್ಯುತ್‌, ಇಥೇನಾಲ್‌, ಸಿಒ2, ಸಿಎನ್‌ಜಿ, ಶಿಕ್ಷಣ, ಬ್ಯಾಂಕಿಂಗ್‌, ಸೂಪರ್‌ ಮಾರ್ಕೆಟ್‌, ಸಮಾಜ ಸೇವೆ ಎಲ್ಲ ವಿಭಾಗಗಳಲ್ಲಿಯೂ ಸೇವೆ ದೊರೆಯುತ್ತಿದೆ. ಲಕ್ಷಾಂತರ ರೈತ ಕುಟುಂಬಗಳು ಹಾಗೂ ನೌಕರ ಕುಟುಂಬಗಳು ಜೊತೆಯಲ್ಲಿ ನಾಡಿನ ಏಳ್ಗೆಗೆ ದುಡಿಯುತ್ತಿದ್ದೇವೆ ಎಂಬ ಆತ್ಮತೃಪ್ತಿ ನಮ್ಮ ಸಂಸ್ಥೆಗಿದೆ ಎಂದು ಹೇಳಿದರು.

ರೈತರ ಮಕ್ಕಳು ಉದ್ಯಮಿಗಳಾಗಬೇಕು. ಸ್ಥಳೀಯ ಮಟ್ಟದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಬೇಕು. ಕೃಷಿ, ನೀರಾವರಿ, ಶಿಕ್ಷಣ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಹೇಳಿದರು. ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಮುರುಗೇಶ ನಿರಾಣಿ ಅವರನ್ನು ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ವಿವಿಧ ಸಂಘ ಸಂಸ್ಥೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಮುಖರು ಸಚಿವ ಮುರುಗೇಶ ನಿರಾಣಿ ಅವರನ್ನು ಸನ್ಮಾನಿಸಿದರು.

ಎಂ.ಎಚ್‌. ಪತ್ತೆನ್ನವರ ಪ್ರಾಸ್ತಾವಿಕ ಮಾತನಾಡಿದರು. ಗುರುಪಾದೇಶ್ವರ ಬೃಹನ್ಮಠದ ಮಹಾದೇವ ಶಿವಾಚಾರ್ಯ ಸಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉಮೇಶ ಕೋಳಕೂರ, ಸುರೇಶ ಬಿರಾದರ, ದೇವಾನಂದ ಆಲಗೊಂಡ, ಶೇಖಪ್ಪ ಕೊಪ್ಪದ, ಬೋರಮ್ಮ ಬೂದಿಹಾಳ, ಬಸವರಾಜ ಶಿರಮಗೊಂಡ, ಮಲ್ಲಪ್ಪ ಕೋಟಿಹಾಳ, ಮನೋಹರ ಜಂಗಮಶೆಟ್ಟಿ, ಸಂಗಪ್ಪ ತಿಮ್ಮಶೆಟ್ಟಿ, ಮೊಹನ ಜಾಧವ, ಜಗದೀಶ ಶಿರಾಳಶೆಟ್ಟಿ, ಅರ್ಜುನ ದೇವಕ್ಕಿ ಇದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.