ಧರಣಿ ಹಿಂಪಡೆದ ಅನ್ನದಾತರು

ಅಧಿಕಾರಿಗಳ ಭರವಸೆಗೆ ಒಪ್ಪಿದ ರೈತರುಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ

Team Udayavani, Mar 18, 2020, 4:12 PM IST

18-March-19

ಕೊಲ್ಹಾರ: ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಕೂಡಗಿ ಬಳಿಯ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಕಳೆದ ಆರು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರ ತಾತ್ಕಾಲಿಕ ಹಿಂಪಡೆಯಲಾಗಿದೆ.

ತಾಲೂಕಿನ ಕೂಡಗಿ ಗ್ರಾಮದ ರೈಲ್ವೆ ಸ್ಟೇಷನ್‌ ಹತ್ತಿರ ಮುಳವಾಡ ಆಲಮಟ್ಟಿ ರಸ್ತೆ ಪಕ್ಕದಲ್ಲಿ ಧರಣಿ ಕುಳಿತಿದ್ದ ಸ್ಥಳಕ್ಕೆ ರೈಲ್ವೆ ಇಲಾಖೆ ಜನರಲ್‌ ಮ್ಯಾನೇಜರ್‌ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ಕೊಟ್ಟು ರೈತರೊಂದಿಗೆ ಚಚರ್ಚಿಸಿದರು.

ನಿಮ್ಮ ಬೇಡಿಕೆಗಳಾದ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿಗೆ ಅಡಚಣೆಯಾಗಿರುವ ಒಂದು ರೈಲ್ವೆ ಹಳಿಯನ್ನು ಸಸ್ಪೆಂಡ್‌ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಅದರ ಪ್ರಕಾರ ಆದಷ್ಟು ಶೀಘ್ರದಲ್ಲಿ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ಪೂರ್ಣಗೊಳಿಸಲಾಗುವದು ಎಂದು ಅಧಿಕಾರಿಗಳು ಭರವಸೆ ಕೊಟ್ಟರು.

ಕೊರೊನಾ ವೈರಸ್‌ ಹರಡುತ್ತಿರುವುದರಿಂದ ರಾಜ್ಯದಲ್ಲಿ ಜಾರಿ ಇರುವ ಆರೋಗ್ಯ ಎಮರ್ಜೆನ್ಸಿ ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಬಾರದು ಎಂದು ಅಧಿಕಾರಿಗಳು ಎಲ್ಲ ರೈತರಿಗೆ ತಿಳಿ ಹೇಳಿದ ನಂತರ ತಾತ್ಕಾಲಿಕವಾಗಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಅವರು ಹೇಳಿದ ಪ್ರಕಾರ ನಡೆದುಕೊಳ್ಳದಿದ್ದರೆ ಮುಂದಿನ ದಿನಮಾನಗಳಲ್ಲಿ ಮತ್ತೂಮ್ಮೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅಂಥ ಪರಿಸ್ಥಿತಿಗೆ ಅ ಧಿಕಾರಿಗಳು ಅವಕಾಶ ಕೊಡದೇ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿಕೊಡಬೇಕೆಂದು ಒಕ್ಕೊರಲಿನಿಂದ ರೈತರು ಅಧಿ ಕಾರಿಗಳಿಗೆ ವಿನಂತಿಸಿದರು.

ಬಸವನಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ನಾವು ಕೂಡ ಧರಣಿಯನ್ನು ಹಿಂಪಡೆಯಲು ರೈತರಿಗೆ ಮನವರಿಕೆ ಮಾಡಿದ್ದೇವೆ. ಆದಷ್ಟು ಬೇಗ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು. ಇಲ್ಲದಿದ್ದರೆ ನಾಡಿನ ಎಲ್ಲ ಮಠಾಧೀಶರನ್ನು ಕರೆದುಕೊಂಡು ಬಂದು ರೈತರೊಂದಿಗೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಹೆಚ್ಚುವರಿ ಎಸ್‌ಪಿ ರಾಮ್‌ ಅರಸಿದ್ದಿ, ರೈಲ್ವೆ ಇಲಾಖೆಯ ಲಲನಕುಮಾರ, ಡಿವೈಎಸ್‌ಪಿ ಈ.ಶಾಂತವೀರ, ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಧರಣಿ ಸ್ಥಳಕ್ಕೆ ಆಗಮಿಸಿದ್ದರು.

ಧರಣಿಯಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ, ಬಿ.ಎಲ್‌. ಪಾಟೀಲ, ಕೃಷ್ಣಾ ಭೋಸಲೆ, ಸಿದ್ರಾಮ ಅಂಗಡಗೇರಿ, ಸದಾಶಿವ ಬರಟಗಿ, ಪಾಂಡು ಹ್ಯಾಟಿ, ಕೃಷ್ಣಪ್ಪ ಭೂಮರಡ್ಡಿ, ವಿಠ್ಠಲ  ಬಿರಾದಾರ, ಗಿರಿಯಪ್ಪಸ ಸಾಹುಕಾರ, ರಾಯಪ್ಪ ಚಲವಾದಿ, ಸುರೇಶ ಅವಧಿ, ಹೊನಕೇರೆಪ್ಪ ತೆಲಗಿ, ಕಲ್ಲಪ್ಪ ಮಟ್ಯಾಳ, ಶಿವಪ್ಪ ಮುರನಾಳ, ಸೋಮನಿಂಗ ಹಡಪದ, ಗುರಪ್ಪ ನಾಗೋಡ, ಸಾಹೇಬಗೌಡ ಬಿರಾದಾರ, ಹೊನ್ನಪ್ಪ ತೋಟದ, ಗಣೇಶ ರಾಠೊಡ, ಎಚ್‌ .ಜಿ.ಮಕಾನದಾರ, ಖಾಜೇಸಾಬ ಕೊಲ್ಹಾರ, ವಿಠೊಭಾ ಸಾಳುಂಕೆ ಇದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.