
ಗಾಂಧಿ ಕುಟುಂಬದ ಮನೆ ಬಾಗಿಲು ಕಾಯುವ ಖರ್ಗೆಗೆ ಜನಪರ ಕಾರ್ಯಕ್ರಮ ಮಾಡಿ ಗೊತ್ತಿಲ್ಲ: ಪಿ.ರಾಜೀವ
Team Udayavani, Jan 16, 2023, 11:40 AM IST

ವಿಜಯಪುರ: ನಿರಂತರ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷದಿಂದ ಮಾಡಲಾಗದ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕೆಲಸ ಬಿಜೆಪಿ ಮಾಡಿದೆ. ಹೀಗಾಗಿ ಇಂಥ ಐತಿಹಾಸಿಕ ಕಾರ್ಯಕ್ರಮ ಮಾಡಿಯೇ ತಿಳಿಯದ ಗಾಂಧಿ ಕುಟುಂಬದ ಮನೆ ಬಾಗಿಲು ಕಾಯುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಕಾರ್ಯಕ್ರಮ ಟೀಕಿಸುವ ನೈತಿಕತೆ ಇಲ್ಲ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ-ಶಾಸಕ ಪಿ.ರಾಜೀವ ಟೀಕಿಸಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳದ ವಿಷಯದಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ. ಸದಾಶಿವ ವರದಿ ಬಹಿರಂಗವಾಗಲಿ ಎಂದು ನಾವೂ ಆಗ್ರಹಿಸಿದ್ದೇವೆ. ಇದಕ್ಕಾಗಿ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದ್ದು, ಶೀಘ್ರವೇ ವರದಿ ಸಿಗಲಿದೆ ಎಂದರು.
ಮತ್ತೊಂದೆಡೆ ಸಾಮಾಜಿಕ ನ್ಯಾಯದ ಪರವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಲಿತರಿಗೆ ಮೀಸಲು ಪ್ರಮಾಣ ಹೆಚ್ಚಿಸಿದೆ. ನಾಗಮೋಹನ ದಾಸ ವರದಿಯನ್ನು ಒಪ್ಪಿಕೊಂಡು, ಪರಿಶಿಷ್ಟ ಜಾತಿ ಮೀಸಲು ಪ್ರಮಾಣ ಶೇ. 17 ಕ್ಕೆ ಏರಿಕೆ ಮಾಡಿ, ಬದ್ದತೆ ತೋರಿದ್ದಾರೆ ಎಂದರು.
ಇದನ್ನೂ ಓದಿ:ಹರಕೆ ತೀರಿಸಲು ಪಶುಪತಿನಾಥನ ದರ್ಶನಕ್ಕೆಂದು ಹೊರಟಿದ್ದಾತ ವಿಮಾನ ಪತನದಲ್ಲಿ ಕೊನೆಯುಸಿರು
ಬಡತನವನ್ನು ದುರ್ಬಳಕೆ ಮಾಡಿಕೊಂಡು ಕೆಲವು ಮಷಿನರಿಗಳು ಬಂಜಾರಾ ಮತಾಂತರಕ್ಕೆ ಮುಂದಾಗಿವೆ. ಈ ವಿಷಯ ನಿಗಮದ ಗಮನಕ್ಕಿದ್ದು, ಗಂಭೀರವಾಗಿ ಪರಿಗಣಿಸಿದ ಕಾರಣದಿಂದಲೇ ಸರ್ಕಾರ ಮತಾಂತರ ಕಾಯ್ದೆ ಜಾರಿಗೆ ತಂದಿದೆ ಎಂದರು.
ಸಚಿವ ಮುರುಗೇಶ ನಿರಾಣಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಧ್ಯದ ವೈಯಕ್ತಿಕ ನಿಂದನೆಯ ಬಗ್ಗೆ ಪಕ್ಷದ ಔಟ್ ಪುಟ್ ಗಾಗಿ ಕಾಯಿರಿ. ಪಕ್ಷದ ನಾಯಕತ್ವ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಸಂದರ್ಭದಲ್ಲಿ ನಾಯಕರು ತೀರ್ಮಾನಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ ನೀಡಿಲ್ಲ, ಇತಿಹಾಸದಲ್ಲಿ ಹಲವು ನಾಯಕರು ನಡೆಸಿದ ಇಂಥ ಪ್ರಯತ್ನಗಳು ಯಶಸ್ಸು ಕಂಡಿಲ್ಲ. ರಾಷ್ಟ್ರೀಯ ಚಿಂತನೆಯ ಕರ್ನಾಟಕದ ಮತದಾರ ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ ನೀಡಿಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

French Open Grand Slam-2023: ರುನೆ, ಸ್ವಿಯಾಟೆಕ್, ಗಾಫ್ ಮುನ್ನಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ