ಕಗ್ಗೋಡದಲ್ಲಿ ಕಂಗೊಳಿಸಲಿದೆ ಕಲಾಗ್ರಾಮ


Team Udayavani, Dec 20, 2018, 12:50 PM IST

vij-1.jpg

ವಿಜಯಪುರ: ಡಿ. 24ರಿಂದ ಆರಂಭಗೊಳ್ಳುವ ಎಂಟು ದಿನಗಳ ಭಾರತೀಯ ಸಂಸ್ಕೃತಿ ಉತ್ಸವಕ್ಕಾಗಿ ಕಗ್ಗೋಡ ಗ್ರಾಮದಲ್ಲಿ ಅಪರೂಪದ ಕಲಾಗ್ರಾಮ ನಿರ್ಮಾಣಗೊಳ್ಳುತ್ತಿದೆ. ಶಣರ ನಾಡಿನಲ್ಲಿ ಶರಣರ ಜೀವನ ಗಾಥೆ ಬಿಂಬಿಸುವ ಕಲಾಕೃತಿಗಳು ಜೀವ ಪಡೆಯುತ್ತಿದ್ದು ಹಬ್ಬದ ಸಂಭ್ರಮ ಇಮ್ಮಡಿಗೊಳಿಸಲು ಸಜ್ಜಾಗುತ್ತಿವೆ.

ಕಗ್ಗೋಡ ಗ್ರಾಮದಲ್ಲಿರುವ ಸಿದ್ದೇಶ್ವರ ಸಂಸ್ಥೆಯ ರಾಮನಗೌಡ ಬಸನಗೌಡ ಪಾಟೀಲ ಯತ್ನಾಳ ಗೋಸಂರಕ್ಷಣಾ ಕೇಂದ್ರದ ಸುತ್ತಲಿನ ಆವರಣದಲ್ಲಿ ಭಾರತೀಯ ಸಂಸ್ಕೃತಿ ಉತ್ಸವಕ್ಕಾಗಿ ಬೃಹತ್‌ ವೇದಿಕೆ ನಿರ್ಮಿಸುತ್ತಿದ್ದಾರೆ. ಇದರ ಪಕ್ಕದಲ್ಲೇ ಶರಣರು ಹಾಗೂ ಸಂತರ ವ್ಯಕ್ತಿತ್ವ ವಿವರಿಸುವ ಕಲಾಕೃತಿಗಳು ನಿರ್ಮಾಣಗೊಳ್ಳುತ್ತಿದ್ದು ಅಂತಿಮ ಸ್ಪರ್ಶ ಪಡೆಯುತ್ತಿವೆ.

ಬಸವಾದಿ ಶರಣರ ಹಲವು ಕಲಾಕೃತಿಗಳು ಅರಳುತ್ತಿದ್ದು, ಇಷ್ಟಲಿಂಗ ಪೂಜಾ ನಿರತ ಬಸವೇಶ್ವರ, ಮಹರ್ಷಿ ವಾಲ್ಮೀಕಿ ಮಾತ್ರವಲ್ಲ ವಿವಿಧ ಸಂತರ ಸುಂದರ ಮೂರ್ತಿಗಳು ಅರಳುತ್ತಿವೆ. ವೇದಿಕೆ ಪಕ್ಕದಲ್ಲೇ ಪ್ರತ್ಯೇಕವಾಗಿ ಬಸವೇಶ್ವರರು ತಮ್ಮ ಆರಾಧ್ಯ ಕೂಡಲಸಂಗಮನಾಥನಲ್ಲಿ ಐಕ್ಯರಾದ ಐಕ್ಯಮಂಟ ಅದಾಗಲೇ ಸಿದ್ಧಗೊಂಡಿದ್ದು, ನೋಡುಗರ ಚಿತ್ತ ಸೆಳೆಯುತ್ತಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಗೋ ಸಂರಕ್ಷಣೆಗಾಗಿ ಬೃಹತ್‌ ನಂದಿಶ್ವರ ಜನ್ಮ ತಳೆಯುತ್ತಿದ್ದಾನೆ.

ಇದಲ್ಲದೇ ಸಿದ್ಧರಾಮ ಶರಣರ ಜೀವನ ವೃತ್ತಾಂತ ಹೇಳುವ ಹಲವು ಕಲಾಕೃತಿಗಳು ರೂಪುಗೊಳ್ಳುತ್ತಿದ್ದು,
ಶಿವದರ್ಶನಕ್ಕಾಗಿ ಕುರಿಗಾಯಿ ಸಿದ್ದರಾಮ ಗುಡ್ಡದಿಂದ ಹಾರುವ ಸನ್ನಿವೇಶವನ್ನು ಮನೋಜ್ಞವಾಗಿ ಹೇಳುವುದಕ್ಕೆ ಕೃತಕ ಬೆಟ್ಟವನ್ನೇ ಸೃಷ್ಟಿಸಲಾಗಿದೆ. ಸದರಿ ಬೆಟ್ಟದ ಮೇಲಿಂದ ಸಿದ್ದರಾಮ ಶರಣರು ಹಾರುವ ಸಂದರ್ಭದಲ್ಲಿ ಶಿವನೇ ಪ್ರತ್ಯಕ್ಷನಾಗಿ ಕೈ ಹಿಡಿದು ಕಾಪಾಡುವ ಸನ್ನಿವೇಶ ಅತ್ಯಂತ ಹೃದಯಸ್ಪರ್ಶಿಯಾಗಿದೆ.

ಕಗ್ಗೋಡ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ಬೀಡು ಬಿಟ್ಟಿರುವ ಬೆಂಗಳೂರಿನ ಪ್ರಕಾಶ ಶೆಟ್ಟಿ ನೇತೃತ್ವದ 50 ನುರಿತ ಕಲಾವಿದರ ತಂಡ ಕಗ್ಗೋಡ ಗ್ರಾಮದ ಕಲಾ ಗ್ರಾಮ ಸೃಷ್ಟಿಕೆಗೆ ಮುಂದಾಗಿದ್ದಾರೆ. ತಿಂಗಳ ಮೊದಲೇ ಬೆಂಗಳೂರಿನಲ್ಲಿ ಕಲಾಕೃತಿಗಳ ಮಾದರಿಗಳನ್ನು ಸಿದ್ಧಪಡಿಸಿಕೊಂಡು ತಂದಿರುವ ಕಲಾವಿದರ ತಂಡ, ಕಗ್ಗೋಡ
ಗ್ರಾಮದ ಕಲಾ ಗ್ರಾಮದಲ್ಲಿ ಅಂತಿಮ ರೂಪ ನೀಡುವ ಮೂಲಕ ಜೀವ ನೀಡುತ್ತಿದ್ದಾರೆ. 

ಇದಕ್ಕಾಗಿ ಹಗಲು-ರಾತ್ರಿ ಎನ್ನದೇ ಸ್ಥಳದಲ್ಲೇ ಕುಳಿತ ಕಲಾವಿದರು ಯುದ್ದೋಪಾದಿಯಲ್ಲಿ ಕಲಾಕೃತಿಗಳಿಗೆ ಜೀವ ತುಂಬುವ ಕೆಲಸದಲ್ಲಿ ತಲ್ಲೀರಾಗಿದ್ದಾರೆ. ಇದಕ್ಕಾಗಿ ಉತ್ಸವ ಸಮಿತಿ ಕಲಾವಿದರಿಗೆ ಸ್ಥಳದಲ್ಲೇ ಊಟ-ಉಪಹಾರ ವ್ಯವಸ್ಥೆ ಮಾಡುತ್ತಿದೆ. 

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.