Politics: ಬಿ.ಆರ್.ಪಾಟೀಲ ಪತ್ರಕ್ಕೆ ಮುಖ್ಯಮಂತ್ರಿಗಳಿಂದಲೇ ಅಂತಿಮ ತೀರ್ಮಾನ: ಕೃಷ್ಣ ಭೈರೇಗೌಡ
ನನಗೆ ಸಂಬಂಧ ಇಲ್ಲದ ಇಲಾಖೆ, ಅನಗತ್ಯವಾಗಿ ಪ್ರತಿಕ್ರಿಯಿಸಿ ವಿವಾದ ಮಾಡಲಾರೆ
Team Udayavani, Nov 29, 2023, 12:52 PM IST
ವಿಜಯಪುರ: ಸಚಿವರ ಹೇಳಿಕೆಯಿಂದ ನನಗೆ ಅಪಮಾನವಾಗಿದೆ. ನನ್ನ ಮೇಲಿನ ಆರೋಪದ ಕುರಿತು ತನಿಖೆಯಾಗಿ, ಆರೋಪ ಮುಕ್ತವಾಗುವವರೆಗೂ
ಸದನಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ ಹಿರಿಯ ಶಾಸಕ ಬಿ.ಆರ್.ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ಮುಖ್ಯಮಂತ್ರಿಗಳೇ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯಿಸಿದ್ದಾರೆ.
ಬುಧವಾರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಇಲ್ಲದೇ ಭೀಕರ ಬರ ಆವತಿಸಿದೆ. ಕಂದಾಯ ಇಲಾಖೆಯಲ್ಲಿ ಜನರ ಹತ್ತು ಹಲವು ಸಮಸ್ಯಗಳಿವೆ. ಪ್ರತಿ ಜಿಲ್ಲೆಗೂ ಹೋಗಿ ಆಯಾ ಜಿಲ್ಲೆಯ ಸಮಸ್ಯೆ ಆಲಿಸಿ, ಪರಿಹಾರ ಕಾರ್ಯಕ್ಕೆ ಮುಂದಾಗಬೇಕಿದೆ. ಸದ್ಯ ವಿಜಯಪುರ ಜಿಲ್ಲೆಯ ಜನರ ಸಮಸ್ಯೆ ಇದ್ದರೆ ಮಾತ್ರ ತಮ್ಮೊಂದಿಗೆ ಚರ್ಚಿಸುತ್ತೇನೆ. ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ ಎಂದು ಪತ್ರಕರ್ತರು ಕೇಳಿದ ಬಿ.ಆರ್.ಪಾಟೀಲ ಪತ್ರದ ಕುರಿತಾದ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲು ನಿರಾಕರಿಸಿದರು.
ಈ ಕುರಿತು ನಾನು ಸದನದಲ್ಲಿ ಉತ್ತರಿಸಿರುವ ವಿಷಯದ ಕುರಿತು ಮಾಹಿತಿ ನೀಡುತ್ತೇನೆ. ಸದನದಲ್ಲಿ ಏನು ಹೇಳಿದ್ದೇನೆ, ಏನು ಬಿಟ್ಟಿದ್ದೇನೆ ಎಂಬುದನ್ನು ನೀವೇ ತೀರ್ಮಾನಿಸಿ ಎಂದು ಪತ್ರಕರ್ತರಿಗೆ ಹೇಳಿದ ಕಂದಾಯ ಸಚಿವರು, ಅಂತಿಮವಾಗಿ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತೀರ್ಮಾನಿಸಲಿದ್ದಾರೆ ಎಂದರು.
ಸಚಿವರ ಹೇಳಿಕೆಯಿಂದ ನನಗೆ ಅವಮಾನವಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ ಹೇಳಿರುವ ಬಗ್ಗೆ ಉಂದು ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ. ಸದ್ಯ ವಿಜಯಪುರ ಜಿಲ್ಲೆಯ ಪ್ರಗತಿ ಪರಿಶೀಲನಾ ಪ್ರವಾಸದಲ್ಲಿರುವ ನಾನು, ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ ಎಂದರು.
ಭೂ ಸೇನಾ ನಿಗಮದಲ್ಲಿ ಹಣ ಇಲ್ಲ ಎಂಬ ವಿಚಾರದ ಕುರಿತಾಗಿ ಸದನದಲ್ಲಿನ ಮಾಹಿತಿಯ ಪ್ರತಿಯನ್ನೇ ಪತ್ರಕರ್ತರಿಗೆ ನೀಡುತ್ತೇನೆ, ನೀವೆ ನೋಡಿ ತಿಳಿಯಿರಿ ಎಂದರು.
ಇಷ್ಟಕ್ಕೂ ಸದರಿ ಇಲಾಖೆ ನನಗೆ ಬರುವುದೇ ಇಲ್ಲ. ಶಾಸಕ ಬಿ.ಆರ್. ಪಾಟೀಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ತನಿಖೆ ಮಾಡುವುದು ಬಿಡುವುದು ಆ ಇಲಾಖೆಗೆ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟದ್ದು. ನನಗೆ ಸಂಬಂಧ ಇಲ್ಲದ ಇಲಾಖೆ
ತನಿಖೆ ಕುರಿತು ನಾನು ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಇದನ್ನೂ ಓದಿ: DKS: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಡಿಕೆಶಿ ಮೇಲ್ಮನವಿ ವಾಪಸ್ ಗೆ ಹೈಕೋರ್ಟ್ ಅನುಮತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ