ಅನಾಥ ಮಕ್ಕ ಳ ಸಮೀಕ್ಷೆಗೆ ಜೊಲ್ಲೆ ಸೂಚನೆ
Team Udayavani, May 11, 2021, 10:28 AM IST
ವಿಜಯಪುರ: ಕೋವಿಡ್ ಎರಡನೇ ಅಲೆ ಅತಿ ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಈವರೆಗೆ ಕೋವಿಶಿಲ್ಡ್, ಕೊವ್ಯಾಕ್ಸಿನ್ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಅವಶ್ಯಕತೆಗಳ ಬಗ್ಗೆ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಕೋವಿಡ್ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಕೋವಿಡ್ ಮೂರನೇ ಅಲೆಯ ಭಯವಿದ್ದು, ಕಾರಣ ಈ ಹಿಂದೆ ಕೋವಿಡ್ -19 ಮೊದಲ ಡೋಸ್ ಪಡೆದವರಿಗೆ ಕ್ಷೇತ್ರವಾರು ಆದ್ಯತೆ ಮೇಲೆ ಎರಡನೇ ಡೋಸ್ ನೀಡಬೇಕು. ಬೇಡಿಕೆಯ ಬಗ್ಗೆ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಾಗಿ ಮೃತಪಟ್ಟಿರುವ ಪಾಲಕರ ಮಕ್ಕಳನ್ನು ಗುರುತಿಸುವ ಕಾರ್ಯ ಮಾಡಬೇಕು. ತಾಯಿ ಹಾಗೂ ತಂದೆ ಕಳೆದುಕೊಂಡಿರುವ ಅಂತಹ ನಿರ್ಗತಿಕ ಮಕ್ಕಳ ಜೀವನಕ್ಕೆ ನೆರವಾಗಬೇಕು. ಅವರ ಪುನರ್ವಸತಿಗೆ ನೆರವಾಗಬೇಕು.
ಅದರಂತೆ ಅಂತಹ ಮಕ್ಕಳನ್ನು ತಕ್ಷಣ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲು ಮಾಡಿಕೊಂಡು ಮುಂದಿನ ಪ್ರಕ್ರಿಯೆಗಳನ್ನು ನಡೆಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಾಲಕರನ್ನು ಕಳೆದುಕೊಂಡು ನಿರ್ಗತಿಕರಾಗಿರುವ ಮಕ್ಕಳ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೂಡ ಟೋಲ್ ನಂಬರ್ 1098 ಹಾಗೂ 14499 ಕರೆ ಮಾಡಿ ಮಾಹಿತಿ ಒದಗಿಸಬಹುದಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ತಾಲೂಕಾಡಳಿತ ಮತ್ತು ಆರ್ಡಿಪಿಆರ್ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ಇಂತಹ ನಿರ್ಗತಿಕ ಹೆಣ್ಣು ಮತ್ತು ಗಂಡು ಮಗುವಿಗೆ ಪ್ರತ್ಯೇಕವಾಗಿ ಕೇರ್ ಸೆಂಟರ್ ಆರಂಭಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.
ಆಯುಷ್ ಆಸ್ಪತ್ರೆ ಕೊರೊನೇತರ: ನಗರದ ಆಯುಷ್ ಆಸ್ಪತ್ರೆಯನ್ನು ಕೋವಿಡೇತರ ಆಸ್ಪತ್ರೆಯಾಗಿ ಪರಿವರ್ತಿಸುವ ಬಗ್ಗೆ ಚಿಂತನೆ ಇದ್ದು ಅಲ್ಲಿ ಬೆಡ್ ಗಳ, ಸಿಬ್ಬಂದಿಗಳ ಮತ್ತು ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ ಅವರು, ವಿಜಯಪುರ ನಗರದಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಪ್ರಥಮ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು ಈ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸುವ ಬಗ್ಗೆ ವೈದ್ಯಕೀಯ ಸಚಿವರ ಗಮನಕ್ಕೂ ಸಹ ತರುವುದಾಗಿ ಹೇಳಿದರು.
ಮೂರು ಆಕ್ಸಿಜನ್ ಪ್ಲಾಂಟ್ ಮಂಜೂರು: ನಗರದಲ್ಲಿ ಈಗಾಗಲೇ ಎರಡು ವಸತಿ ನಿಲಯಗಳನ್ನು ಕೋವಿಡ್ ಕೇರ್ ಕೇಂದ್ರವಾಗಿ ಪರಿವರ್ತಿಸಲಾಗಿದೆ. ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು, ವಿಜಯಪುರ, ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿಗಳಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು ಇದರಿಂದ ಅತ್ಯುತ್ತಮ ತಾಂತ್ರಿಕತೆಯ ಆಕ್ಸಿಜನ್ ಸೌಲಭ್ಯ ದೊರೆಯಲಿದೆ.
ಇದರಿಂದ ಮುಂಬರುವ ಒಂದು ತಿಂಗಳಲ್ಲಿ ಪ್ಲಾಟ್ನಿಂದ ಆಕ್ಸಿಜನ್ ಸೌಲಭ್ಯ ದೊರೆಯುವ ಆಶಾಭಾವನೆ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಜನರೊಂದಿಗೆ ಮತ್ತು ಅವರ ಸಂಕಷ್ಟದ ಸ್ಥಿತಿಯಲ್ಲಿ ನಾವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸದಾ ಇರಲಿದ್ದು, ಯಾವುದೇ ಪರಿಸ್ಥಿತಿಯಲ್ಲೂ ಆತ್ಮಸ್ಥೈರ್ಯ ಕಳೆದುಕೊಳ್ಳದಂತೆ ಸಭೆಯ ಮೂಲಕ ಜನತೆಯಲ್ಲಿ ಮನವಿ ಮಾಡಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಶೇಕಡಾವಾರು ಇನ್ನಷ್ಟು ಪ್ರಗತಿ ಸಾಧಿಸಬೇಕು.
ನಗರದಲ್ಲಿ ಕೊರೊನಾ ಸೋಂಕಿತರು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಥಮ ಡೋಸ್ ನೀಡಿದವರಿಗೆ ಎರಡನೇ ಡೋಸ್ನ್ನು ಆದ್ಯತೆ ಮೇಲೆ ನೀಡಬೇಕು. ಅವಶ್ಯಕತೆ ಮತ್ತು ಲಸಿಕೆ ಬೇಡಿಕೆಯ ಬಗ್ಗೆ ತಕ್ಷಣ ಸಚಿವರ ಗಮನಕ್ಕೆ ತರಬೇಕು. ಪ್ರತಿ ದಿನ ಲಸಿಕೆಗಳ ಮತ್ತು ರೆಮ್ಡೆಸಿವಿಯರ್ ಬಗ್ಗೆ ಮಾಹಿತಿ ನೀಡಲು ಸಲಹೆ ನೀಡಿದರು. ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೋಳಸಂಗಿ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಸಿಇಒ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಡಿಎಚ್ಒ ಮಹೇಂದ್ರ ಕಾಪ್ಸೆ, ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ