Vijayapura; ಸನಾತನ ಧರ್ಮದ ಬಗ್ಗೆ ಮಾತನಾಡಿದವರು ಉದ್ಧಾರ ಆಗಿಲ್ಲ: ಕೆ.ಎಸ್ ಈಶ್ವರಪ್ಪ


Team Udayavani, Sep 7, 2023, 3:36 PM IST

ಕೆ.ಎಸ್ ಈಶ್ವರಪ್ಪ

ವಿಜಯಪುರ : ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದು, ಯಾರವನು ಉದಯನಿಧಿ ಸ್ಟಾಲಿನ್, ಅವನೊಬ್ಬ ಅಯೋಗ್ಯ, ಹುಚ್ಚ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ. ಸಾವಿರಾರು ವರ್ಷಗಳ ಇತಿಹಾಸ ಇರುವ ಸನತನ ಧರ್ಮದ ಬಗ್ಗೆ ಮಾತನಾಡಿದವರೆಲ್ಲ ಉದ್ಧಾರವಾಗಿದ್ದಾರಾ ಎಂದು ಪ್ರಶ್ನಿಸಿದರು.

ಸನಾತನ ಧರ್ಮ ನಾಶಕ್ಕೆ ಯತ್ನಿಸಿದ ಯಾರೂ ಉಳಿದಿಲ್ಲ. ಇಷ್ಟಕ್ಕೂ ಉದಯನಿಧಿ ಅಪ್ಪ, ಅಜ್ಜನಿಂದಲೇ ಸನಾತನ ಧರ್ಮದ ವಿರುದ್ಧ ಏನೂ ಮಾಡಲಾಗಿಲ್ಲ. ಇನ್ನು ಈ ಬಚ್ಛಾ ಏನು ಮಾಡಲು ಸಾಧ್ಯ ಕುಟುಕಿದರು.

ಇವರಿಗೆ ನಿಜಕ್ಕೂ ತಾಕತ್ತಿದ್ದರೆ ಮುಸ್ಲಿಂ ಧರ್ಮದ ಬಗ್ಗೆ ಹೇಳಿಕೆ ನೀಡಿ ಬದುಕುಳಿಯಲಿ ನೋಡೋಣ. ಇವರಿಗೆ ಅವರ ಧರ್ಮದ ಬಗ್ಗೆ ಮಾತನಾಡುವ ಶಕ್ತಿ ಇಲ್ಲದೇ ಪದೇ ಪದೇ ಪದೇ ಶಾಂತ ಪ್ರಿಯರೆಂಬ ಕಾರಣಕ್ಕೆ ಹಿಂದೂಗಳ ವಿರುದ್ಧ ಮಾತನಾಡುತ್ತಾರೆ ಎಂದು ಹರಿಹಾಯ್ದರು.

ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರಿಗೆ ತಮ್ಮ ತಾತ-ಮುತ್ತಾರ ಬಗ್ಗೆಯೇ ಗೊತ್ತಿಲ್ಲ, ತಮ್ಮದೇ ಕುಟುಂಬ ನೂರು-ಇನ್ನೂರು ವರ್ಷದ ಹಿರಿಯರ ಬಗ್ಗೆ ತಿಳಿಯದ ಇವರಿಗೆ ಇನ್ನು ಸನಾತನ ಧರ್ಮದ ಬಗ್ಗೆ ತಿಳಿದಿರಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದರು.

ನಾನು ಹಿಂದೂ ಅಲ್ಲ ತಂದೆ-ತಾಯಿಗೆ ಹುಟ್ಟಿದ್ದೇನೆ ಎಂದು ಚಿತ್ರನಟ ಪ್ರಕಾಶರಾಜ್ ಹೇಳಿಕೆಗೆ ಕೆಂಡ ಕಾರಿದ ಈಶ್ವರಪ್ಪ, ಈ ವ್ಯಕ್ತಿ ತನ್ನ ಮೂಲದ ಬಗ್ಗೆ ಮೊದಲು ಅರಿಯಲಿ ಎಂದು ಸಿಡುಕಿದರು. ಭಾರತ ಇಡೀ ವಿಶ್ವಕ್ಕೆ ಶಾಂತಿಯ ಧರ್ಮ ನೀಡಿದೆ. ಅದನ್ನು ಹೇಳುವ ಸೌಜನ್ಯ ಇಂಥವರಲ್ಲಿ ಕಂಡುಬರುವುದಿಲ್ಲ ಎಂದು ಕಿಡಿಕಾರಿದರು.

ಸರ್ವ ಜನಾಂಗದ ಶಾಂತಿಯ ತೋಟ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿಕೊಳ್ಳುವ ಕಾಂಗ್ರೆಸ್, ಮತ್ತೊಂದೆಡೆ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಮುಸ್ಲಿಮರನ್ನು ಕೆಣಕಲಿ ನೋಡೋಣ, ಸನಾತನ ಧರ್ಮದ ಬಗ್ಗೆ ಮಾತನಾಡುವಾಗ ಮೈಮೇಲೆ ಜ್ಞಾನ ಇರಿಸಿಕೊಂಡು ಮಾತನಾಡಲಿ ಎಂದು ಎಚ್ಚರಿಸಿದರು.

ಕುರಾನ್ ಹುಟ್ಟಿದ್ದು ಯಾವಾಗ, ಮುಸಲ್ಮಾನರು ಎಲ್ಲಿ ಹುಟ್ಟಿದರು, ಯಾವಾಗ ಹುಟ್ಟಿದರು ಎಂದು ಪ್ರಶ್ನಿಸಿ ಇವರು ಬದುಕುಳಿದಾರೆಯೇ ಎಂದ ಈಶ್ವರಪ್ಪ, ಹಾಗಂತ ಮುಸ್ಲಿಂ ಧರ್ಮದವರಿಗೆ ನೋವು, ಅಪಮಾನ ಮಾಡಿ ಎಂಬುದು ನನ್ನ ಹೇಳಿಕೆ ಉದ್ದೇಶವಲ್ಲ ಎಂದು ಸಮಜಾಯಿಷಿ ನೀಡಿದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.