ಕುಮಾರ ಬಜೆಟ್‌ಗೆ ಅಪಸ್ವರ


Team Udayavani, Jul 6, 2018, 2:23 PM IST

kumaraswamy-2.jpg

ವಿಜಯಪುರ: ಸಿ.ಎಂ. ಕುಮಾರಸ್ವಾಮಿ ವಿಜಯಪುರ ಜಿಲ್ಲೆಗೆ ಒಂದಷ್ಟು ಕೊಡುಗೆ ನೀಡಿದ್ದರೂ ಉತ್ತರ ಕರ್ನಾಟಕವನ್ನು
ಕಡೆಗಣಿಸಿದ ಬಜೆಟ್‌ ಮಂಡಿಸಿದ್ದಾರೆ ಎಂದು ಆಡಳಿತ ಮಿತ್ರ ಪಕ್ಷಗಳಿಂದಲೇ ಭಾರಿ ಟೀಕೆಗೆ ಗುರಿಯಾಗುತ್ತಿದ್ದಾರೆ. ರಾಜ್ಯದ ಬಜೆಟ್‌ಗೆ ಜಿಲ್ಲೆಯಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿದೆ.

ಸಿದ್ದರಾಮಯ್ಯ ಸರ್ಕಾರ ಘೋಷಿಸಿದ್ದ ಕಾರ್ಯಕ್ರಮಗಳು ಮುಂದುವರಿಸುವುದಾಗಿ ಹೇಳಿದ್ದರೂ ಕಳೆದ ಫೆಬ್ರವರಿ ಬಜೆಟ್‌ನಲ್ಲಿ ನೀಡಿದ್ದ ಶತಮಾನ ಕಂಡಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಶತಮಾನ ಭವನ ನಿರ್ಮಾಣಕ್ಕೆ ಸರ್ಕಾರ ಹಾಗೂ ಅಫೆಕ್ಸ್‌ ಬ್ಯಾಂಕ್‌ 5 ಕೋಟಿ ರೂ. ಸಹಾಯ ಧನ ಘೋಷಣೆ ಅನುಷ್ಠಾನಗೊಳ್ಳಲಿವೆಯೆ
ಎಂಬುದು ಖಚಿತವಾಗಿಲ್ಲ.

ಇಂಡಿ ತಾಲೂಕಿನ ರೋಡಗಿ ಕ್ರಾಸ್‌, ತಾಳಿಕೋಟೆ ಬಳಿ ವಿದ್ಯುತ್‌ ಉಪ ಕೇಂದ್ರ ಸ್ಥಾಪನೆ, ಮುದ್ದೇಬಿಹಾಳದಲ್ಲಿ
ಕೃಷಿ ಸಂಶೋಧನಾ ಕೇಂದ್ರ, ಕುರಿಗಾರರ ಅನುಕೂಲಕ್ಕೆ ಕುರಿ ರೋಗ ತಪಾಷಣಾ ಕೇಂದ್ರ, ಕರ್ನಾಟಕ ನಗರ ನೀರು
ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಮುದ್ದೇಬಿಹಾಳದಲ್ಲಿ ಒಳಚರಂಡಿ ಯೋಜನೆಗಳ ಗತಿ ಏನು
ಎಂಬುದು ಸ್ಪಷ್ಟವಾಗಿಲ್ಲ. 

ಇದೀಗ ಪ್ರಸಕ್ತ ಬಜೆಟ್‌ನಲ್ಲಿ ಕುಮಾರಸ್ವಾಮಿ ಅವರು ಹೃದ್ರೋಗ ಚಿಕಿತ್ಸೆಗಾಗಿ ವಿಜಯಪುರ ನಗರದಲ್ಲಿರುವ
ಜಿಲ್ಲಾ ಸರ್ಕಾರಿ ಕಾಡಿಯಾಲಜಿ, ಕ್ಯಾನ್ಸರ್‌ ಚಿಕಿತ್ಸೆಗೆ ಅಂಕಾಲಜಿ ಹಾಗೂ ಟ್ರಾಮಾ ಆರೋಗ್ಯ ಸೇವಾ ಘಟಕ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ.

ಇದಲ್ಲದೇ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಹಂಪಿ, ಬೇಲೂರ ಜೊತೆಗೆ ವಿಜಯಪುರ ಜಿಲ್ಲೆಗೂ ಪ್ರವಾಸೋದ್ಯಮ
ಅಭಿವೃದ್ಧಿಗೆ ಕೌಶಲ ತರಬೇತಿ ಆರಂಭಿಸಲು ತಲಾ 60 ಲಕ್ಷ ರೂ ನೀಡುವ, ಪರಿಸರ ಹಾಗೂ ಆಹಾರ ಶುದ್ಧತೆ ಸರ್ಕಾರಿ
ಸಂಸ್ಥೆಗಳೊಂದಿಗೆ 20 ಕೋಟಿ ರೂ. ವೆಚ್ಚದ ಯೋಜನೆ ಘೋಷಣೆಯಾಗಿವೆ.

ಆದರೆ ವಿಜಯಪುರ ಜಿಲ್ಲೆಯ ಜನರಿಗೆ ಕುಮಾರಸ್ವಾಮಿ ಬಜೆಟ್‌ ನಿರೀಕ್ಷೆ ಲಾಲಿಪಾಪ್‌ ನೀಡಿ ಸುಮ್ಮನಾಗಿಸುವ ಹುನ್ನಾರ ಮಾಡಿದ್ದು, ಬಹು ನಿರೀಕ್ಷೆಯಿಂದ ಕಾದಿದ್ದ ಜನತೆಗೆ ಭರವಸೆ ಹುಸಿಗೊಳಿಸಿದ್ದಾರೆಂದು ಅಪಸ್ವರದ ಮಾತುಗಳು ಕೇಳಿ ಬಂದಿವೆ. ಕೃಷಿ ತೋಟಗಾರಿಕೆಯಲ್ಲಿ ಇಸ್ರೇಲ್‌ ಮಾದರಿ ಯೋಜನೆ ಘೋಷಣೆ ಆಗಿದ್ದರೂ
ದ್ರಾಕ್ಷಿ ತವರು, ಲಿಂಬೆ ನಾಡು ಎಂದೆಲ್ಲ ಕೀರ್ತಿ ಪಡೆದಿರುವ ವಿಜಯಪುರಕ್ಕೆ ಆದ್ಯತೆ ನೀಡಿಲ್ಲ. ವೈನ್‌ ಪಾರ್ಕ್‌, ವಿಮಾನ ನಿಲ್ದಾಣ ಕುರಿತು ಚಕಾರ ಎತ್ತಿಲ್ಲ ಎಂದು ಆಕ್ಷೇಪ ಎತ್ತಿದ್ದಾರೆ.
 
ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ ಪಕ್ಷಕ್ಕೆ ಜನ ಮನ್ನಣೆ ನೀಡಿಲ್ಲ ಎಂಬ ಸೇಡಿನಿಂದ ಬಜೆಟ್‌ನಲ್ಲಿ ಈ ಭಾಗದ ಜನರಿಗೆ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಎಂಬುದನ್ನು ಮರೆತು ಹಾಸನ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ತಮ್ಮ ಮಿತಿ ಹಾಕಿಕೊಂಡಿದ್ದಾರೆ. ಪ್ರಾದೇಶಿಕ ಅಸಮಾನತೆಗೆ ಸದರಿ ಬಜೆಟ್‌ ಪ್ರಚೋದನೆ ನೀಡಿದ್ದು, ರಾಜ್ಯದ ಜನರಲ್ಲಿ ಉತ್ತರ-ದಕ್ಷಿಣ ಎಂಬ ತಾರತಮ್ಯದ ಕಂದಕ ಹೆಚ್ಚಿಸಿದೆ ಎಂದು ಕಿಡಿ ಕಾರುತ್ತಿದ್ದಾರೆ.

ಕೃಷ್ಣಾ-ಕಾವೇರಿ ರಾಜ್ಯದ ಎರಡು ಕಣ್ಣುಗಳಿದ್ದಂತೆ ಎನ್ನುವ ಕುಮಾರಸ್ವಾಮಿ, ಕಾವೇರಿ ನದಿಯ ಕೃಷ್ಣರಾಜ ಜಲಾಶಯದ ಬೃಂದಾವನ ಗಾರ್ಡನ್‌ಗೆ ಅಮೆರಿಕಾದ ಡಿಸ್ನಿ ಗಾರ್ಡನ್‌ ಮಾದರಿಯಲ್ಲಿ ಅಭಿವೃದ್ಧಿಗೆ 5 ಕೋಟಿ ರೂ. ಕೊಡುಗೆ ನೀಡಿದ್ದಾರೆ. ಅರ್ಧ ಕರ್ನಾಟಕಕ್ಕೆ ಜೀವನದಿಯಾಗಿರುವ ಕೃಷ್ಣೆಯ ಮಡಿಲಲ್ಲಿರುವ ಆಲಮಟ್ಟಿಯ ಲಾಲ್‌
ಬಹಾದ್ದೂರ ಶಾಸ್ತ್ರಿ ಜಲಾಶಯ ಹಾಗೂ ನಾರಾಯಣಪುರದ ಬಸವಸಾಗರ ಜಲಾಶಯಗಳ ಗಾರ್ಡನ್‌ಗಳು ಇದೇ
ರಾಜ್ಯದಲ್ಲಿವೆ ಎಂಬುದನ್ನು ಮರೆತಿದ್ದಾರೆ ಎಂದು ಛೇಡಿಸಿದ್ದಾರೆ.

ಕುಮಾರಸ್ವಾಮಿ ಸಮಗ್ರ ಕರ್ನಾಟಕದ ಮುಖ್ಯಮಂತ್ರಿ ಎಂಬುದನ್ನು ಮರೆತಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇರಿಸಿಕೊಂಡು ಜೆಡಿಎಸ್‌ ಪ್ರಾಬಲ್ಯ ಇರುವ ಮೈಸೂರು ಭಾಗಕ್ಕೆ ಆದ್ಯತೆ ನೀಡಿದ್ದಾರೆ. ಈ ಬಜೆಟ್‌ನನಲ್ಲಿ
ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯವನ್ನು ಈ ಭಾಗ ಎಲ್ಲ ಪಕ್ಷಗಳ ಶಾಸಕರು ಪಕ್ಷಬೇಧ ಮರೆದು ಪ್ರಶ್ನಿಸಬೇಕು. 
 ಚಂದ್ರಶೇಖರ ಕವಟಗಿ, ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯರು

ರಾಜ್ಯದ ಅಪವಿತ್ರ ಸಮ್ಮಿಶ್ರ ಸರ್ಕಾರದ ಸಿ.ಎಂ. ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯದಲ್ಲಿ ನಾಲ್ಕೇ ಜಿಲ್ಲೆಗಳಿವೆ ಎಂದು ತಿಳಿದಿದ್ದಾರೆ ಎಂಬುದು ರಾಜ್ಯ ಬಜೆಟ್‌ ಸ್ಪಷ್ಟಪಡಿಸಿದೆ. ಸ್ಪಷ್ಟತೆ ಇಲ್ಲದ ರೈತರ ಸಾಲಮನ್ನಾ ಘೋಷಿಸಿ, ಇಂಧನ ಬೆಲೆ ಏರಿಕೆ ಮಾಡಿರುವುದು ರಾಜ್ಯ ಸರ್ಕಾರದ ಗೋಸುಂಬೆತವನ್ನು ಬಯಲು ಮಾಡಿದೆ.
 ಕೃಷ್ಣಾ ಗುನ್ನಾಳಕರ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ 

ಸಿ.ಎಂ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ ಜನವಿರೋಧಿ  ಹಾಗೂ ಅಭಿವೃದ್ಧಿ ಹೀನ ಬಜೆಟ್‌. ಉತ್ತರ ಕರ್ನಾಟಕವನ್ನು ಕಡೆಗಣಿಸಿರುವ ರಾಜ್ಯ ಬಜೆಟ್‌ನಲ್ಲಿ ಈ ಭಾಗದ ಜನರಿಂದ ತೆರಿಗೆ ಪಡೆಯಲು ಮಾತ್ರ ಮುಂದಾಗಿದೆ. ಪೆಟ್ರೋಲ್‌ ಮೇಲೆ ಶೇ.30 ಸೆಸ್‌ ಏರಿಕೆ, ವಿದ್ಯುತ್‌ ಪ್ರತಿ ಯುನಿಟ್‌ಗೆ 20 ಪೈಸೆ ಹೆಚ್ಚಳದಿಂದ ಅಭಿವೃದ್ಧಿ ಹೀನ ಉತ್ತರ ಕರ್ನಾಟಕ ಜನರ ಮೇಲೆ ಹೊರೆಯಾಗಲಿದೆ. ತೆರಿಗೆ ಕಟ್ಟಲು ಬೇಕು, ಅಭಿವೃದ್ಧಿ ಅನುದಾನ ಪಡೆಯಲು ಇಲ್ಲ ಎಂಬ ಅನ್ಯಾಯ ಸಹಿಸಲು ಅಸಾಧ್ಯ. 
 ಅಪ್ಪಾಸಾಹೇಬ ಪಟ್ಟಣಶಟ್ಟಿ, ಮಾಜಿ ಸಚಿವ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.