ಕೆಂಪೇಗೌಡರ ದೂರದೃಷ್ಟಿ ಆದರ್ಶ: ಕಳಸದ

ಇಡಿ ವಿಶ್ವಕ್ಕೆ ಮಾದರಿಯಾಗುವ ಹಾಗೆ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

Team Udayavani, Jun 29, 2022, 6:31 PM IST

ಕೆಂಪೇಗೌಡರ ದೂರದೃಷ್ಟಿ ಆದರ್ಶ: ಕಳಸದ

ವಿಜಯಪುರ: ವಿಶ್ವದ ಪ್ರತಿಯೊಬ್ಬರನ್ನು ಆಕರ್ಷಿಸುವ ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಜಾಗತಿಕ ಮಟ್ಟದಲ್ಲಿ ಹೆಸರಾಗಿದೆ. ಅಂತಹದ್ದೊಂದು ವಿಶೇಷ ಹೆಗ್ಗಳಿಕೆ ಪಾತ್ರವಾಗಿರುವ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡ ಅವರ ದೂರದೃಷ್ಟಿ ಮತ್ತು ವಿಚಾರಧಾರೆ ಇಂದಿಗೂ ಆದರ್ಶನೀಯ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆಂಪೇಗೌಡ ಅವರು ಬೆಂಗಳೂರು ಸೇರಿದಂತೆ ವಿವಿಧೆಡೆ ಆಡಳಿತ ನಡೆಸಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ಆಲೋಚನೆಗಳು ಇಂದಿಗೂ ಪ್ರಸ್ತುತವಾಗಿವೆ. ಕೆಂಪೇಗೌಡ ಅವರು ಮಹೋನ್ನತ ದೂರದೃಷ್ಟಿ ಹೊಂದಿದ್ದರಿಂದ ಬೆಂಗಳೂರು ನಗರದಲ್ಲಿ ಇಂದಿಗೂ ಸಹ ಅನೇಕ ಕೆರೆಗಳ ಸಂರಕ್ಷಣೆ ಸಾಧ್ಯವಾಗಿದೆ. ಎಷ್ಟೇ ಜನಸಂದಣಿ ಇದ್ದರೂ ಎಲ್ಲರಿಗೂ ಅನುಕೂಲವಾಗುವ ಹಾಗೆ ನಗರವನ್ನು ನಿರ್ಮಿಸಿ ಇಡಿ ವಿಶ್ವಕ್ಕೆ ಮಾದರಿಯಾಗುವ ಹಾಗೆ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

ಸಿಂದಗಿ ಎಸ್‌ಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್‌. ಹೆಗ್ಗನದೊಡ್ಡಿ ಮಾತನಾಡಿ, ಶಾಂತಿಗೆ ಹೆಸರಾದ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡ ಅವರು ಸರ್ವ ಸಮುದಾಯದ ಜನರನ್ನು ಒಗ್ಗೂಡಿಸಿ ಮುನ್ನಡೆಸಿದರು. ಜಾತ್ಯತೀತ ಮನೋಭಾವ ಹೊಂದಿದ್ದರು. ಹೋರಾಟದ ಗುಣಗಳನ್ನು ಮೈಗೂಡಿಸಿಕೊಂಡಿದ್ದರು.

ವೈಜ್ಞಾನಿಕ ಹಿನ್ನೆಲೆಯಲ್ಲಿ ಬೆಂಗಳೂರ ನಗರವನ್ನು ನಿರ್ಮಿಸಿದ್ದರಿಂದ ಬೆಂಗಳೂರು ನಗರ ಸುಂದರವಾಗಿ ನಿರ್ಮಾಣಗೊಂಡಿದೆ. ನಾಡಿನ ಹಿತಕ್ಕಾಗಿ ಶ್ರಮಿಸಿದ ಅವರ ಯೋಚನೆಗಳು, ಯೋಜನೆಗಳು ನಮಗೆಲ್ಲರಿಗೂ ಮಾದರಿಯಾಗಿವೆ ಎಂದರು.

ಡಿಎಸ್ಪಿ ಲಕ್ಷ್ಮೀನಾರಾಯಣ, ವಿವಿಧ ಸಂಘಟನೆ, ಸಮುದಾಯಗಳ ಪ್ರಮುಖರಾದ ರತ್ನಾ ಸಂಗಟಿ, ರವಿಗೌಡ ಬಿರಾದಾರ, ನೀಲೇಶಗೌಡ ಭೂಸನೂರ, ಕೃಷ್ಣಾ ಜಾಧವ, ಅಂಬಾಜಿರಾವ್‌ ಪವಾರ, ಜಹೀರಸಾಬ್‌ ತೊನಶ್ಯಾಳ, ಶರಣಗೌಡ ಹರವಾಳ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ಸಂಕೇತಗೌಡ ಬ್ಯಾಕೋಡ, ಎ.ಬಿ.ಅಲ್ಲಾಪುರ ಸೇರಿದಂತೆ ಇತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಸ್ವಾಗತಿಸಿದರು. ವಿಶಾಲಾಕ್ಷಿ ಬಡಿಗೇರ ಸುಗಮ ಸಂಗೀತ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೂ ಮುನ್ನ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕೆಂಪೇಗೌಡ ಭಾವಚಿತ್ರದ ಮೆರವಣಿಗೆಗೆ ಎಡಿಸಿ ರಮೇಶ ಕಳಸದ ಚಾಲನೆ ನೀಡಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.