ಮೂಲ ಸೌಕರ್ಯಕ್ಕೆ ಕಣಕಾಲ ಗ್ರಾಮಸ್ಥರ ಆಗ್ರಹ
Team Udayavani, Oct 3, 2020, 4:27 PM IST
ಹೂವಿನಹಿಪ್ಪರಗಿ: ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ದಲಿತ ಕಾಲೋನಿ ಸೇರಿದಂತೆ ಇತರೆ ಕಡೆಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಕಣಕಾಲ ಗ್ರಾಮಸ್ಥರು ಗ್ರಾಪಂ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಈ ವೇಳೆ ಗ್ರಾಮದ ಯುವ ಮುಖಂಡ, ಕರವೇ ತಾಲೂಕು ಸಂಚಾಲಕ ರಾಜಶೇಖರ ಹುಲ್ಲೂರ ಮಾತನಾಡಿ, ದಲಿತ ಸಮುದಾಯದವರ ಓಣಿಗೆ ಬಂದಂತಹ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಕುಡಿಯುವ ನೀರಿಗಾಗಿ ಹಲವಾರು ಬಾರಿ ಮನವಿ ಮಾಡಿಕೊಂಡರು ಇನ್ನೂವರೆಗೆ ಬ್ಯಾಲ್ಯಾಳ ಕ್ರಾಸ್ದಿಂದ ಉರ್ದು ಶಾಲೆವರೆಗೂ ನೀರು ಪೂರೈಕೆಯಾಗುತ್ತಿಲ್ಲ ಎಂದರು. ಓಣಿಯಲ್ಲಿ ಸಿಸಿ ರಸ್ತೆಯೂ ಮಾಡದೆ ಸತಾಯಿಸುತ್ತಿದ್ದಾರೆ. ಕೂಡಲೇ ದಲಿತರ ಓಣಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದ ಅವರು, ಒಂದು ವೇಳೆ ಸೋಮವಾರದೊಳಗೆ ನೀರು ಪೂರೈಸದಿದ್ದರೆ ಗ್ರಾಪಂ ಬೀಗಜಡಿದು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಭೀಮಪ್ಪ ಚಲವಾದಿ, ಶಿವರಾಜ್ ಮಾದರ, ಸಿ.ಜೆ. ಚಲವಾದಿ, ಎ.ಎಸ್. ಅಂಗಡಿ, ಸಂತೋಷ ಚಕ್ಕಳಕಿ, ಕಸ್ತೂರೆವ್ವ ಹರಿಜನ, ಮರಗವ್ವ ಮಾದರ, ನೀಲವ್ವ ಕೋಲಕಾರ, ಗೌರವ ಚಲವಾದಿ, ಪಕೀರವ್ವ ಚಲವಾದಿ, ಸತ್ಯವ್ವ ಮಾದರ, ಶಾಂತವ್ವ ತಳವಾರ, ಸಿದ್ದವ್ವ ಹೊಲೇರ, ಸುರೇಶ ಇಂಗಳಗೇರಿ, ಸಿದ್ದು ಮಜ್ಜಗಿ, ರುದ್ರಪ್ಪ ಚಿನವಾಲ, ಮಂಜು ಹುಲ್ಲೂರ, ಶಂಕ್ರು ಹುಲ್ಲೂರ, ಮಲ್ಲಿಕಾರ್ಜುನ ಹುಲ್ಲೂರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ