ಕುಮಾರಣ್ಣನಿಂದ ಆಂಧ್ರಕ್ಕೆ ಕೃಷ್ಣೆ ನೀರು


Team Udayavani, Feb 10, 2019, 11:05 AM IST

vij-1.jpg

ವಿಜಯಪುರ: ಸಮಗ್ರ ಕರ್ನಾಟಕ ಕುರಿತು ಮಾತನಾಡುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಬಜೆಟ್‌ನಲ್ಲಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಯೋಜನೆ ನಿರ್ದಿಷ್ಟ ಅನುದಾನ ನೀಡದೇ ಮಲತಾಯಿ ಧೋರಣೆ ಅನುಸರಿಸಿದ್ದಾರೆ. ಜಿಲ್ಲೆಗೆ ತುರ್ತು ಅಗತ್ಯ ಇರುವ ನೀರಾವರಿಗೆ ಆದ್ಯತೆ ನೀಡದ ಪರಿಣಾಮ ರಾಜ್ಯದ ಪಾಲಿನ ಕೃಷ್ಣೆ ನೀರು ಆಂಧ್ರಪ್ರದೇಶದ ಪಾಲಾಗುತ್ತಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಸೇರದಂತೆ ಉತ್ತರ ಕರ್ನಾಟಕಕ್ಕೆ ಕೃಷ್ಣೆ ಜೀವ ನದಿ ಎನಿಸಿದೆ. ಕೃಷ್ಣಾ ಕೊಳ್ಳದಲ್ಲಿ ರಾಜ್ಯದ ಪಾಲಿನ 130 ಟಿಎಂಸಿ ನೀರು ಬಳಸಿಕೊಂಡು ನೀರಾವರಿ ಮಾಡಿಕೊಳ್ಳಲು ಯಾವುದೇ ತಕರಾರುಗಳಿಲ್ಲ. ಆದರೆ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ತುರ್ತಾಗಿ ಆಗಬೇಕಿರುವುದು ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಗೇಟ್‌ಗಳನ್ನು 519 ಮೀ.ನಿಂದ 524 ಮೀ.ವರೆಗೆ ಎತ್ತರಿಸುವ ಕೆಲಸ ತುರ್ತಾಗಿ ಆಗಬೇಕಿದೆ. ಇದಾಗದ ಹೊರತು ನೀರಾವರಿ ಕೇವಲ ಭಾಷಣದಲ್ಲಿ ಸಾಧನೆ ಅಗಲಿದೆ. ರಾಜ್ಯದ ಪಾಲಿನ ನೀರು ಮಾತ್ರ ಆಂಧ್ರಕ್ಕೆ ಹರಿಯುತ್ತಿದೆ.

ಜಿಲ್ಲೆಯವರೇ ಆದ ಡಾ| ಎಂ.ಬಿ. ಪಾಟೀಲ ಜಲ ಸಂಪನ್ಮೂಲ ಸಚಿವರಾಗಿದ್ದ ವೇಳೆ ರಾಜ್ಯದ ಪಾಲಿನ 130 ಟಿಎಂಸಿ ಅಡಿ ನೀರಿನಲ್ಲಿ ವಿಜಯಪುರ ಜಿಲ್ಲೆಯಲ್ಲೇ ಸುಮಾರು 80 ಟಿಎಂಸಿ ನೀರಿನ ಯೋಜನೆಗಳು ತಲೆ ಎತ್ತಿದ್ದವು. ರಾಜಕೀಯ ಕಾರಣಕ್ಕೆ ಏನೆಲ್ಲ ಟೀಕೆಗಳನ್ನು ಎದುರಿಸಿದರೂ ಎಂ.ಬಿ. ಪಾಟೀಲ ಅವರ ಒತ್ತಡದ ಪರಿಣಾಮ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿತ್ತು.

ಆದರೆ ಇದೀಗ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವ ಎಲ್ಲ ಯೋಜನೆಗಳೂ ಕಳೆದ ಒಂದು ವರ್ಷದಿಂದ ಸಂಪೂರ್ಣ ಸ್ಥಗಿತವಾಗಿವೆ. ಮುಳವಾಡ, ಚಿಮ್ಮಲಗಿ, ಗುತ್ತಿ ಬಸವಣ್ಣ ಹಳೆ ಯೋಜನೆಗಳು ಮುಂದುವರಿದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಇದಲ್ಲದೇ ಎಂ.ಬಿ. ಪಾಟೀಲ ಅವರ ಅವಧಿಯಲ್ಲಿ ಬೂದಿಹಾಳ-ಪೀರಾಪುರ, ಚಡಚಣ, ನಗರಬೆಟ್ಟ, ತುಬಚಿ-ಬಬಲೇಶ್ವರ ಹೀಗೆ ಹಲವು ಯೋಜನೆಗಳು ಘೋಷಣೆಯಾಗಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಇದೀಗ ನಿರ್ದಿಷ್ಟ ಅನುದಾನವಿಲ್ಲದೇ ಜಿಲ್ಲೆಯ ನೀರಾವರಿ ಯೋಜನೆಗಳೆಲ್ಲ ಐತಿಹಾಸಿಕ ಬಾರಾಕಮಾನ್‌ ಮಾದರಿಯಲ್ಲಿ ದುಸ್ಥಿತಿ ಸಾರುತ್ತಿವೆ.

ಇಷ್ಟಕ್ಕೂ ಜಿಲ್ಲೆಯ ನೀರಾವರಿ ಯೋಜನೆಗಳ ಕಾಲುವೆ ಕಾಮಗಾರಿ ತಕ್ಷಣ ಮುಗಿಸಲು ಕ್ರಮ ಕೈಗೊಂಡರೂ ರೈತರ ಹೊಲಕ್ಕೆ ನೀರು ಹರಿಸಲು ಸಾಧ್ಯವಿಲ್ಲ. ಏಕೆಂದರೆ ಶಾಸ್ತ್ರಿ ಜಲಾಶಯದ ಗೇಟ್‌ಗಳನ್ನು ಎತ್ತರಿಸಿದರೆ ಮಾತ್ರ ರಾಜ್ಯದ ಪಾಲಿನ 130 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಳ್ಳಲು ಸಾಧ್ಯ. ಆಗ ಮಾತ್ರ ರೈತರ ಕನಸು ನನಸು ಮಾಡಲು ಸಾಧ್ಯ. ಇದರ ಹೊರತಾಗಿ ಉತ್ತರ ಕರ್ನಾಟಕದ ರೈತರ ಜಮೀನನ್ನು ಸಮಗ್ರ ನೀರಾವರಿ ಮಾಡಲು ಸಾಧ್ಯವೇ ಇಲ್ಲ.

ಇತ್ತ ಜಲಾಶಯದ ಗೇಟ್ ಎತ್ತರದಿಂದ 20 ಹಳ್ಳಿಗಳು ಮತ್ತೆ ಮುಳುಗಲಿವೆ. ಮುಳಗಡೆಯಾಗಲಿರುವ ಈ ಹಳ್ಳಿಗಳ ಸಂತ್ರಸ್ತರಿಗೆ ಪುನರ್ವಸತಿ-ಪುನರ್‌ ನಿರ್ಮಾಣ ಕಾರ್ಯ ಆಗಬೇಕು. ಇದಾದ ಬಳಿಕ ಗೇಟ್ ಅಳವಡಿಸಲು ಸಾಧ್ಯವಿದೆ. ಗೇಟ್ ಅಳವಡಿಸಿದರೆ ಮಾತ್ರವೇ ವಿಜಯಪುರ ಜಿಲ್ಲೆ ಪ್ರಮುಖ 9 ಏತ ನೀರಾವರಿ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಲ್ಲಿ ನಿರ್ಮಾಣಗೊಂಡಿರುವ ಕಾಲುವೆಗಳಿಗೆ ನೀರು ಹರಿಸಲು ಸಾಧ್ಯವಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಪರಿಹಾರ, ಕಾಲುವೆ ನಿರ್ಮಾಣ ಸೇರಿದಂತೆ ಒಟ್ಟು ಯೋಜನೆ ಪೂರ್ಣಗೊಳ್ಳಲು 1 ಲಕ್ಷ ಕೋಟಿ ರೂ. ಹಣಬೇಕು. ಕನಿಷ್ಠ ಪ್ರಸಕ್ತ ವರ್ಷ ಸುಮಾರು 35 ಸಾವಿರ ಕೋಟಿ ರೂ. ನೀಡಿದ್ದರೆ ಭೂಸ್ವಾಧೀನ-ಪುನರ್ವಸತಿ ಕಾರ್ಯಕ್ಕೆ ಚಾಲನೆ ನೀಡಲು ಸಾಧ್ಯವಿತ್ತು. ಆದರೆ ರಾಜ್ಯದ ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ 17 ಸಾವಿರ ಕೋಟಿ ರೂ. ಮೀಸಲಿರಿಸಿದೆ. ಇದರಲ್ಲೇ ಕಾವೇರಿ ಕೊಳ್ಳದ ಯೋಜನೆಗಳನ್ನು ಘೋಷಿಸಿಕೊಂಡಿದೆ. ವಿಜಯಪುರ ಜಿಲ್ಲೆಯ ಪ್ರಮುಖ ಯೋಜನೆಗಳೇ ಅರ್ಧಕ್ಕೆ ನಿಂತರುವಾಗ ಕುಮಾರಸ್ವಾಮಿ ಅವರು ರೇವಣಸಿದ್ದೇಶ್ವರ ಏತ ನೀರಾವರಿ ಹೆಸರಿನಲ್ಲಿ ಮತ್ತೂಂದು ಯೋಜನೆ ಘೋಷಿಸಿರುವುದು ರೈತರನ್ನು ನಗುವಂತೆ ಮಾಡಿದೆ.

ಜಿಲ್ಲೆಯ ಹೆಸರು ಉಲ್ಲೇಖಕ್ಕೆ ಎಂಬಂತೆ ಜಿಲ್ಲೆಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದರೂ, ಕಳೆದ ಬಜೆಟ್‌ನಲ್ಲಿ ತಾವೇ ಘೋಷಿಸಿದ್ದ ಬಹುತೇಕ ಯೋಜನೆಗಳಿಗೆ ಕುಮಾರಸ್ವಾಮಿ ಅನುದಾನದ ನೀಡಿಲ್ಲ. ಈಗ ಘೋಷಿತ ಯೋಜನೆಗಳಿಗೆ ನೀಡುವ ನಿರೀಕ್ಷೆ ಮಾತ್ರ ಮಾಡಬದುದು, ಖಚಿತವಾಗಿಲ್ಲ. ಇಂಥ ಸ್ಥಿತಿಯಲ್ಲಿ ನಿರ್ದಿಷ್ಟ ಅನುದಾನವಿಲ್ಲದೇ ಕೃಷ್ಣೆಯ ಮಕ್ಕಳು ಮತ್ತೂಮ್ಮೆ ಕಣ್ಣೀರು ಹಾಕುವಂತಾಗಿದೆ. ಪರಿಣಾಮ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವ ವಿಧಾನ ಹೇಗೆ ಎಂಬುದನ್ನು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಹಾಗೂ ಜಿಲ್ಲೆಯ ಆಡಳಿತ ಪಕ್ಷದ ಮೂವರು ಸಚಿವರು, ಇಬ್ಬರು ಶಾಸಕರು ಉತ್ತರಿಸಬೇಕಿದೆ.

ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.