KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು
Team Udayavani, Mar 18, 2024, 6:22 PM IST
ಮುದ್ದೇಬಿಹಾಳ: ನಿರ್ಮಾಣ ಹಂತದ ಕೆಪಿಟಿಸಿಎಲ್ ನ 110 ಕೆವಿ ವಿದ್ಯುತ್ ಸ್ಟೇಷನ್ ಕಂಪೌಂಡ್ ಮೈಮೇಲೆ ಬಿದ್ದು ಕಾರ್ಮಿಕ ವಿಜಯನಗರ ಜಿಲ್ಲೆ ಹೊಸಪೇಟೆ ಮೂಲದ ಬಸಲಿಂಗಯ್ಯ ಶಾಸ್ತ್ರಿ (40) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಆಲಮಟ್ಟಿ ರಸ್ತೆ ಪಕ್ಕದ ಜಟ್ಟಗಿ ಗ್ರಾಮವ್ಯಾಪ್ತಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಈತ ವೆಲ್ಡಿಂಗ್ ಕೆಲಸ ಮಾಡುವವನಾಗಿದ್ದು ಕಂಪೌಂಡ್ ಕೆಳಗೆ ನೆರಳಿಗೆ ವಿಶ್ರಾಂತಿ ಪಡೆಯಲು ಕುಳಿತಾಗ ಕಳಪೆ ಗುಣಮಟ್ಟದ ಮತ್ತು ಕಲ್ಲುಗಳಿಂದ ನಿರ್ಮಿಸಲ್ಪಟ್ಟ ಬೃಹತ್ ಕಂಪೌಂಡ್ ಗೋಡೆ ಮೈಮೇಲೆ ಬಿದ್ದಿದೆ. ನೋಡಿವಷ್ಟರಲ್ಲೇ ಕಲ್ಲುಗಳ ನಡುವೆ ಸಿಲುಕಿದ್ದ ಈತನನ್ನು ಕಲ್ಲು ಸರಿಸಿ ಹೊರಗೆ ತೆಗೆಯುವಷ್ಟರಲ್ಲಿ ಮೃತಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.
ಸ್ಟೇಷನ್ ಕಾಮಗಾರಿಯನ್ನು ಬೆಂಗಳೂರು ಮೂಲದ ಇಲೆಕ್ಟ್ರಿಕಲ್ ಕನ್ಸಟ್ರಕ್ಷನ್ ಕಂಪನಿಯೊಂದು ಗುತ್ತಿಗೆ ಹಿಡಿದಿದ್ದು ಕಾಮಗಾರಿ ನಿರ್ವಹಿಸಲು ಹೊಸಪೇಟೆಯಿಂದ ಕಾರ್ಮಿಕರನ್ನು ಕರೆಸಲಾಗಿತ್ತು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೆಪಿಟಿಸಿಎಲ್ ನ ಕಾರ್ಯಪಾಲಕ ಅಭಿಯಂತರೆ ಸುನಂದಾ ಜಂಬಗಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಧಾವಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ